Homeಮುಖಪುಟತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

ತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

- Advertisement -
- Advertisement -

ಭಾನುವಾರ ಮುಂಜಾನೆ 4.30 ರ ಸುಮಾರಿಗೆ ತಮೀಳ್‌‌‌‌‌‌‌‌‌ ನೇಷನ್ ಪೀಪಲ್ಸ್ ಫ್ರಂಟ್ ಪಾಲಿಟ್‌‌ ಪ್ರಧಾನ ಕಾರ್ಯದರ್ಶಿ ಬಾಲನ್ ಮತ್ತು ಕೊ. ಸೀನಿವಾಸನ್‌‌ ಅವರನ್ನು ಸೇಲಂ ಥೀವಟ್ಟಿಪಟ್ಟಿ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಒಂದುವರೆ ವರ್ಷಗಳ ಹಿಂದೆ ಕೇರಳ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದ ಮಾವೋವಾದಿ ನಾಯಕ ಮಣಿವಾಸಗಂ ಅವರ ಶವಸಂಸ್ಕಾರದಲ್ಲಿ ಭಾಗವಹಿಸಿದ್ದಕ್ಕಾಗಿ ದಾಖಲಿಸಲಾಗಿದ್ದ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ.

ನವೆಂಬರ್ 2019 ರಲ್ಲಿ ಬಾಲನ್ ಮತ್ತು ಕೋ. ಸೀನಿವಾಸನ್‌ರವರು ಮಣಿವಾಸಗಂ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಅಂತಿಮ ನಮನ ಸಲ್ಲಿಸಿದ್ದರು.

ಅವರ ಬಂಧನವನ್ನು ಖಂಡಿಸಿರುವ ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ “ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಯಾರಾದರು ಪ್ರಕರಣಗಳನ್ನು ದಾಖಲಿಸುತ್ತಾರೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದೆ. ಫ್ರಂಟ್‌ನ ಸದಸ್ಯರಾದ ಸತೀಶ್ ಮತ್ತು ಅರುಣ್ ಶೌರಿ ಅವರಿಗೆ ಕೇವಲ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಈ ಪ್ರಕರಣದಲ್ಲಿ ಮತ್ತೊಂದು ಸಮನ್ಸ್‌ ನೀಡಲಾಗಿದೆ ಎಂದು ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ ಹೇಳಿದೆ.

ಇದನ್ನೂ ಓದಿ: ’ಸಿಖ್ಖರನ್ನು ದಾರಿ ತಪ್ಪಿಸಲಾಗುತ್ತಿದೆ’-ರಾಜ್ಯಸಭೆಯಲ್ಲಿ ಕೃಷಿ ಕಾನೂನನ್ನು ಮತ್ತೆ ಸಮರ್ಥಿಸಿದ ಮೋದಿ

ತಮಿಳ್‌‌ ನೇಷನ್ ಪೀಪಲ್ಸ್ ಫ್ರಂಟ್‌‌‌ನ ಜಿಲ್ಲಾ ಸಮಿತಿ ಸದಸ್ಯರಾದ ಆರ್. ಶ್ರೀರಾಮ್, ಬಿಜೆಪಿ ವಿರುದ್ದ ಜನಾಂದೋಲನ ರೂಪಿಸಿದ್ದಕ್ಕಾಗಿ ಈ ಬಂಧನ ನಡೆದಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಶ್ರೀರಾಮ್, “2021 ರ ಜನವರಿ 20 ರಂದು ಚೆನ್ನೈನಲ್ಲಿ ಎಪ್ಪತ್ತು ತಮಿಳು ಸಂಘಟನೆಗಳನ್ನು ಒಳಗೊಂಡು ’ಬಿಜೆಪಿ ವಿರೋಧಿ ಚಳುವಳಿ’ ಕುರಿತು ಒಂದು ಸಭೆ ನಡೆದಿತ್ತು. ಎಪ್ರಿಲ್ ತಿಂಗಳಿನಲ್ಲಿ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಪರ್ಯಾಯ ಆಂದೋಲನವನ್ನು ಕಟ್ಟುವ ಬಗ್ಗೆ ಸಭೆಯನ್ನು ನಡೆಲಾಗಿತ್ತು. ಈ ಸಭೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರದಂತೆ ತಡೆಯಲು ಬಿಜೆಪಿ ಎಲ್ಲಿ ಚುನಾವಣೆಗೆ ನಿಂತರು ಅಲ್ಲಿ ಅದನ್ನು ಸೋಲಿಸಲು ಒಗ್ಗೂಡುವಂತೆ ಚರ್ಚಿಸಲಾಗಿತ್ತು” ಎಂದು ಹೇಳಿದರು.

