Homeಮುಖಪುಟತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ಪೊಲೀಸರು ತಂದೆ-ಮಗನನ್ನು ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಪೊಲೀಸ್‌ ದೌರ್ಜನ್ಯಕ್ಕೆ ತುತ್ತಾಗಿ 25 ವರ್ಷದ ಯುವಕನೊಬ್ಬ ಸಾವನಪ್ಪಿರುವ ದುರ್ಘಟನೆ ಜರುಗಿದೆ.

ತೆಂಕಾಸಿ ಜಿಲ್ಲೆಯ ಆಟೋಡ್ರೈವರ್ ಈ ಶನಿವಾರ ಮೃತಪಟ್ಟಿದ್ದು, ಅವರು 48 ದಿನಗಳ ಮೊದಲು ಇಬ್ಬರು ಪೊಲೀಸರಿಂದ ತೀವ್ರ ಹಲ್ಲೆಗೆ ಒಳಗಾಗಿ ಒಳ ಗಾಯಗಳು, ರಕ್ತಸ್ರಾವದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಹತ್ಯೆಗೊಳಗಾದ ವ್ಯಕ್ತಿಯ ತಂದೆ ನೀಡಿದ ದೂರಿನ ಪ್ರಕಾರ “ಎನ್ ಕುಮರೇಶನ್ ಎಂಬ ಆಟೋ ಡ್ರೈವರ್‌ ಮೇಲೆ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಕುಮಾರ್ ಎಂಬುವವರು ತೀವ್ರ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಸಿಆರ್‌ಪಿಸಿ 174(3)ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತನ ತಂದೆ ನವನೀತಕೃಷ್ಣನ್ ಮಾತನಾಡಿ “ಕುಮರೇಶನ್‌ಗೆ ಸೆಂಥಿಲ್ ಎಂಬುವವರ ಜೊತೆ ಆಸ್ತಿ ವಿಚಾರಕ್ಕೆ ವಿವಾದವುಂಟಾಗಿತ್ತು. ಈ ವಿಚಾರವಾಗಿ ಸೆಂಥಿಲ್ ನೀಡಿದ ದೂರಿನ ಆಧಾರದಲ್ಲಿ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಕುಮರೇಶನ್‌ನನ್ನು ಮೇ 08ರಂದು ಠಾಣೆಗೆ ಕರೆಸಿಕೊಂಡು ಥಳಿಸಿದ್ದಾರೆ. ಅದನ್ನು ನಾವು ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಮತ್ತಷ್ಟು ಥಳಿಸಿದ್ದಾರೆ” ಎಂದು ದೂರಿದ್ದಾರೆ.

ಮೇ 09ರ ಮಧ್ಯಾಹ್ನ ಆಟೋ ಸ್ಟ್ಯಾಂಡ್‌ನಲ್ಲಿದ್ದ ಕುಮರೇಶನ್‌ನನ್ನು ಮತ್ತೆ ಸಬ್‌ ಇನ್ಸ್‌ಪೆಕ್ಟರ್‌ ಕರಸಿಕೊಂಡಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ವಿವಾದವಾಗಿದೆ. ನನ್ನ ಮಗ ಕುಮರೇಶನ್ ನಾನು ಕೂಡ ನಿಮ್ಮಂತೆಯೇ ಖಾಕಿ ಧರಿಸಿದ್ದೇನೆ ಎಂದಿದ್ದರಿಂದ ಕೋಪಗೊಂಡ ಎಸ್‌ಐ ಮೊಬೈಲ್ ಕಿತ್ತುಕೊಂಡು ಕಳಿಸಿದ್ದಾರೆ. ಈ ಕುರಿತು ಮೇ 10ರಂದು ಪೊಲೀಸ್‌ ಠಾಣೆಗೆ ಹೋದ ಕುಮರೇಶನ್ ಮೇಲೆ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಕ್ರೂರವಾಗಿ ಥಳಿಸಿದ್ದಾರೆ. ಆತನನ್ನು ಮೊಣಕಾಲ ಮೇಲೆ ಕುಳ್ಳಿರಿಸಿ ಒದ್ದಿದ್ದಾರೆ ಎಂದು ನವನೀತಕೃಷ್ಣನ್ ಆರೋಪಿಸಿದ್ದಾರೆ.

