Homeಮುಖಪುಟತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

ತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

- Advertisement -
- Advertisement -

ಭಾನುವಾರ ಮುಂಜಾನೆ 4.30 ರ ಸುಮಾರಿಗೆ ತಮೀಳ್‌‌‌‌‌‌‌‌‌ ನೇಷನ್ ಪೀಪಲ್ಸ್ ಫ್ರಂಟ್ ಪಾಲಿಟ್‌‌ ಪ್ರಧಾನ ಕಾರ್ಯದರ್ಶಿ ಬಾಲನ್ ಮತ್ತು ಕೊ. ಸೀನಿವಾಸನ್‌‌ ಅವರನ್ನು ಸೇಲಂ ಥೀವಟ್ಟಿಪಟ್ಟಿ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಒಂದುವರೆ ವರ್ಷಗಳ ಹಿಂದೆ ಕೇರಳ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದ ಮಾವೋವಾದಿ ನಾಯಕ ಮಣಿವಾಸಗಂ ಅವರ ಶವಸಂಸ್ಕಾರದಲ್ಲಿ ಭಾಗವಹಿಸಿದ್ದಕ್ಕಾಗಿ ದಾಖಲಿಸಲಾಗಿದ್ದ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ.

ನವೆಂಬರ್ 2019 ರಲ್ಲಿ ಬಾಲನ್ ಮತ್ತು ಕೋ. ಸೀನಿವಾಸನ್‌ರವರು ಮಣಿವಾಸಗಂ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಅಂತಿಮ ನಮನ ಸಲ್ಲಿಸಿದ್ದರು.

ಅವರ ಬಂಧನವನ್ನು ಖಂಡಿಸಿರುವ ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ “ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಯಾರಾದರು ಪ್ರಕರಣಗಳನ್ನು ದಾಖಲಿಸುತ್ತಾರೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದೆ. ಫ್ರಂಟ್‌ನ ಸದಸ್ಯರಾದ ಸತೀಶ್ ಮತ್ತು ಅರುಣ್ ಶೌರಿ ಅವರಿಗೆ ಕೇವಲ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಈ ಪ್ರಕರಣದಲ್ಲಿ ಮತ್ತೊಂದು ಸಮನ್ಸ್‌ ನೀಡಲಾಗಿದೆ ಎಂದು ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ ಹೇಳಿದೆ.

ಇದನ್ನೂ ಓದಿ: ’ಸಿಖ್ಖರನ್ನು ದಾರಿ ತಪ್ಪಿಸಲಾಗುತ್ತಿದೆ’-ರಾಜ್ಯಸಭೆಯಲ್ಲಿ ಕೃಷಿ ಕಾನೂನನ್ನು ಮತ್ತೆ ಸಮರ್ಥಿಸಿದ ಮೋದಿ

ತಮಿಳ್‌‌ ನೇಷನ್ ಪೀಪಲ್ಸ್ ಫ್ರಂಟ್‌‌‌ನ ಜಿಲ್ಲಾ ಸಮಿತಿ ಸದಸ್ಯರಾದ ಆರ್. ಶ್ರೀರಾಮ್, ಬಿಜೆಪಿ ವಿರುದ್ದ ಜನಾಂದೋಲನ ರೂಪಿಸಿದ್ದಕ್ಕಾಗಿ ಈ ಬಂಧನ ನಡೆದಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಶ್ರೀರಾಮ್, “2021 ರ ಜನವರಿ 20 ರಂದು ಚೆನ್ನೈನಲ್ಲಿ ಎಪ್ಪತ್ತು ತಮಿಳು ಸಂಘಟನೆಗಳನ್ನು ಒಳಗೊಂಡು ’ಬಿಜೆಪಿ ವಿರೋಧಿ ಚಳುವಳಿ’ ಕುರಿತು ಒಂದು ಸಭೆ ನಡೆದಿತ್ತು. ಎಪ್ರಿಲ್ ತಿಂಗಳಿನಲ್ಲಿ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಪರ್ಯಾಯ ಆಂದೋಲನವನ್ನು ಕಟ್ಟುವ ಬಗ್ಗೆ ಸಭೆಯನ್ನು ನಡೆಲಾಗಿತ್ತು. ಈ ಸಭೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರದಂತೆ ತಡೆಯಲು ಬಿಜೆಪಿ ಎಲ್ಲಿ ಚುನಾವಣೆಗೆ ನಿಂತರು ಅಲ್ಲಿ ಅದನ್ನು ಸೋಲಿಸಲು ಒಗ್ಗೂಡುವಂತೆ ಚರ್ಚಿಸಲಾಗಿತ್ತು” ಎಂದು ಹೇಳಿದರು.

