Homeಮುಖಪುಟತಮಿಳುನಾಡು: ಪೆರಿಯಾರ್ ವಿಶ್ವವಿದ್ಯಾನಿಲಯದ ಉಪಕುಲಪತಿ ಬಂಧನ

ತಮಿಳುನಾಡು: ಪೆರಿಯಾರ್ ವಿಶ್ವವಿದ್ಯಾನಿಲಯದ ಉಪಕುಲಪತಿ ಬಂಧನ

- Advertisement -
- Advertisement -

ತಮಿಳುನಾಡಿನ ಸೇಲಂನ ಪೆರಿಯಾರ್ ವಿಶ್ವವಿದ್ಯಾನಿಲಯದ ಉಪಕುಲಪತಿ, ಕೃಷಿ ತಜ್ಞ, ಲೇಖಕ ಆರ್ ಜಗನ್ನಾಥನ್ ಅವರನ್ನು ವಂಚನೆ ಆರೋಪದ ಮೇಲೆ ಕರುಪ್ಪೂರ್ ಪೊಲೀಸರು ಬಂಧಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ ಜಗನ್ನಾಥನ್ ಅವರ ಬಂಧನ ನಿನ್ನೆ ನಡೆದಿದ್ದು, ವಿಶ್ವವಿದ್ಯಾನಿಲಯದ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹಲವಾರು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಮತ್ತು ವಂಚನೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅವರ ಮೇಲೆ ಆರೋಪಿಸಲಾಗಿದೆ.

ಉಪಕುಲಪತಿಯಾಗಿ ಅಧಿಕಾರದಲ್ಲಿದ್ದಾಗ ಅವರು ತಮ್ಮ ಸಹಚರರೊಂದಿಗೆ ನಡೆಸುತ್ತಿರುವ ಖಾಸಗಿ ಕಂಪನಿಗೆ ಸಹಾಯ, ಉಪಕುಲಪತಿ ಹುದ್ದೆಯ ದುರ್ಬಳಕೆ ಮತ್ತು ತಮ್ಮ ಖಾಸಗಿ ಕಂಪನಿಯನ್ನು ನಿರ್ವಹಿಸಲು ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಂಡರು ಎಂದು ಕೂಡ ಆರೋಪಿಸಲಾಗಿದೆ.

ವಿಶ್ವವಿದ್ಯಾನಿಲಯದಲ್ಲಿ ನೌಕರರ ಸಂಘದ ಕಾನೂನು ಸಲಹೆಗಾರರಾಗಿರುವ ಇಳಂಗೋವನ್ ಅವರು ನೀಡಿದ ದೂರಿನ ಆಧಾರದ ಮೇಲೆ ಕರುಪ್ಪೂರು ಪೊಲೀಸರು ಪ್ರಥಮ ಮಾಹಿತಿ ವರದಿ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಸಂಜೆ ವಿ.ವಿ ಆವರಣದಿಂದ ಅವರನ್ನು ಬಂಧಿಸಲಾಗಿದೆ ಮತ್ತು ವಿಚಾರಣೆಯೂ ನಡೆಯುತ್ತಿದೆ.

ಕುಲಪತಿ ಅವರು ರಿಜಿಸ್ಟ್ರಾರ್ ಜೊತೆಗೂಡಿ ವಿ.ವಿ ಅನುದಾನವನ್ನು ದುರುಪಯೋಗಪಡಿಸಿಕೊಂಡು, ತಮ್ಮ ಹೆಸರಿನಲ್ಲಿ ಪೆರಿಯಾರ್ ವಿಶ್ವವಿದ್ಯಾಲಯದ ತಂತ್ರಜ್ಞಾನ ಉದ್ಯಮಶೀಲತೆ ಮತ್ತು ಸಂಶೋಧನಾ ಪ್ರತಿಷ್ಠಾನ ಸ್ಥಾಪಿಸಿದ್ದಾರೆ ಎಂದು ಕೂಡ ಇಳಂಗೋವನ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಜಗನ್ನಾಥನ್ ಒಬ್ಬ ಕೃಷಿ ತಜ್ಞರಾಗಿದ್ದು, ಅವರು ಒಂದು ಪುಸ್ತಕವನ್ನು ಬರೆದಿದ್ದಾರೆ ಮತ್ತು 55 ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ಅವರು ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಕೃಷಿಯ ವಿಷಯದಲ್ಲಿ M.Sc ಸ್ನಾತಕೋತ್ತರ ಪದವಿ ಮತ್ತು Ph.D ಪದವಿಯನ್ನು ಪಡೆದಿದ್ದರು. ಅವರು ಈ ಹಿಂದೆ ತಮಿಳುನಾಡು ಕೃಷಿ ವಿಶ್ವವಿದ್ಯಾಲಯದಲ್ಲಿ ಅಕಾಡೆಮಿಕ್ ಕೌನ್ಸಿಲ್ ಮತ್ತು ಬೋರ್ಡ್ ಆಫ್ ಸ್ಟಡೀಸ್‌ನ ಸದಸ್ಯರಾಗಿದ್ದರು ಮತ್ತು ನಾಮಕ್ಕಲ್‌ನ ಪಾವೈ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿದ್ದರು ಮತ್ತು ಬೋರ್ಡ್ ಆಫ್ ಸ್ಟಡೀಸ್‌ನ ಅಧ್ಯಕ್ಷರಾಗಿದ್ದರು.

ಅವರು 40 ವರ್ಷಗಳಿಂದ ಪ್ರಾಧ್ಯಾಪಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದು, 2021ರಲ್ಲಿ ಪೆರಿಯಾರ್ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾಗಿ ನೇಮಕಗೊಂಡಿದ್ದರು. ಸೇಲಂನ ಪೆರಿಯಾರ್‌ ವಿಶ್ವವಿದ್ಯಾಲಯಕ್ಕೆ ಕುಲಪತಿಯಾಗಿ ಜಗನ್ನಾಥನ್‌ ಅವರನ್ನು ಅಂದಿನ ರಾಜ್ಯಪಾಲ ಬನ್ವಾರಿಲಾಲ್‌ ಪುರೋಹಿತ್‌ ಅವರು ನೇಮಕ ಮಾಡಿದ್ದರು. ಅವರು ಈ ಹಿಂದೆ ಕೊಯಮತ್ತೂರಿನ ತಮಿಳುನಾಡು ಕೃಷಿ ವಿಶ್ವವಿದ್ಯಾಲಯದಲ್ಲಿ ಡೀನ್ ಆಗಿ ಕೂಡ ಕೆಲಸವನ್ನು ನಿರ್ವಹಿಸಿದ್ದರು.

ಇದನ್ನು ಓದಿ: ರಾಮ ಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ತಿರಸ್ಕರಿಸಿದ ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...