Homeಮುಖಪುಟತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ಪೊಲೀಸರು ತಂದೆ-ಮಗನನ್ನು ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಪೊಲೀಸ್‌ ದೌರ್ಜನ್ಯಕ್ಕೆ ತುತ್ತಾಗಿ 25 ವರ್ಷದ ಯುವಕನೊಬ್ಬ ಸಾವನಪ್ಪಿರುವ ದುರ್ಘಟನೆ ಜರುಗಿದೆ.

ತೆಂಕಾಸಿ ಜಿಲ್ಲೆಯ ಆಟೋಡ್ರೈವರ್ ಈ ಶನಿವಾರ ಮೃತಪಟ್ಟಿದ್ದು, ಅವರು 48 ದಿನಗಳ ಮೊದಲು ಇಬ್ಬರು ಪೊಲೀಸರಿಂದ ತೀವ್ರ ಹಲ್ಲೆಗೆ ಒಳಗಾಗಿ ಒಳ ಗಾಯಗಳು, ರಕ್ತಸ್ರಾವದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಹತ್ಯೆಗೊಳಗಾದ ವ್ಯಕ್ತಿಯ ತಂದೆ ನೀಡಿದ ದೂರಿನ ಪ್ರಕಾರ “ಎನ್ ಕುಮರೇಶನ್ ಎಂಬ ಆಟೋ ಡ್ರೈವರ್‌ ಮೇಲೆ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಕುಮಾರ್ ಎಂಬುವವರು ತೀವ್ರ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಸಿಆರ್‌ಪಿಸಿ 174(3)ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತನ ತಂದೆ ನವನೀತಕೃಷ್ಣನ್ ಮಾತನಾಡಿ “ಕುಮರೇಶನ್‌ಗೆ ಸೆಂಥಿಲ್ ಎಂಬುವವರ ಜೊತೆ ಆಸ್ತಿ ವಿಚಾರಕ್ಕೆ ವಿವಾದವುಂಟಾಗಿತ್ತು. ಈ ವಿಚಾರವಾಗಿ ಸೆಂಥಿಲ್ ನೀಡಿದ ದೂರಿನ ಆಧಾರದಲ್ಲಿ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಕುಮರೇಶನ್‌ನನ್ನು ಮೇ 08ರಂದು ಠಾಣೆಗೆ ಕರೆಸಿಕೊಂಡು ಥಳಿಸಿದ್ದಾರೆ. ಅದನ್ನು ನಾವು ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಮತ್ತಷ್ಟು ಥಳಿಸಿದ್ದಾರೆ” ಎಂದು ದೂರಿದ್ದಾರೆ.

ಮೇ 09ರ ಮಧ್ಯಾಹ್ನ ಆಟೋ ಸ್ಟ್ಯಾಂಡ್‌ನಲ್ಲಿದ್ದ ಕುಮರೇಶನ್‌ನನ್ನು ಮತ್ತೆ ಸಬ್‌ ಇನ್ಸ್‌ಪೆಕ್ಟರ್‌ ಕರಸಿಕೊಂಡಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ವಿವಾದವಾಗಿದೆ. ನನ್ನ ಮಗ ಕುಮರೇಶನ್ ನಾನು ಕೂಡ ನಿಮ್ಮಂತೆಯೇ ಖಾಕಿ ಧರಿಸಿದ್ದೇನೆ ಎಂದಿದ್ದರಿಂದ ಕೋಪಗೊಂಡ ಎಸ್‌ಐ ಮೊಬೈಲ್ ಕಿತ್ತುಕೊಂಡು ಕಳಿಸಿದ್ದಾರೆ. ಈ ಕುರಿತು ಮೇ 10ರಂದು ಪೊಲೀಸ್‌ ಠಾಣೆಗೆ ಹೋದ ಕುಮರೇಶನ್ ಮೇಲೆ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಕ್ರೂರವಾಗಿ ಥಳಿಸಿದ್ದಾರೆ. ಆತನನ್ನು ಮೊಣಕಾಲ ಮೇಲೆ ಕುಳ್ಳಿರಿಸಿ ಒದ್ದಿದ್ದಾರೆ ಎಂದು ನವನೀತಕೃಷ್ಣನ್ ಆರೋಪಿಸಿದ್ದಾರೆ.

