Homeರಾಜಕೀಯಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

ಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

- Advertisement -
- Advertisement -

ತಮಿಳುನಾಡು ವಿಧಾನಸಭೆಯು ಗುರುವಾರ ವಿಶೇಷ ನಿರ್ಣಯವನ್ನು ಅಂಗೀಕರಿಸಿದ್ದು, ಸೇತುಸಮುದ್ರಂ ಯೋಜನೆಯನ್ನು ತಕ್ಷಣವೇ ಜಾರಿಗೆ ತರಲು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ. ನಿರ್ಣಯವನ್ನು ಬಿಜೆಪಿ ಸೇರಿದಂತೆ ವಿಧಾನಸಭೆಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವೆ ಹಡಗು ಮಾರ್ಗವನ್ನು ರಚಿಸಲು ಸೇತುಸಮುದ್ರಂ ಯೋಜನೆಯನ್ನು ಆರಂಭದಲ್ಲಿ 1860ರಲ್ಲಿ ರಚಿಸಲಾಗಿತ್ತು. ಮನ್ನಾರ್ ಕೊಲ್ಲಿ ಮತ್ತು ಪಾಕ್ ಜಲಸಂಧಿಯನ್ನು ಸಂಪರ್ಕಿಸುವ ಕಾಲುವೆ ರಚನೆ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ವಿಧಾನಸಭೆಯಲ್ಲಿ ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ನಿರ್ಣಯವನ್ನು ಅಂಗೀಕರಿಸಿದವು. ಆದರೆ ರಾಮಸೇತುವಿಗೆ ಹಾನಿಯಾಗದಂತೆ ಯೋಜನೆ ಅನುಷ್ಠಾನಗೊಳ್ಳುವವರೆಗೂ ಬೆಂಬಲಿಸುವುದಾಗಿ ಬಿಜೆಪಿ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಸೇತುಸಮುದ್ರಂ ಯೋಜನೆಯ ಅನುಷ್ಠಾನದಿಂದ ತಮಿಳುನಾಡಿನ ಆರ್ಥಿಕತೆಯನ್ನು ಸುಧಾರಿಸುತ್ತದೆ, ಅದರಲ್ಲೂ ವಿಶೇಷವಾಗಿ ದಕ್ಷಿಣ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲಿದೆ ಎಂದು ಸಿಎಂ ಸ್ಟಾಲಿನ್‌ ನಿರ್ಣಯವನ್ನು ಓದುವಾಗ ಪ್ರಸ್ತಾಪಿಸಿದ್ದಾರೆ.

ಒಕ್ಕೂಟ ಸರಕಾರ ಕೂಡಲೇ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. “ತಮಿಳುನಾಡು ಮತ್ತು ಭಾರತದ ಆರ್ಥಿಕ ಅಭಿವೃದ್ಧಿಯನ್ನು ಬಲಪಡಿಸಲು ಸೇತುಸಮುದ್ರಂ ಯೋಜನೆ ಅತ್ಯಗತ್ಯ. ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ಸರ್ಕಾರ ಎಲ್ಲ ಸಹಕಾರ ನೀಡಲಿದೆ” ಎಂದು ಸಿಎಂ ಹೇಳಿದ್ದಾರೆ.

“ಇದು ಡಿಎಂಕೆಯ ಮೊದಲ ಮುಖ್ಯಮಂತ್ರಿ ಸಿ.ಎನ್. ಅಣ್ಣಾದೊರೈ ಅವರ ಕನಸಿನ ಯೋಜನೆಯಾಗಿದೆ. ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಕೂಡ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಆಸಕ್ತಿ ವಹಿಸಿದ್ದರು. ಈ ಯೋಜನೆಯನ್ನು ನಾಲ್ಕನೇ ಪಂಚವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದ್ದು, ಆಗಿನ ಪ್ರಧಾನಿ ಜವಾಹರಲಾಲ್ ನೆಹರು ನೇತೃತ್ವದ ಸಚಿವ ಸಂಪುಟ ಸಭೆಯು ಅನುಮೋದಿಸಿದೆ” ಎಂದು ಸಿಎಂ ಹೇಳಿದ್ದಾರೆ.

1967ರಲ್ಲಿ ಮುಖ್ಯಮಂತ್ರಿಯಾದ ಅಣ್ಣಾದೊರೈ ತಮಿಳುನಾಡನ್ನು ಶ್ರೀಮಂತ ರಾಜ್ಯವನ್ನಾಗಿ ಮಾಡುವುದಾಗಿ ಹೇಳಿ ಈ ಯೋಜನೆಯನ್ನು ಜಾರಿಗೆ ತರಲು ಬಯಸಿದ್ದರು ಎಂದು ಅವರು ಹೇಳಿದ್ದಾರೆ.

2004ರಲ್ಲಿ ಡಿಎಂಕೆಯನ್ನು ಒಳಗೊಂಡ ಯುಪಿಎ ಸರ್ಕಾರ ಈ ಯೋಜನೆಗೆ 2,427 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. 50%ದಷ್ಟು ಕಾಮಗಾರಿ ಮುಗಿಯುವ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ ಅಡೆತಡೆಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿದರು.

“ದಿವಂಗತ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಆರಂಭದಲ್ಲಿ ಇದನ್ನು ಬೆಂಬಲಿಸಿದ್ದರು. ಆದರೆ ನಂತರ ತಮ್ಮ ನಿಲುವನ್ನು ಬದಲಾಯಿಸಿದರು ಮತ್ತು ಯೋಜನೆಯ ವಿರುದ್ಧ ಪ್ರಕರಣ ದಾಖಲಿಸಿದರು” ಎಂದು ಸ್ಟಾಲಿನ್ ಹೇಳಿದರು.

ಈ ಯೋಜನೆ ಜಾರಿಯಾದರೆ ತಮಿಳುನಾಡಿನ ಆರ್ಥಿಕತೆಯನ್ನು ಮೇಲೆತ್ತುವ ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಕ್ಷಿಣದ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

ಈ ನಡುವೆ ಮುಖ್ಯಮಂತ್ರಿ ರಾಮನನ್ನು ಕಾಲ್ಪನಿಕ ಪಾತ್ರ ಎಂಬ ಹೇಳಿಕೆಯನ್ನು ಎಐಎಡಿಎಂಕೆ ಮತ್ತು ಬಿಜೆಪಿ ವಿರೋಧಿಸಿದ್ದು, ಎಐಎಡಿಎಂಕೆ ನಾಯಕ, ಪೊಲ್ಲಾಚಿ ವಿ.ಜಯರಾಮನ್ ಅವರು, ಶ್ರೀರಾಮ ಅವತಾರವೇ ಹೊರತು ಮುಖ್ಯಮಂತ್ರಿ ಹೇಳಿದಂತೆ ಕಾಲ್ಪನಿಕ ಪಾತ್ರವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಲೆ ಕೇಂದ್ರದ ನಿಯಂತ್ರಣ ಸರಿಯೇ?: ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...