Homeಮುಖಪುಟತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ಪೊಲೀಸರು ತಂದೆ-ಮಗನನ್ನು ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಪೊಲೀಸ್‌ ದೌರ್ಜನ್ಯಕ್ಕೆ ತುತ್ತಾಗಿ 25 ವರ್ಷದ ಯುವಕನೊಬ್ಬ ಸಾವನಪ್ಪಿರುವ ದುರ್ಘಟನೆ ಜರುಗಿದೆ.

ತೆಂಕಾಸಿ ಜಿಲ್ಲೆಯ ಆಟೋಡ್ರೈವರ್ ಈ ಶನಿವಾರ ಮೃತಪಟ್ಟಿದ್ದು, ಅವರು 48 ದಿನಗಳ ಮೊದಲು ಇಬ್ಬರು ಪೊಲೀಸರಿಂದ ತೀವ್ರ ಹಲ್ಲೆಗೆ ಒಳಗಾಗಿ ಒಳ ಗಾಯಗಳು, ರಕ್ತಸ್ರಾವದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಹತ್ಯೆಗೊಳಗಾದ ವ್ಯಕ್ತಿಯ ತಂದೆ ನೀಡಿದ ದೂರಿನ ಪ್ರಕಾರ “ಎನ್ ಕುಮರೇಶನ್ ಎಂಬ ಆಟೋ ಡ್ರೈವರ್‌ ಮೇಲೆ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಕುಮಾರ್ ಎಂಬುವವರು ತೀವ್ರ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಸಿಆರ್‌ಪಿಸಿ 174(3)ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತನ ತಂದೆ ನವನೀತಕೃಷ್ಣನ್ ಮಾತನಾಡಿ “ಕುಮರೇಶನ್‌ಗೆ ಸೆಂಥಿಲ್ ಎಂಬುವವರ ಜೊತೆ ಆಸ್ತಿ ವಿಚಾರಕ್ಕೆ ವಿವಾದವುಂಟಾಗಿತ್ತು. ಈ ವಿಚಾರವಾಗಿ ಸೆಂಥಿಲ್ ನೀಡಿದ ದೂರಿನ ಆಧಾರದಲ್ಲಿ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಕುಮರೇಶನ್‌ನನ್ನು ಮೇ 08ರಂದು ಠಾಣೆಗೆ ಕರೆಸಿಕೊಂಡು ಥಳಿಸಿದ್ದಾರೆ. ಅದನ್ನು ನಾವು ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಮತ್ತಷ್ಟು ಥಳಿಸಿದ್ದಾರೆ” ಎಂದು ದೂರಿದ್ದಾರೆ.

ಮೇ 09ರ ಮಧ್ಯಾಹ್ನ ಆಟೋ ಸ್ಟ್ಯಾಂಡ್‌ನಲ್ಲಿದ್ದ ಕುಮರೇಶನ್‌ನನ್ನು ಮತ್ತೆ ಸಬ್‌ ಇನ್ಸ್‌ಪೆಕ್ಟರ್‌ ಕರಸಿಕೊಂಡಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ವಿವಾದವಾಗಿದೆ. ನನ್ನ ಮಗ ಕುಮರೇಶನ್ ನಾನು ಕೂಡ ನಿಮ್ಮಂತೆಯೇ ಖಾಕಿ ಧರಿಸಿದ್ದೇನೆ ಎಂದಿದ್ದರಿಂದ ಕೋಪಗೊಂಡ ಎಸ್‌ಐ ಮೊಬೈಲ್ ಕಿತ್ತುಕೊಂಡು ಕಳಿಸಿದ್ದಾರೆ. ಈ ಕುರಿತು ಮೇ 10ರಂದು ಪೊಲೀಸ್‌ ಠಾಣೆಗೆ ಹೋದ ಕುಮರೇಶನ್ ಮೇಲೆ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಕ್ರೂರವಾಗಿ ಥಳಿಸಿದ್ದಾರೆ. ಆತನನ್ನು ಮೊಣಕಾಲ ಮೇಲೆ ಕುಳ್ಳಿರಿಸಿ ಒದ್ದಿದ್ದಾರೆ ಎಂದು ನವನೀತಕೃಷ್ಣನ್ ಆರೋಪಿಸಿದ್ದಾರೆ.

