Homeಮುಖಪುಟತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

ತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

- Advertisement -
- Advertisement -

ಭಾನುವಾರ ಮುಂಜಾನೆ 4.30 ರ ಸುಮಾರಿಗೆ ತಮೀಳ್‌‌‌‌‌‌‌‌‌ ನೇಷನ್ ಪೀಪಲ್ಸ್ ಫ್ರಂಟ್ ಪಾಲಿಟ್‌‌ ಪ್ರಧಾನ ಕಾರ್ಯದರ್ಶಿ ಬಾಲನ್ ಮತ್ತು ಕೊ. ಸೀನಿವಾಸನ್‌‌ ಅವರನ್ನು ಸೇಲಂ ಥೀವಟ್ಟಿಪಟ್ಟಿ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಒಂದುವರೆ ವರ್ಷಗಳ ಹಿಂದೆ ಕೇರಳ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದ ಮಾವೋವಾದಿ ನಾಯಕ ಮಣಿವಾಸಗಂ ಅವರ ಶವಸಂಸ್ಕಾರದಲ್ಲಿ ಭಾಗವಹಿಸಿದ್ದಕ್ಕಾಗಿ ದಾಖಲಿಸಲಾಗಿದ್ದ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ.

ನವೆಂಬರ್ 2019 ರಲ್ಲಿ ಬಾಲನ್ ಮತ್ತು ಕೋ. ಸೀನಿವಾಸನ್‌ರವರು ಮಣಿವಾಸಗಂ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಅಂತಿಮ ನಮನ ಸಲ್ಲಿಸಿದ್ದರು.

ಅವರ ಬಂಧನವನ್ನು ಖಂಡಿಸಿರುವ ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ “ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಯಾರಾದರು ಪ್ರಕರಣಗಳನ್ನು ದಾಖಲಿಸುತ್ತಾರೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದೆ. ಫ್ರಂಟ್‌ನ ಸದಸ್ಯರಾದ ಸತೀಶ್ ಮತ್ತು ಅರುಣ್ ಶೌರಿ ಅವರಿಗೆ ಕೇವಲ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಈ ಪ್ರಕರಣದಲ್ಲಿ ಮತ್ತೊಂದು ಸಮನ್ಸ್‌ ನೀಡಲಾಗಿದೆ ಎಂದು ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ ಹೇಳಿದೆ.

ಇದನ್ನೂ ಓದಿ: ’ಸಿಖ್ಖರನ್ನು ದಾರಿ ತಪ್ಪಿಸಲಾಗುತ್ತಿದೆ’-ರಾಜ್ಯಸಭೆಯಲ್ಲಿ ಕೃಷಿ ಕಾನೂನನ್ನು ಮತ್ತೆ ಸಮರ್ಥಿಸಿದ ಮೋದಿ

ತಮಿಳ್‌‌ ನೇಷನ್ ಪೀಪಲ್ಸ್ ಫ್ರಂಟ್‌‌‌ನ ಜಿಲ್ಲಾ ಸಮಿತಿ ಸದಸ್ಯರಾದ ಆರ್. ಶ್ರೀರಾಮ್, ಬಿಜೆಪಿ ವಿರುದ್ದ ಜನಾಂದೋಲನ ರೂಪಿಸಿದ್ದಕ್ಕಾಗಿ ಈ ಬಂಧನ ನಡೆದಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಶ್ರೀರಾಮ್, “2021 ರ ಜನವರಿ 20 ರಂದು ಚೆನ್ನೈನಲ್ಲಿ ಎಪ್ಪತ್ತು ತಮಿಳು ಸಂಘಟನೆಗಳನ್ನು ಒಳಗೊಂಡು ’ಬಿಜೆಪಿ ವಿರೋಧಿ ಚಳುವಳಿ’ ಕುರಿತು ಒಂದು ಸಭೆ ನಡೆದಿತ್ತು. ಎಪ್ರಿಲ್ ತಿಂಗಳಿನಲ್ಲಿ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಪರ್ಯಾಯ ಆಂದೋಲನವನ್ನು ಕಟ್ಟುವ ಬಗ್ಗೆ ಸಭೆಯನ್ನು ನಡೆಲಾಗಿತ್ತು. ಈ ಸಭೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರದಂತೆ ತಡೆಯಲು ಬಿಜೆಪಿ ಎಲ್ಲಿ ಚುನಾವಣೆಗೆ ನಿಂತರು ಅಲ್ಲಿ ಅದನ್ನು ಸೋಲಿಸಲು ಒಗ್ಗೂಡುವಂತೆ ಚರ್ಚಿಸಲಾಗಿತ್ತು” ಎಂದು ಹೇಳಿದರು.

