Homeಮುಖಪುಟತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ಪೊಲೀಸರು ತಂದೆ-ಮಗನನ್ನು ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಪೊಲೀಸ್‌ ದೌರ್ಜನ್ಯಕ್ಕೆ ತುತ್ತಾಗಿ 25 ವರ್ಷದ ಯುವಕನೊಬ್ಬ ಸಾವನಪ್ಪಿರುವ ದುರ್ಘಟನೆ ಜರುಗಿದೆ.

ತೆಂಕಾಸಿ ಜಿಲ್ಲೆಯ ಆಟೋಡ್ರೈವರ್ ಈ ಶನಿವಾರ ಮೃತಪಟ್ಟಿದ್ದು, ಅವರು 48 ದಿನಗಳ ಮೊದಲು ಇಬ್ಬರು ಪೊಲೀಸರಿಂದ ತೀವ್ರ ಹಲ್ಲೆಗೆ ಒಳಗಾಗಿ ಒಳ ಗಾಯಗಳು, ರಕ್ತಸ್ರಾವದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಹತ್ಯೆಗೊಳಗಾದ ವ್ಯಕ್ತಿಯ ತಂದೆ ನೀಡಿದ ದೂರಿನ ಪ್ರಕಾರ “ಎನ್ ಕುಮರೇಶನ್ ಎಂಬ ಆಟೋ ಡ್ರೈವರ್‌ ಮೇಲೆ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಕುಮಾರ್ ಎಂಬುವವರು ತೀವ್ರ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಸಿಆರ್‌ಪಿಸಿ 174(3)ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತನ ತಂದೆ ನವನೀತಕೃಷ್ಣನ್ ಮಾತನಾಡಿ “ಕುಮರೇಶನ್‌ಗೆ ಸೆಂಥಿಲ್ ಎಂಬುವವರ ಜೊತೆ ಆಸ್ತಿ ವಿಚಾರಕ್ಕೆ ವಿವಾದವುಂಟಾಗಿತ್ತು. ಈ ವಿಚಾರವಾಗಿ ಸೆಂಥಿಲ್ ನೀಡಿದ ದೂರಿನ ಆಧಾರದಲ್ಲಿ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಕುಮರೇಶನ್‌ನನ್ನು ಮೇ 08ರಂದು ಠಾಣೆಗೆ ಕರೆಸಿಕೊಂಡು ಥಳಿಸಿದ್ದಾರೆ. ಅದನ್ನು ನಾವು ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಮತ್ತಷ್ಟು ಥಳಿಸಿದ್ದಾರೆ” ಎಂದು ದೂರಿದ್ದಾರೆ.

ಮೇ 09ರ ಮಧ್ಯಾಹ್ನ ಆಟೋ ಸ್ಟ್ಯಾಂಡ್‌ನಲ್ಲಿದ್ದ ಕುಮರೇಶನ್‌ನನ್ನು ಮತ್ತೆ ಸಬ್‌ ಇನ್ಸ್‌ಪೆಕ್ಟರ್‌ ಕರಸಿಕೊಂಡಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ವಿವಾದವಾಗಿದೆ. ನನ್ನ ಮಗ ಕುಮರೇಶನ್ ನಾನು ಕೂಡ ನಿಮ್ಮಂತೆಯೇ ಖಾಕಿ ಧರಿಸಿದ್ದೇನೆ ಎಂದಿದ್ದರಿಂದ ಕೋಪಗೊಂಡ ಎಸ್‌ಐ ಮೊಬೈಲ್ ಕಿತ್ತುಕೊಂಡು ಕಳಿಸಿದ್ದಾರೆ. ಈ ಕುರಿತು ಮೇ 10ರಂದು ಪೊಲೀಸ್‌ ಠಾಣೆಗೆ ಹೋದ ಕುಮರೇಶನ್ ಮೇಲೆ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಕ್ರೂರವಾಗಿ ಥಳಿಸಿದ್ದಾರೆ. ಆತನನ್ನು ಮೊಣಕಾಲ ಮೇಲೆ ಕುಳ್ಳಿರಿಸಿ ಒದ್ದಿದ್ದಾರೆ ಎಂದು ನವನೀತಕೃಷ್ಣನ್ ಆರೋಪಿಸಿದ್ದಾರೆ.

