Homeಮುಖಪುಟದಲಿತ ಮಹಿಳೆಗೆ ತೆಂಗಿನ ಚಿಪ್ಪಿನಲ್ಲಿ ಟೀ ನೀಡಿ ಅವಮಾನ; ಇಬ್ಬರು ಮಹಿಳೆಯರ ಬಂಧನ

ದಲಿತ ಮಹಿಳೆಗೆ ತೆಂಗಿನ ಚಿಪ್ಪಿನಲ್ಲಿ ಟೀ ನೀಡಿ ಅವಮಾನ; ಇಬ್ಬರು ಮಹಿಳೆಯರ ಬಂಧನ

- Advertisement -
- Advertisement -

ದೇಶದ ವಿವಿಧ ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಸಾಮಾಜಿಕ ಬಹಿಷ್ಕಾರದಂತಹ ಅಮಾನವೀಯ ಅಭ್ಯಾಸಗಳು ಇನ್ನೂ ಜಾರಿಯಲ್ಲಿವೆ. ಕೆಲವು ಗ್ರಾಮಗಳಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಿಸುವುದು, ಕುಡಿಯುವ ನೀರು ನಿರಾಕರಣೆ, ಅಂಗನವಾಡಿ ಪ್ರವೇಶ ಹಾಗೂ ಪಡಿತರ ಪಡೆಯಲು ಅಡ್ಡಿ ಉಂಟು ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿರುತ್ತದೆ. ಇಂತದ್ದೇ ಅಮಾನವೀಯ ಘಟನೆಯೊಂದು ತಮಿಳುನಾಡಿನಿಂದ ವರದಿಯಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯರಿಗೆ ಗ್ಲಾಸ್ ಬದಲಿಗೆ ತೆಂಗಿನ ಕಾಯಿಯ ಚಿಪ್ಪಿಯಲ್ಲಿ ಟೀಯನ್ನು ನೀಡಿರುವ ಘಟನೆ ನಡೆದಿದೆ.

ಧರ್ಮಪುರಿಯಲ್ಲಿ ದಲಿತ ಮಹಿಳೆಗೆ ಜಾತಿಯ ಕಾರಣಕ್ಕೆ ತಾರತಮ್ಯ ಮಾಡಿರುವ ಆರೋಪದಲ್ಲಿ ಇಬ್ಬರು  ಮಹಿಳೆಯರನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಲಾಗಿದೆ. ಕೊಂಗು ವೆಳ್ಳಾಲರ್ ಸಮುದಾಯಕ್ಕೆ ಸೇರಿದ ಧರಣಿ ಮತ್ತು ಚಿನ್ನತಾಯಿ ಬಂಧಿತರು. ಸಂತ್ರಸ್ತೆಯಲ್ಲಿ ಓರ್ವ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಾರಪ್ಪನಾಯಕನಪಟ್ಟಿ ಗ್ರಾಮದ ಹೊಲದಲ್ಲಿ ಕೆಲಸಕ್ಕೆ ಹೋದ ಐವರು ಮಹಿಳೆಯರ ಬಗ್ಗೆ ಧರಣಿ ಮತ್ತು ಚಿನ್ನತಾಯಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಂತ್ರಸ್ತರು ಪರಿಶಿಷ್ಟ ಜಾತಿ ಸಮುದಾಯದ ಪರಯ್ಯರ್ ಸಮುದಾಯಕ್ಕೆ ಸೇರಿದವರು. ವಿಡಿಯೋದಲ್ಲಿ ಆರೋಪಿಗಳು ದಲಿತ ಎಂಬ ಕಾರಣಕ್ಕೆ ಟೀ ಗ್ಲಾಸ್ ಬದಲು ತೆಂಗಿನ ಚಿಪ್ಪಿನಲ್ಲಿ ಮಹಿಳೆಯರಿಗೆ ಟೀ ನೀಡಿ ಅವಮಾನಿಸಿದ್ದರು.

ಪೊಲೀಸರು ನೀಡಿದ ವಿವರಗಳ ಪ್ರಕಾರ, ಫೆಬ್ರವರಿ 8ರಂದು ಪೊಲಯಂಪಲ್ಲಿ ಗ್ರಾಮದ ನಿವಾಸಿಗಳಾದ ಚೆಲ್ಲಿ (50) ಮತ್ತು ಇತರ ನಾಲ್ವರು ಮಹಿಳೆಯರು ಭುವನೇಶ್ವರನ್ ಎಂಬುವರ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದರು. ಭುವನೇಶ್ವರನ್ ಅವರ ಕುಟುಂಬದ ಸದಸ್ಯರಾದ ಧರಣಿ ಮತ್ತು ಚಿನ್ನತಾಯಿ ಅವರು,  ಟೀ ಗ್ಲಾಸ್‌ಗಳ ಬದಲಿಗೆ ತೆಂಗಿನ ಚಿಪ್ಪಿನಲ್ಲಿ ಚಹಾವನ್ನು ನೀಡಿದ್ದರು. ಇದನ್ನು ಕಂಡ ಗ್ರಾಮದ ನಿವಾಸಿಯೊಬ್ಬರು ತಮ್ಮ ಫೋನ್‌ನಲ್ಲಿ ಘಟನೆಯನ್ನು ರೆಕಾರ್ಡ್ ಮಾಡಿ ವೈರಲ್‌ ಮಾಡಿದ್ದಾರೆ.

ಈ ಬಗ್ಗೆ ಚೆಲ್ಲಿ ಫೆಬ್ರವರಿ 9ರಂದು ಕಂಬೈನಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಕೆಯ ದೂರಿನ ಆಧಾರದ ಮೇಲೆ ಪೊಲೀಸರು ಧರಣಿ ಮತ್ತು ಆಕೆಯ ಅತ್ತೆ ಚಿನ್ನ ತಾಯಿಯನ್ನು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಸೇಲಂ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಕಂಬೈನಲ್ಲೂರು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...