“ಈ ಸಭೆಯನ್ನು ’ಬಿಜೆಪಿಯನ್ನು ಸೋಲಿಸಿ ಚಳವಳಿ’ಯ ಮುಖಂಡರಾದ ಬಾಲನ್ ಅವರು ಆಯೋಜಿಸಿದ್ದರು. ಈ ಸಭೆ ನಡೆದ ನಂತರ ಪೊಲೀಸರು ಒಂದುವರೆ ವರ್ಷ ಹಿಂದೆ ದಾಖಲಾದ ಪ್ರಕರಣವನ್ನು ಹೊರತೆಗೆದು ಅವರನ್ನು ಬಂಧಿಸಿದ್ದಾರೆ” ಎಂದು ಶ್ರೀರಾಮ್ ಹೇಳಿದರು.

ಇದನ್ನೂ ಓದಿ: ದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

“ಎನ್‌ಕೌಂಟರ್‌ಗಳು ನಿರಂತರವಾಗಿ ನಡೆಯುತ್ತಿರುವುದರಿಂದ, ನಕಲಿ ಎನ್‌ಕೌಂಟರ್‌‌‌ಗಳನ್ನು ತನಿಖೆ ಮಾಡಬೇಕೆಂದು ನಾವು ಮನಿವಾಸಗಂ ಅವರ ಹತ್ಯೆಯನ್ನು ನಾವು ಖಂಡಿಸಿದ್ದೆವು. ಅವರ ಅಂತಿಮ ದರ್ಶನ ಪಡೆಯಲು ಸೇಲಂಗೆ ಹೋದಾಗ ಬಾಲನ್ ಅವರು ಅಲ್ಲಿ ಭಾಷಣ ಮಾಡಿದ್ದರು ಹಾಗೂ ಸೀನಿವಾಸನ್‌ ಅವರ ಒಂದು ಕವಿತೆ ಓದಿದ್ದರು. ಆದರೆ ಅಂದು 7 ಜನರ ಮೇಲೆ ದಾಖಲಾದ ಎಫ್‌ಐಆರ್‌ನಲ್ಲಿ ಬಾಲನ್ ಅಥವಾ ಸೀನಿವಾಸನ್‌ ಅವರ ಹೆಸರು ಇರಲಿಲ್ಲ” ಎಂದು ಶ್ರೀರಾಮ್ ಹೇಳಿದ್ದಾರೆ.

ತಮಿಳ್‌ ನೇಷನ್‌ ಫ್ರಂಟ್‌ನ ಕಾರ್ಯಕರ್ತರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಸ್ವತಃ ಬರೆದಿದ್ದರು. ವಿವಾದಿತ ಯುಎಪಿಎ ಕಾನೂನಿನ ಅಡಿಯಲ್ಲಿ ಈ ರೀತಿ ಬರೆಯುವ ಹಕ್ಕು ಡಿಎಸ್ಪಿಗೆ ಇದೆ. ಕಾನೂನಿನಂತೆ ಎಫ್‌ಐಆರ್‌ನಲ್ಲಿ ಯಾರ ಹೆಸರನ್ನು ಉಲ್ಲೇಖಿಸದಿದ್ದರೂ, ಪೊಲೀಸರು ಸಿದ್ಧಪಡಿಸಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಬಳಸಿಕೊಂಡು ಅವರು ಯಾರನ್ನೂ ಯಾವಾಗ ಬೇಕಾದರೂ ಬಂಧಿಸಬಹುದಾಗಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆನಂದ್ ತೆಲ್ತುಂಬ್ಡೆ ಮತ್ತು ಗೌತಮ್ ನವಲಖಾ ಅವರನ್ನು ಬಂಧಿಸಲು ಇದೇ ರೀತಿಯ ವಿಧಾನಗಳನ್ನು ಬಳಸಲಾಯಿತು. ಮೂಲ ಎಫ್‌ಐಆರ್‌ನಲ್ಲಿ ಅವರ ಹೆಸರುಗಳು ಇರಲಿಲ್ಲವಾದರು ನಂತರ ಪೊಲೀಸರು ಸ್ವತಃ ಸಿದ್ಧಪಡಿಸಿದ ತಪ್ಪೊಪ್ಪಿಗೆಯನ್ನು ಹೇಳಿಕೆಯಾಗಿ ಸೇರಿಸಲಾಯಿತು.

ಪ್ರಕರಣದಲ್ಲಿ ಎಡಪ್ಪಾಡಿ ಸರ್ಕಾರದ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಹಸ್ತಕ್ಷೇಪವನ್ನು ತಮೀಳ್‌ ನೇಷನ್ ಪೀಪಲ್ಸ್ ಫ್ರಂಟ್ ಖಂಡಿಸಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪ್ರಕರಣಗಳನ್ನು ದಾಖಲಿಸುವುದು ಮಾನವನ ಮೂಲಭೂತ ಹಕ್ಕುಗಳ ಮೇಲಿನ ಅಮಾನವೀಯ ದಾಳಿ ಎಂದು ಅದು ಹೇಳಿದೆ. ತಮ್ಮ ಸಂಘಟನೆಯ ಸದಸ್ಯರನ್ನು ತಕ್ಷಣವೆ ಬಿಡುಗಡೆ ಮಾಡಬೇಕೆಂದು ಅದು ಒತ್ತಾಯಿಸಿದೆ.

ಇದನ್ನೂ ಓದಿ: ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...