ಆನಂತರ ಕುಮರೇಶನ್‌ನನ್ನು ಮನೆಗೆ ಕಳುಹಿಸಲಾಯಿತಾದರೂ ಹಲ್ಲೆಯ ಕುರಿತು ಎಲ್ಲಾದರೂ ಬಾಯಿಬಿಟ್ಟರೆ ಅಪ್ಪ ಮಗನ ವಿರುದ್ಧ ತೀವ್ರ ಕೇಸ್‌ಗಳನ್ನು ಹಾಕಬೇಕಾಗುತ್ತದೆ ಎಂದು ಬೆದರಿಸಿದ್ದಾರೆ. ಇದರಿಂದ ಕುಮರೇಶನ್ ತನ್ನ ಕುಟುಂಬ ಸೇರಿದಂತೆ‌ ಎಲ್ಲಿಯೂ ಸಹ ಹೇಳಿಕೊಂಡಿಲ್ಲ. ಆದರೆ  ದಿನೇ ದಿನೇ ಆತ ಊಟ ಮಾಡುವುದು ಕಡಿಮೆಯಾಗುತ್ತಾ, ವಾಂತಿ ಶುರುವಾಗಿದೆ. ಕೆಲವೊಮ್ಮೆ ರಕ್ತವಾಂತಿಯಾಗುತ್ತಿತ್ತು ಎಂದು ಅವರ ತಂದೆ ಹೇಳಿದ್ದಾರೆ.

ಜೂನ್ 10ರಂದು ಕುಮರೇಶನ್‌ ರಕ್ತವಾಂತಿ ಮಾಡಿಕೊಂಡಿದ್ದಲ್ಲದೇ ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಆಗ ಆತನನ್ನು ಆಸ್ಪತ್ತೆಗೆ ದಾಖಲು ಮಾಡಿದ್ದು ಅಲ್ಲಿಯೂ ಸಹ ಆತ ತನ್ನ ಮೇಲಾದ ಹಲ್ಲೆಯ ಕುರಿತು ಮಾಹಿತಿ ನೀಡಿಲ್ಲ. ಆದರೆ ಮೂರು ದಿನಗಳ ನಂತರ ಆತನ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಾಗ ಅವರನ್ನು ತಿರುನೆಲ್ವೆಲಿ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ಅಲ್ಲಿ ವೈದ್ಯರು ಚಿಕಿತ್ಸೆ ನೀಡುವ ವೇಳೆ ಒಳಗಾಯಗಳು, ಕರುಳು, ಕಿಡ್ನಿಗೆ ತೊಂದರೆ ಮತ್ತು ರಕ್ತಸ್ರಾವ ಉಂಟಾಗಿರುವುದಾಗಿ ತಿಳಿಸಿದ್ದಾರೆ. ಆಗ ಕುಮರೇಶನ್ ತನ್ನ ಮೇಲಾದ ಪೊಲೀಸ್‌ ಹಲ್ಲೆಯ ಕುರಿತು ಬಾಯ್ಬಿಟ್ಟಿದ್ದಾನೆ ಎಂದು ಅವರ ತಂದೆ ತಿಳಿಸಿದ್ದಾರೆ. ಆನಂತರ ಪೊಲೀಸರು ಬಂದು ದೂರು ದಾಖಲಿಸಿಕೊಂಡಿದ್ದರು ಸಹ ಕ್ರೂರ ಹಲ್ಲೆಯ ಕುರಿತು ಯಾವುದೇ ಹೇಳಿಕೆ ಪಡೆದಿಲ್ಲ ಎಂದು ಅವರ ತಂದೆ ದೂರಿದ್ದಾರೆ.

ಆನಂತರ ನವನೀತಕೃಷ್ಣನ್ ತೆಂಕಾಸಿ ಎಸ್‌ಪಿ ಸುಗಣ ಸಿಂಗ್ ಬಳಿ ದೂರು ದಾಖಲಿಸಿದ್ದಾರೆ. ಆದರೆ ಆರೋಪಿ ಪೊಲೀಸರ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆಸ್ಪತ್ರೆಗೆ ದಾಖಲಿಸಿದ 16 ದಿನದ ನಂತರ ನಮ್ಮ ಮಗ ಸಾವನಪ್ಪಿದ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಆನಂತರ ಪೊಲೀಸರು ಅನುಮಾನಸ್ಪದ ಸಾವಿನ ದೂರು ದಾಖಲಿಸಿಕೊಂಡಿದ್ದಾರೆ.

ಮೃತನ ಮರಣೋತ್ತರ ಪರೀಕ್ಷೆಯನ್ನು ತಿರುನೆಲ್ವೆಲಿ ಮೆಡಿಕಲ್ ಕಾಲೇಜಿನಲ್ಲಿ ಭಾನುವಾರ ನಡೆಸಿದ್ದು ಅದನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಸುರಕ್ಷಿತವಾಗಿವೆ ಎಂದು ಎಸ್‌ಪಿ ತಿಳಿಸಿದ್ದಾರೆ.


ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...