Homeಮುಖಪುಟದಲಿತ ಮಹಿಳೆಗೆ ತೆಂಗಿನ ಚಿಪ್ಪಿನಲ್ಲಿ ಟೀ ನೀಡಿ ಅವಮಾನ; ಇಬ್ಬರು ಮಹಿಳೆಯರ ಬಂಧನ

ದಲಿತ ಮಹಿಳೆಗೆ ತೆಂಗಿನ ಚಿಪ್ಪಿನಲ್ಲಿ ಟೀ ನೀಡಿ ಅವಮಾನ; ಇಬ್ಬರು ಮಹಿಳೆಯರ ಬಂಧನ

- Advertisement -
- Advertisement -

ದೇಶದ ವಿವಿಧ ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಸಾಮಾಜಿಕ ಬಹಿಷ್ಕಾರದಂತಹ ಅಮಾನವೀಯ ಅಭ್ಯಾಸಗಳು ಇನ್ನೂ ಜಾರಿಯಲ್ಲಿವೆ. ಕೆಲವು ಗ್ರಾಮಗಳಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಿಸುವುದು, ಕುಡಿಯುವ ನೀರು ನಿರಾಕರಣೆ, ಅಂಗನವಾಡಿ ಪ್ರವೇಶ ಹಾಗೂ ಪಡಿತರ ಪಡೆಯಲು ಅಡ್ಡಿ ಉಂಟು ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿರುತ್ತದೆ. ಇಂತದ್ದೇ ಅಮಾನವೀಯ ಘಟನೆಯೊಂದು ತಮಿಳುನಾಡಿನಿಂದ ವರದಿಯಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯರಿಗೆ ಗ್ಲಾಸ್ ಬದಲಿಗೆ ತೆಂಗಿನ ಕಾಯಿಯ ಚಿಪ್ಪಿಯಲ್ಲಿ ಟೀಯನ್ನು ನೀಡಿರುವ ಘಟನೆ ನಡೆದಿದೆ.

ಧರ್ಮಪುರಿಯಲ್ಲಿ ದಲಿತ ಮಹಿಳೆಗೆ ಜಾತಿಯ ಕಾರಣಕ್ಕೆ ತಾರತಮ್ಯ ಮಾಡಿರುವ ಆರೋಪದಲ್ಲಿ ಇಬ್ಬರು  ಮಹಿಳೆಯರನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಲಾಗಿದೆ. ಕೊಂಗು ವೆಳ್ಳಾಲರ್ ಸಮುದಾಯಕ್ಕೆ ಸೇರಿದ ಧರಣಿ ಮತ್ತು ಚಿನ್ನತಾಯಿ ಬಂಧಿತರು. ಸಂತ್ರಸ್ತೆಯಲ್ಲಿ ಓರ್ವ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಾರಪ್ಪನಾಯಕನಪಟ್ಟಿ ಗ್ರಾಮದ ಹೊಲದಲ್ಲಿ ಕೆಲಸಕ್ಕೆ ಹೋದ ಐವರು ಮಹಿಳೆಯರ ಬಗ್ಗೆ ಧರಣಿ ಮತ್ತು ಚಿನ್ನತಾಯಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಂತ್ರಸ್ತರು ಪರಿಶಿಷ್ಟ ಜಾತಿ ಸಮುದಾಯದ ಪರಯ್ಯರ್ ಸಮುದಾಯಕ್ಕೆ ಸೇರಿದವರು. ವಿಡಿಯೋದಲ್ಲಿ ಆರೋಪಿಗಳು ದಲಿತ ಎಂಬ ಕಾರಣಕ್ಕೆ ಟೀ ಗ್ಲಾಸ್ ಬದಲು ತೆಂಗಿನ ಚಿಪ್ಪಿನಲ್ಲಿ ಮಹಿಳೆಯರಿಗೆ ಟೀ ನೀಡಿ ಅವಮಾನಿಸಿದ್ದರು.

ಪೊಲೀಸರು ನೀಡಿದ ವಿವರಗಳ ಪ್ರಕಾರ, ಫೆಬ್ರವರಿ 8ರಂದು ಪೊಲಯಂಪಲ್ಲಿ ಗ್ರಾಮದ ನಿವಾಸಿಗಳಾದ ಚೆಲ್ಲಿ (50) ಮತ್ತು ಇತರ ನಾಲ್ವರು ಮಹಿಳೆಯರು ಭುವನೇಶ್ವರನ್ ಎಂಬುವರ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದರು. ಭುವನೇಶ್ವರನ್ ಅವರ ಕುಟುಂಬದ ಸದಸ್ಯರಾದ ಧರಣಿ ಮತ್ತು ಚಿನ್ನತಾಯಿ ಅವರು,  ಟೀ ಗ್ಲಾಸ್‌ಗಳ ಬದಲಿಗೆ ತೆಂಗಿನ ಚಿಪ್ಪಿನಲ್ಲಿ ಚಹಾವನ್ನು ನೀಡಿದ್ದರು. ಇದನ್ನು ಕಂಡ ಗ್ರಾಮದ ನಿವಾಸಿಯೊಬ್ಬರು ತಮ್ಮ ಫೋನ್‌ನಲ್ಲಿ ಘಟನೆಯನ್ನು ರೆಕಾರ್ಡ್ ಮಾಡಿ ವೈರಲ್‌ ಮಾಡಿದ್ದಾರೆ.

ಈ ಬಗ್ಗೆ ಚೆಲ್ಲಿ ಫೆಬ್ರವರಿ 9ರಂದು ಕಂಬೈನಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಕೆಯ ದೂರಿನ ಆಧಾರದ ಮೇಲೆ ಪೊಲೀಸರು ಧರಣಿ ಮತ್ತು ಆಕೆಯ ಅತ್ತೆ ಚಿನ್ನ ತಾಯಿಯನ್ನು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಸೇಲಂ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಕಂಬೈನಲ್ಲೂರು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...