“ಈ ಸಭೆಯನ್ನು ’ಬಿಜೆಪಿಯನ್ನು ಸೋಲಿಸಿ ಚಳವಳಿ’ಯ ಮುಖಂಡರಾದ ಬಾಲನ್ ಅವರು ಆಯೋಜಿಸಿದ್ದರು. ಈ ಸಭೆ ನಡೆದ ನಂತರ ಪೊಲೀಸರು ಒಂದುವರೆ ವರ್ಷ ಹಿಂದೆ ದಾಖಲಾದ ಪ್ರಕರಣವನ್ನು ಹೊರತೆಗೆದು ಅವರನ್ನು ಬಂಧಿಸಿದ್ದಾರೆ” ಎಂದು ಶ್ರೀರಾಮ್ ಹೇಳಿದರು.

ಇದನ್ನೂ ಓದಿ: ದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

“ಎನ್‌ಕೌಂಟರ್‌ಗಳು ನಿರಂತರವಾಗಿ ನಡೆಯುತ್ತಿರುವುದರಿಂದ, ನಕಲಿ ಎನ್‌ಕೌಂಟರ್‌‌‌ಗಳನ್ನು ತನಿಖೆ ಮಾಡಬೇಕೆಂದು ನಾವು ಮನಿವಾಸಗಂ ಅವರ ಹತ್ಯೆಯನ್ನು ನಾವು ಖಂಡಿಸಿದ್ದೆವು. ಅವರ ಅಂತಿಮ ದರ್ಶನ ಪಡೆಯಲು ಸೇಲಂಗೆ ಹೋದಾಗ ಬಾಲನ್ ಅವರು ಅಲ್ಲಿ ಭಾಷಣ ಮಾಡಿದ್ದರು ಹಾಗೂ ಸೀನಿವಾಸನ್‌ ಅವರ ಒಂದು ಕವಿತೆ ಓದಿದ್ದರು. ಆದರೆ ಅಂದು 7 ಜನರ ಮೇಲೆ ದಾಖಲಾದ ಎಫ್‌ಐಆರ್‌ನಲ್ಲಿ ಬಾಲನ್ ಅಥವಾ ಸೀನಿವಾಸನ್‌ ಅವರ ಹೆಸರು ಇರಲಿಲ್ಲ” ಎಂದು ಶ್ರೀರಾಮ್ ಹೇಳಿದ್ದಾರೆ.

ತಮಿಳ್‌ ನೇಷನ್‌ ಫ್ರಂಟ್‌ನ ಕಾರ್ಯಕರ್ತರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಸ್ವತಃ ಬರೆದಿದ್ದರು. ವಿವಾದಿತ ಯುಎಪಿಎ ಕಾನೂನಿನ ಅಡಿಯಲ್ಲಿ ಈ ರೀತಿ ಬರೆಯುವ ಹಕ್ಕು ಡಿಎಸ್ಪಿಗೆ ಇದೆ. ಕಾನೂನಿನಂತೆ ಎಫ್‌ಐಆರ್‌ನಲ್ಲಿ ಯಾರ ಹೆಸರನ್ನು ಉಲ್ಲೇಖಿಸದಿದ್ದರೂ, ಪೊಲೀಸರು ಸಿದ್ಧಪಡಿಸಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಬಳಸಿಕೊಂಡು ಅವರು ಯಾರನ್ನೂ ಯಾವಾಗ ಬೇಕಾದರೂ ಬಂಧಿಸಬಹುದಾಗಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆನಂದ್ ತೆಲ್ತುಂಬ್ಡೆ ಮತ್ತು ಗೌತಮ್ ನವಲಖಾ ಅವರನ್ನು ಬಂಧಿಸಲು ಇದೇ ರೀತಿಯ ವಿಧಾನಗಳನ್ನು ಬಳಸಲಾಯಿತು. ಮೂಲ ಎಫ್‌ಐಆರ್‌ನಲ್ಲಿ ಅವರ ಹೆಸರುಗಳು ಇರಲಿಲ್ಲವಾದರು ನಂತರ ಪೊಲೀಸರು ಸ್ವತಃ ಸಿದ್ಧಪಡಿಸಿದ ತಪ್ಪೊಪ್ಪಿಗೆಯನ್ನು ಹೇಳಿಕೆಯಾಗಿ ಸೇರಿಸಲಾಯಿತು.

ಪ್ರಕರಣದಲ್ಲಿ ಎಡಪ್ಪಾಡಿ ಸರ್ಕಾರದ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಹಸ್ತಕ್ಷೇಪವನ್ನು ತಮೀಳ್‌ ನೇಷನ್ ಪೀಪಲ್ಸ್ ಫ್ರಂಟ್ ಖಂಡಿಸಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪ್ರಕರಣಗಳನ್ನು ದಾಖಲಿಸುವುದು ಮಾನವನ ಮೂಲಭೂತ ಹಕ್ಕುಗಳ ಮೇಲಿನ ಅಮಾನವೀಯ ದಾಳಿ ಎಂದು ಅದು ಹೇಳಿದೆ. ತಮ್ಮ ಸಂಘಟನೆಯ ಸದಸ್ಯರನ್ನು ತಕ್ಷಣವೆ ಬಿಡುಗಡೆ ಮಾಡಬೇಕೆಂದು ಅದು ಒತ್ತಾಯಿಸಿದೆ.

ಇದನ್ನೂ ಓದಿ: ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....