Homeಮುಖಪುಟತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

ತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

- Advertisement -
- Advertisement -

ಭಾನುವಾರ ಮುಂಜಾನೆ 4.30 ರ ಸುಮಾರಿಗೆ ತಮೀಳ್‌‌‌‌‌‌‌‌‌ ನೇಷನ್ ಪೀಪಲ್ಸ್ ಫ್ರಂಟ್ ಪಾಲಿಟ್‌‌ ಪ್ರಧಾನ ಕಾರ್ಯದರ್ಶಿ ಬಾಲನ್ ಮತ್ತು ಕೊ. ಸೀನಿವಾಸನ್‌‌ ಅವರನ್ನು ಸೇಲಂ ಥೀವಟ್ಟಿಪಟ್ಟಿ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಒಂದುವರೆ ವರ್ಷಗಳ ಹಿಂದೆ ಕೇರಳ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದ ಮಾವೋವಾದಿ ನಾಯಕ ಮಣಿವಾಸಗಂ ಅವರ ಶವಸಂಸ್ಕಾರದಲ್ಲಿ ಭಾಗವಹಿಸಿದ್ದಕ್ಕಾಗಿ ದಾಖಲಿಸಲಾಗಿದ್ದ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ.

ನವೆಂಬರ್ 2019 ರಲ್ಲಿ ಬಾಲನ್ ಮತ್ತು ಕೋ. ಸೀನಿವಾಸನ್‌ರವರು ಮಣಿವಾಸಗಂ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಅಂತಿಮ ನಮನ ಸಲ್ಲಿಸಿದ್ದರು.

ಅವರ ಬಂಧನವನ್ನು ಖಂಡಿಸಿರುವ ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ “ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಯಾರಾದರು ಪ್ರಕರಣಗಳನ್ನು ದಾಖಲಿಸುತ್ತಾರೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದೆ. ಫ್ರಂಟ್‌ನ ಸದಸ್ಯರಾದ ಸತೀಶ್ ಮತ್ತು ಅರುಣ್ ಶೌರಿ ಅವರಿಗೆ ಕೇವಲ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಈ ಪ್ರಕರಣದಲ್ಲಿ ಮತ್ತೊಂದು ಸಮನ್ಸ್‌ ನೀಡಲಾಗಿದೆ ಎಂದು ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ ಹೇಳಿದೆ.

ಇದನ್ನೂ ಓದಿ: ’ಸಿಖ್ಖರನ್ನು ದಾರಿ ತಪ್ಪಿಸಲಾಗುತ್ತಿದೆ’-ರಾಜ್ಯಸಭೆಯಲ್ಲಿ ಕೃಷಿ ಕಾನೂನನ್ನು ಮತ್ತೆ ಸಮರ್ಥಿಸಿದ ಮೋದಿ

ತಮಿಳ್‌‌ ನೇಷನ್ ಪೀಪಲ್ಸ್ ಫ್ರಂಟ್‌‌‌ನ ಜಿಲ್ಲಾ ಸಮಿತಿ ಸದಸ್ಯರಾದ ಆರ್. ಶ್ರೀರಾಮ್, ಬಿಜೆಪಿ ವಿರುದ್ದ ಜನಾಂದೋಲನ ರೂಪಿಸಿದ್ದಕ್ಕಾಗಿ ಈ ಬಂಧನ ನಡೆದಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಶ್ರೀರಾಮ್, “2021 ರ ಜನವರಿ 20 ರಂದು ಚೆನ್ನೈನಲ್ಲಿ ಎಪ್ಪತ್ತು ತಮಿಳು ಸಂಘಟನೆಗಳನ್ನು ಒಳಗೊಂಡು ’ಬಿಜೆಪಿ ವಿರೋಧಿ ಚಳುವಳಿ’ ಕುರಿತು ಒಂದು ಸಭೆ ನಡೆದಿತ್ತು. ಎಪ್ರಿಲ್ ತಿಂಗಳಿನಲ್ಲಿ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಪರ್ಯಾಯ ಆಂದೋಲನವನ್ನು ಕಟ್ಟುವ ಬಗ್ಗೆ ಸಭೆಯನ್ನು ನಡೆಲಾಗಿತ್ತು. ಈ ಸಭೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರದಂತೆ ತಡೆಯಲು ಬಿಜೆಪಿ ಎಲ್ಲಿ ಚುನಾವಣೆಗೆ ನಿಂತರು ಅಲ್ಲಿ ಅದನ್ನು ಸೋಲಿಸಲು ಒಗ್ಗೂಡುವಂತೆ ಚರ್ಚಿಸಲಾಗಿತ್ತು” ಎಂದು ಹೇಳಿದರು.

