Homeಮುಖಪುಟದಲಿತ ಮಹಿಳೆಗೆ ತೆಂಗಿನ ಚಿಪ್ಪಿನಲ್ಲಿ ಟೀ ನೀಡಿ ಅವಮಾನ; ಇಬ್ಬರು ಮಹಿಳೆಯರ ಬಂಧನ

ದಲಿತ ಮಹಿಳೆಗೆ ತೆಂಗಿನ ಚಿಪ್ಪಿನಲ್ಲಿ ಟೀ ನೀಡಿ ಅವಮಾನ; ಇಬ್ಬರು ಮಹಿಳೆಯರ ಬಂಧನ

- Advertisement -
- Advertisement -

ದೇಶದ ವಿವಿಧ ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಸಾಮಾಜಿಕ ಬಹಿಷ್ಕಾರದಂತಹ ಅಮಾನವೀಯ ಅಭ್ಯಾಸಗಳು ಇನ್ನೂ ಜಾರಿಯಲ್ಲಿವೆ. ಕೆಲವು ಗ್ರಾಮಗಳಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಿಸುವುದು, ಕುಡಿಯುವ ನೀರು ನಿರಾಕರಣೆ, ಅಂಗನವಾಡಿ ಪ್ರವೇಶ ಹಾಗೂ ಪಡಿತರ ಪಡೆಯಲು ಅಡ್ಡಿ ಉಂಟು ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿರುತ್ತದೆ. ಇಂತದ್ದೇ ಅಮಾನವೀಯ ಘಟನೆಯೊಂದು ತಮಿಳುನಾಡಿನಿಂದ ವರದಿಯಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯರಿಗೆ ಗ್ಲಾಸ್ ಬದಲಿಗೆ ತೆಂಗಿನ ಕಾಯಿಯ ಚಿಪ್ಪಿಯಲ್ಲಿ ಟೀಯನ್ನು ನೀಡಿರುವ ಘಟನೆ ನಡೆದಿದೆ.

ಧರ್ಮಪುರಿಯಲ್ಲಿ ದಲಿತ ಮಹಿಳೆಗೆ ಜಾತಿಯ ಕಾರಣಕ್ಕೆ ತಾರತಮ್ಯ ಮಾಡಿರುವ ಆರೋಪದಲ್ಲಿ ಇಬ್ಬರು  ಮಹಿಳೆಯರನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಲಾಗಿದೆ. ಕೊಂಗು ವೆಳ್ಳಾಲರ್ ಸಮುದಾಯಕ್ಕೆ ಸೇರಿದ ಧರಣಿ ಮತ್ತು ಚಿನ್ನತಾಯಿ ಬಂಧಿತರು. ಸಂತ್ರಸ್ತೆಯಲ್ಲಿ ಓರ್ವ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಾರಪ್ಪನಾಯಕನಪಟ್ಟಿ ಗ್ರಾಮದ ಹೊಲದಲ್ಲಿ ಕೆಲಸಕ್ಕೆ ಹೋದ ಐವರು ಮಹಿಳೆಯರ ಬಗ್ಗೆ ಧರಣಿ ಮತ್ತು ಚಿನ್ನತಾಯಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಂತ್ರಸ್ತರು ಪರಿಶಿಷ್ಟ ಜಾತಿ ಸಮುದಾಯದ ಪರಯ್ಯರ್ ಸಮುದಾಯಕ್ಕೆ ಸೇರಿದವರು. ವಿಡಿಯೋದಲ್ಲಿ ಆರೋಪಿಗಳು ದಲಿತ ಎಂಬ ಕಾರಣಕ್ಕೆ ಟೀ ಗ್ಲಾಸ್ ಬದಲು ತೆಂಗಿನ ಚಿಪ್ಪಿನಲ್ಲಿ ಮಹಿಳೆಯರಿಗೆ ಟೀ ನೀಡಿ ಅವಮಾನಿಸಿದ್ದರು.

ಪೊಲೀಸರು ನೀಡಿದ ವಿವರಗಳ ಪ್ರಕಾರ, ಫೆಬ್ರವರಿ 8ರಂದು ಪೊಲಯಂಪಲ್ಲಿ ಗ್ರಾಮದ ನಿವಾಸಿಗಳಾದ ಚೆಲ್ಲಿ (50) ಮತ್ತು ಇತರ ನಾಲ್ವರು ಮಹಿಳೆಯರು ಭುವನೇಶ್ವರನ್ ಎಂಬುವರ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದರು. ಭುವನೇಶ್ವರನ್ ಅವರ ಕುಟುಂಬದ ಸದಸ್ಯರಾದ ಧರಣಿ ಮತ್ತು ಚಿನ್ನತಾಯಿ ಅವರು,  ಟೀ ಗ್ಲಾಸ್‌ಗಳ ಬದಲಿಗೆ ತೆಂಗಿನ ಚಿಪ್ಪಿನಲ್ಲಿ ಚಹಾವನ್ನು ನೀಡಿದ್ದರು. ಇದನ್ನು ಕಂಡ ಗ್ರಾಮದ ನಿವಾಸಿಯೊಬ್ಬರು ತಮ್ಮ ಫೋನ್‌ನಲ್ಲಿ ಘಟನೆಯನ್ನು ರೆಕಾರ್ಡ್ ಮಾಡಿ ವೈರಲ್‌ ಮಾಡಿದ್ದಾರೆ.

ಈ ಬಗ್ಗೆ ಚೆಲ್ಲಿ ಫೆಬ್ರವರಿ 9ರಂದು ಕಂಬೈನಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಕೆಯ ದೂರಿನ ಆಧಾರದ ಮೇಲೆ ಪೊಲೀಸರು ಧರಣಿ ಮತ್ತು ಆಕೆಯ ಅತ್ತೆ ಚಿನ್ನ ತಾಯಿಯನ್ನು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಸೇಲಂ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಕಂಬೈನಲ್ಲೂರು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...