“ಈ ಸಭೆಯನ್ನು ’ಬಿಜೆಪಿಯನ್ನು ಸೋಲಿಸಿ ಚಳವಳಿ’ಯ ಮುಖಂಡರಾದ ಬಾಲನ್ ಅವರು ಆಯೋಜಿಸಿದ್ದರು. ಈ ಸಭೆ ನಡೆದ ನಂತರ ಪೊಲೀಸರು ಒಂದುವರೆ ವರ್ಷ ಹಿಂದೆ ದಾಖಲಾದ ಪ್ರಕರಣವನ್ನು ಹೊರತೆಗೆದು ಅವರನ್ನು ಬಂಧಿಸಿದ್ದಾರೆ” ಎಂದು ಶ್ರೀರಾಮ್ ಹೇಳಿದರು.

ಇದನ್ನೂ ಓದಿ: ದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

“ಎನ್‌ಕೌಂಟರ್‌ಗಳು ನಿರಂತರವಾಗಿ ನಡೆಯುತ್ತಿರುವುದರಿಂದ, ನಕಲಿ ಎನ್‌ಕೌಂಟರ್‌‌‌ಗಳನ್ನು ತನಿಖೆ ಮಾಡಬೇಕೆಂದು ನಾವು ಮನಿವಾಸಗಂ ಅವರ ಹತ್ಯೆಯನ್ನು ನಾವು ಖಂಡಿಸಿದ್ದೆವು. ಅವರ ಅಂತಿಮ ದರ್ಶನ ಪಡೆಯಲು ಸೇಲಂಗೆ ಹೋದಾಗ ಬಾಲನ್ ಅವರು ಅಲ್ಲಿ ಭಾಷಣ ಮಾಡಿದ್ದರು ಹಾಗೂ ಸೀನಿವಾಸನ್‌ ಅವರ ಒಂದು ಕವಿತೆ ಓದಿದ್ದರು. ಆದರೆ ಅಂದು 7 ಜನರ ಮೇಲೆ ದಾಖಲಾದ ಎಫ್‌ಐಆರ್‌ನಲ್ಲಿ ಬಾಲನ್ ಅಥವಾ ಸೀನಿವಾಸನ್‌ ಅವರ ಹೆಸರು ಇರಲಿಲ್ಲ” ಎಂದು ಶ್ರೀರಾಮ್ ಹೇಳಿದ್ದಾರೆ.

ತಮಿಳ್‌ ನೇಷನ್‌ ಫ್ರಂಟ್‌ನ ಕಾರ್ಯಕರ್ತರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಸ್ವತಃ ಬರೆದಿದ್ದರು. ವಿವಾದಿತ ಯುಎಪಿಎ ಕಾನೂನಿನ ಅಡಿಯಲ್ಲಿ ಈ ರೀತಿ ಬರೆಯುವ ಹಕ್ಕು ಡಿಎಸ್ಪಿಗೆ ಇದೆ. ಕಾನೂನಿನಂತೆ ಎಫ್‌ಐಆರ್‌ನಲ್ಲಿ ಯಾರ ಹೆಸರನ್ನು ಉಲ್ಲೇಖಿಸದಿದ್ದರೂ, ಪೊಲೀಸರು ಸಿದ್ಧಪಡಿಸಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಬಳಸಿಕೊಂಡು ಅವರು ಯಾರನ್ನೂ ಯಾವಾಗ ಬೇಕಾದರೂ ಬಂಧಿಸಬಹುದಾಗಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆನಂದ್ ತೆಲ್ತುಂಬ್ಡೆ ಮತ್ತು ಗೌತಮ್ ನವಲಖಾ ಅವರನ್ನು ಬಂಧಿಸಲು ಇದೇ ರೀತಿಯ ವಿಧಾನಗಳನ್ನು ಬಳಸಲಾಯಿತು. ಮೂಲ ಎಫ್‌ಐಆರ್‌ನಲ್ಲಿ ಅವರ ಹೆಸರುಗಳು ಇರಲಿಲ್ಲವಾದರು ನಂತರ ಪೊಲೀಸರು ಸ್ವತಃ ಸಿದ್ಧಪಡಿಸಿದ ತಪ್ಪೊಪ್ಪಿಗೆಯನ್ನು ಹೇಳಿಕೆಯಾಗಿ ಸೇರಿಸಲಾಯಿತು.

ಪ್ರಕರಣದಲ್ಲಿ ಎಡಪ್ಪಾಡಿ ಸರ್ಕಾರದ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಹಸ್ತಕ್ಷೇಪವನ್ನು ತಮೀಳ್‌ ನೇಷನ್ ಪೀಪಲ್ಸ್ ಫ್ರಂಟ್ ಖಂಡಿಸಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪ್ರಕರಣಗಳನ್ನು ದಾಖಲಿಸುವುದು ಮಾನವನ ಮೂಲಭೂತ ಹಕ್ಕುಗಳ ಮೇಲಿನ ಅಮಾನವೀಯ ದಾಳಿ ಎಂದು ಅದು ಹೇಳಿದೆ. ತಮ್ಮ ಸಂಘಟನೆಯ ಸದಸ್ಯರನ್ನು ತಕ್ಷಣವೆ ಬಿಡುಗಡೆ ಮಾಡಬೇಕೆಂದು ಅದು ಒತ್ತಾಯಿಸಿದೆ.

ಇದನ್ನೂ ಓದಿ: ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...