“ಈ ಸಭೆಯನ್ನು ’ಬಿಜೆಪಿಯನ್ನು ಸೋಲಿಸಿ ಚಳವಳಿ’ಯ ಮುಖಂಡರಾದ ಬಾಲನ್ ಅವರು ಆಯೋಜಿಸಿದ್ದರು. ಈ ಸಭೆ ನಡೆದ ನಂತರ ಪೊಲೀಸರು ಒಂದುವರೆ ವರ್ಷ ಹಿಂದೆ ದಾಖಲಾದ ಪ್ರಕರಣವನ್ನು ಹೊರತೆಗೆದು ಅವರನ್ನು ಬಂಧಿಸಿದ್ದಾರೆ” ಎಂದು ಶ್ರೀರಾಮ್ ಹೇಳಿದರು.

ಇದನ್ನೂ ಓದಿ: ದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

“ಎನ್‌ಕೌಂಟರ್‌ಗಳು ನಿರಂತರವಾಗಿ ನಡೆಯುತ್ತಿರುವುದರಿಂದ, ನಕಲಿ ಎನ್‌ಕೌಂಟರ್‌‌‌ಗಳನ್ನು ತನಿಖೆ ಮಾಡಬೇಕೆಂದು ನಾವು ಮನಿವಾಸಗಂ ಅವರ ಹತ್ಯೆಯನ್ನು ನಾವು ಖಂಡಿಸಿದ್ದೆವು. ಅವರ ಅಂತಿಮ ದರ್ಶನ ಪಡೆಯಲು ಸೇಲಂಗೆ ಹೋದಾಗ ಬಾಲನ್ ಅವರು ಅಲ್ಲಿ ಭಾಷಣ ಮಾಡಿದ್ದರು ಹಾಗೂ ಸೀನಿವಾಸನ್‌ ಅವರ ಒಂದು ಕವಿತೆ ಓದಿದ್ದರು. ಆದರೆ ಅಂದು 7 ಜನರ ಮೇಲೆ ದಾಖಲಾದ ಎಫ್‌ಐಆರ್‌ನಲ್ಲಿ ಬಾಲನ್ ಅಥವಾ ಸೀನಿವಾಸನ್‌ ಅವರ ಹೆಸರು ಇರಲಿಲ್ಲ” ಎಂದು ಶ್ರೀರಾಮ್ ಹೇಳಿದ್ದಾರೆ.

ತಮಿಳ್‌ ನೇಷನ್‌ ಫ್ರಂಟ್‌ನ ಕಾರ್ಯಕರ್ತರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಸ್ವತಃ ಬರೆದಿದ್ದರು. ವಿವಾದಿತ ಯುಎಪಿಎ ಕಾನೂನಿನ ಅಡಿಯಲ್ಲಿ ಈ ರೀತಿ ಬರೆಯುವ ಹಕ್ಕು ಡಿಎಸ್ಪಿಗೆ ಇದೆ. ಕಾನೂನಿನಂತೆ ಎಫ್‌ಐಆರ್‌ನಲ್ಲಿ ಯಾರ ಹೆಸರನ್ನು ಉಲ್ಲೇಖಿಸದಿದ್ದರೂ, ಪೊಲೀಸರು ಸಿದ್ಧಪಡಿಸಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಬಳಸಿಕೊಂಡು ಅವರು ಯಾರನ್ನೂ ಯಾವಾಗ ಬೇಕಾದರೂ ಬಂಧಿಸಬಹುದಾಗಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆನಂದ್ ತೆಲ್ತುಂಬ್ಡೆ ಮತ್ತು ಗೌತಮ್ ನವಲಖಾ ಅವರನ್ನು ಬಂಧಿಸಲು ಇದೇ ರೀತಿಯ ವಿಧಾನಗಳನ್ನು ಬಳಸಲಾಯಿತು. ಮೂಲ ಎಫ್‌ಐಆರ್‌ನಲ್ಲಿ ಅವರ ಹೆಸರುಗಳು ಇರಲಿಲ್ಲವಾದರು ನಂತರ ಪೊಲೀಸರು ಸ್ವತಃ ಸಿದ್ಧಪಡಿಸಿದ ತಪ್ಪೊಪ್ಪಿಗೆಯನ್ನು ಹೇಳಿಕೆಯಾಗಿ ಸೇರಿಸಲಾಯಿತು.

ಪ್ರಕರಣದಲ್ಲಿ ಎಡಪ್ಪಾಡಿ ಸರ್ಕಾರದ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಹಸ್ತಕ್ಷೇಪವನ್ನು ತಮೀಳ್‌ ನೇಷನ್ ಪೀಪಲ್ಸ್ ಫ್ರಂಟ್ ಖಂಡಿಸಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪ್ರಕರಣಗಳನ್ನು ದಾಖಲಿಸುವುದು ಮಾನವನ ಮೂಲಭೂತ ಹಕ್ಕುಗಳ ಮೇಲಿನ ಅಮಾನವೀಯ ದಾಳಿ ಎಂದು ಅದು ಹೇಳಿದೆ. ತಮ್ಮ ಸಂಘಟನೆಯ ಸದಸ್ಯರನ್ನು ತಕ್ಷಣವೆ ಬಿಡುಗಡೆ ಮಾಡಬೇಕೆಂದು ಅದು ಒತ್ತಾಯಿಸಿದೆ.

ಇದನ್ನೂ ಓದಿ: ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...