ಆನಂತರ ಕುಮರೇಶನ್‌ನನ್ನು ಮನೆಗೆ ಕಳುಹಿಸಲಾಯಿತಾದರೂ ಹಲ್ಲೆಯ ಕುರಿತು ಎಲ್ಲಾದರೂ ಬಾಯಿಬಿಟ್ಟರೆ ಅಪ್ಪ ಮಗನ ವಿರುದ್ಧ ತೀವ್ರ ಕೇಸ್‌ಗಳನ್ನು ಹಾಕಬೇಕಾಗುತ್ತದೆ ಎಂದು ಬೆದರಿಸಿದ್ದಾರೆ. ಇದರಿಂದ ಕುಮರೇಶನ್ ತನ್ನ ಕುಟುಂಬ ಸೇರಿದಂತೆ‌ ಎಲ್ಲಿಯೂ ಸಹ ಹೇಳಿಕೊಂಡಿಲ್ಲ. ಆದರೆ  ದಿನೇ ದಿನೇ ಆತ ಊಟ ಮಾಡುವುದು ಕಡಿಮೆಯಾಗುತ್ತಾ, ವಾಂತಿ ಶುರುವಾಗಿದೆ. ಕೆಲವೊಮ್ಮೆ ರಕ್ತವಾಂತಿಯಾಗುತ್ತಿತ್ತು ಎಂದು ಅವರ ತಂದೆ ಹೇಳಿದ್ದಾರೆ.

ಜೂನ್ 10ರಂದು ಕುಮರೇಶನ್‌ ರಕ್ತವಾಂತಿ ಮಾಡಿಕೊಂಡಿದ್ದಲ್ಲದೇ ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಆಗ ಆತನನ್ನು ಆಸ್ಪತ್ತೆಗೆ ದಾಖಲು ಮಾಡಿದ್ದು ಅಲ್ಲಿಯೂ ಸಹ ಆತ ತನ್ನ ಮೇಲಾದ ಹಲ್ಲೆಯ ಕುರಿತು ಮಾಹಿತಿ ನೀಡಿಲ್ಲ. ಆದರೆ ಮೂರು ದಿನಗಳ ನಂತರ ಆತನ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಾಗ ಅವರನ್ನು ತಿರುನೆಲ್ವೆಲಿ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ಅಲ್ಲಿ ವೈದ್ಯರು ಚಿಕಿತ್ಸೆ ನೀಡುವ ವೇಳೆ ಒಳಗಾಯಗಳು, ಕರುಳು, ಕಿಡ್ನಿಗೆ ತೊಂದರೆ ಮತ್ತು ರಕ್ತಸ್ರಾವ ಉಂಟಾಗಿರುವುದಾಗಿ ತಿಳಿಸಿದ್ದಾರೆ. ಆಗ ಕುಮರೇಶನ್ ತನ್ನ ಮೇಲಾದ ಪೊಲೀಸ್‌ ಹಲ್ಲೆಯ ಕುರಿತು ಬಾಯ್ಬಿಟ್ಟಿದ್ದಾನೆ ಎಂದು ಅವರ ತಂದೆ ತಿಳಿಸಿದ್ದಾರೆ. ಆನಂತರ ಪೊಲೀಸರು ಬಂದು ದೂರು ದಾಖಲಿಸಿಕೊಂಡಿದ್ದರು ಸಹ ಕ್ರೂರ ಹಲ್ಲೆಯ ಕುರಿತು ಯಾವುದೇ ಹೇಳಿಕೆ ಪಡೆದಿಲ್ಲ ಎಂದು ಅವರ ತಂದೆ ದೂರಿದ್ದಾರೆ.

ಆನಂತರ ನವನೀತಕೃಷ್ಣನ್ ತೆಂಕಾಸಿ ಎಸ್‌ಪಿ ಸುಗಣ ಸಿಂಗ್ ಬಳಿ ದೂರು ದಾಖಲಿಸಿದ್ದಾರೆ. ಆದರೆ ಆರೋಪಿ ಪೊಲೀಸರ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆಸ್ಪತ್ರೆಗೆ ದಾಖಲಿಸಿದ 16 ದಿನದ ನಂತರ ನಮ್ಮ ಮಗ ಸಾವನಪ್ಪಿದ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಆನಂತರ ಪೊಲೀಸರು ಅನುಮಾನಸ್ಪದ ಸಾವಿನ ದೂರು ದಾಖಲಿಸಿಕೊಂಡಿದ್ದಾರೆ.

ಮೃತನ ಮರಣೋತ್ತರ ಪರೀಕ್ಷೆಯನ್ನು ತಿರುನೆಲ್ವೆಲಿ ಮೆಡಿಕಲ್ ಕಾಲೇಜಿನಲ್ಲಿ ಭಾನುವಾರ ನಡೆಸಿದ್ದು ಅದನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಸುರಕ್ಷಿತವಾಗಿವೆ ಎಂದು ಎಸ್‌ಪಿ ತಿಳಿಸಿದ್ದಾರೆ.


ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....