ಆನಂತರ ಕುಮರೇಶನ್‌ನನ್ನು ಮನೆಗೆ ಕಳುಹಿಸಲಾಯಿತಾದರೂ ಹಲ್ಲೆಯ ಕುರಿತು ಎಲ್ಲಾದರೂ ಬಾಯಿಬಿಟ್ಟರೆ ಅಪ್ಪ ಮಗನ ವಿರುದ್ಧ ತೀವ್ರ ಕೇಸ್‌ಗಳನ್ನು ಹಾಕಬೇಕಾಗುತ್ತದೆ ಎಂದು ಬೆದರಿಸಿದ್ದಾರೆ. ಇದರಿಂದ ಕುಮರೇಶನ್ ತನ್ನ ಕುಟುಂಬ ಸೇರಿದಂತೆ‌ ಎಲ್ಲಿಯೂ ಸಹ ಹೇಳಿಕೊಂಡಿಲ್ಲ. ಆದರೆ  ದಿನೇ ದಿನೇ ಆತ ಊಟ ಮಾಡುವುದು ಕಡಿಮೆಯಾಗುತ್ತಾ, ವಾಂತಿ ಶುರುವಾಗಿದೆ. ಕೆಲವೊಮ್ಮೆ ರಕ್ತವಾಂತಿಯಾಗುತ್ತಿತ್ತು ಎಂದು ಅವರ ತಂದೆ ಹೇಳಿದ್ದಾರೆ.

ಜೂನ್ 10ರಂದು ಕುಮರೇಶನ್‌ ರಕ್ತವಾಂತಿ ಮಾಡಿಕೊಂಡಿದ್ದಲ್ಲದೇ ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಆಗ ಆತನನ್ನು ಆಸ್ಪತ್ತೆಗೆ ದಾಖಲು ಮಾಡಿದ್ದು ಅಲ್ಲಿಯೂ ಸಹ ಆತ ತನ್ನ ಮೇಲಾದ ಹಲ್ಲೆಯ ಕುರಿತು ಮಾಹಿತಿ ನೀಡಿಲ್ಲ. ಆದರೆ ಮೂರು ದಿನಗಳ ನಂತರ ಆತನ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಾಗ ಅವರನ್ನು ತಿರುನೆಲ್ವೆಲಿ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ಅಲ್ಲಿ ವೈದ್ಯರು ಚಿಕಿತ್ಸೆ ನೀಡುವ ವೇಳೆ ಒಳಗಾಯಗಳು, ಕರುಳು, ಕಿಡ್ನಿಗೆ ತೊಂದರೆ ಮತ್ತು ರಕ್ತಸ್ರಾವ ಉಂಟಾಗಿರುವುದಾಗಿ ತಿಳಿಸಿದ್ದಾರೆ. ಆಗ ಕುಮರೇಶನ್ ತನ್ನ ಮೇಲಾದ ಪೊಲೀಸ್‌ ಹಲ್ಲೆಯ ಕುರಿತು ಬಾಯ್ಬಿಟ್ಟಿದ್ದಾನೆ ಎಂದು ಅವರ ತಂದೆ ತಿಳಿಸಿದ್ದಾರೆ. ಆನಂತರ ಪೊಲೀಸರು ಬಂದು ದೂರು ದಾಖಲಿಸಿಕೊಂಡಿದ್ದರು ಸಹ ಕ್ರೂರ ಹಲ್ಲೆಯ ಕುರಿತು ಯಾವುದೇ ಹೇಳಿಕೆ ಪಡೆದಿಲ್ಲ ಎಂದು ಅವರ ತಂದೆ ದೂರಿದ್ದಾರೆ.

ಆನಂತರ ನವನೀತಕೃಷ್ಣನ್ ತೆಂಕಾಸಿ ಎಸ್‌ಪಿ ಸುಗಣ ಸಿಂಗ್ ಬಳಿ ದೂರು ದಾಖಲಿಸಿದ್ದಾರೆ. ಆದರೆ ಆರೋಪಿ ಪೊಲೀಸರ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆಸ್ಪತ್ರೆಗೆ ದಾಖಲಿಸಿದ 16 ದಿನದ ನಂತರ ನಮ್ಮ ಮಗ ಸಾವನಪ್ಪಿದ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಆನಂತರ ಪೊಲೀಸರು ಅನುಮಾನಸ್ಪದ ಸಾವಿನ ದೂರು ದಾಖಲಿಸಿಕೊಂಡಿದ್ದಾರೆ.

ಮೃತನ ಮರಣೋತ್ತರ ಪರೀಕ್ಷೆಯನ್ನು ತಿರುನೆಲ್ವೆಲಿ ಮೆಡಿಕಲ್ ಕಾಲೇಜಿನಲ್ಲಿ ಭಾನುವಾರ ನಡೆಸಿದ್ದು ಅದನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಸುರಕ್ಷಿತವಾಗಿವೆ ಎಂದು ಎಸ್‌ಪಿ ತಿಳಿಸಿದ್ದಾರೆ.


ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...