ಆನಂತರ ಕುಮರೇಶನ್‌ನನ್ನು ಮನೆಗೆ ಕಳುಹಿಸಲಾಯಿತಾದರೂ ಹಲ್ಲೆಯ ಕುರಿತು ಎಲ್ಲಾದರೂ ಬಾಯಿಬಿಟ್ಟರೆ ಅಪ್ಪ ಮಗನ ವಿರುದ್ಧ ತೀವ್ರ ಕೇಸ್‌ಗಳನ್ನು ಹಾಕಬೇಕಾಗುತ್ತದೆ ಎಂದು ಬೆದರಿಸಿದ್ದಾರೆ. ಇದರಿಂದ ಕುಮರೇಶನ್ ತನ್ನ ಕುಟುಂಬ ಸೇರಿದಂತೆ‌ ಎಲ್ಲಿಯೂ ಸಹ ಹೇಳಿಕೊಂಡಿಲ್ಲ. ಆದರೆ  ದಿನೇ ದಿನೇ ಆತ ಊಟ ಮಾಡುವುದು ಕಡಿಮೆಯಾಗುತ್ತಾ, ವಾಂತಿ ಶುರುವಾಗಿದೆ. ಕೆಲವೊಮ್ಮೆ ರಕ್ತವಾಂತಿಯಾಗುತ್ತಿತ್ತು ಎಂದು ಅವರ ತಂದೆ ಹೇಳಿದ್ದಾರೆ.

ಜೂನ್ 10ರಂದು ಕುಮರೇಶನ್‌ ರಕ್ತವಾಂತಿ ಮಾಡಿಕೊಂಡಿದ್ದಲ್ಲದೇ ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಆಗ ಆತನನ್ನು ಆಸ್ಪತ್ತೆಗೆ ದಾಖಲು ಮಾಡಿದ್ದು ಅಲ್ಲಿಯೂ ಸಹ ಆತ ತನ್ನ ಮೇಲಾದ ಹಲ್ಲೆಯ ಕುರಿತು ಮಾಹಿತಿ ನೀಡಿಲ್ಲ. ಆದರೆ ಮೂರು ದಿನಗಳ ನಂತರ ಆತನ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಾಗ ಅವರನ್ನು ತಿರುನೆಲ್ವೆಲಿ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ಅಲ್ಲಿ ವೈದ್ಯರು ಚಿಕಿತ್ಸೆ ನೀಡುವ ವೇಳೆ ಒಳಗಾಯಗಳು, ಕರುಳು, ಕಿಡ್ನಿಗೆ ತೊಂದರೆ ಮತ್ತು ರಕ್ತಸ್ರಾವ ಉಂಟಾಗಿರುವುದಾಗಿ ತಿಳಿಸಿದ್ದಾರೆ. ಆಗ ಕುಮರೇಶನ್ ತನ್ನ ಮೇಲಾದ ಪೊಲೀಸ್‌ ಹಲ್ಲೆಯ ಕುರಿತು ಬಾಯ್ಬಿಟ್ಟಿದ್ದಾನೆ ಎಂದು ಅವರ ತಂದೆ ತಿಳಿಸಿದ್ದಾರೆ. ಆನಂತರ ಪೊಲೀಸರು ಬಂದು ದೂರು ದಾಖಲಿಸಿಕೊಂಡಿದ್ದರು ಸಹ ಕ್ರೂರ ಹಲ್ಲೆಯ ಕುರಿತು ಯಾವುದೇ ಹೇಳಿಕೆ ಪಡೆದಿಲ್ಲ ಎಂದು ಅವರ ತಂದೆ ದೂರಿದ್ದಾರೆ.

ಆನಂತರ ನವನೀತಕೃಷ್ಣನ್ ತೆಂಕಾಸಿ ಎಸ್‌ಪಿ ಸುಗಣ ಸಿಂಗ್ ಬಳಿ ದೂರು ದಾಖಲಿಸಿದ್ದಾರೆ. ಆದರೆ ಆರೋಪಿ ಪೊಲೀಸರ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆಸ್ಪತ್ರೆಗೆ ದಾಖಲಿಸಿದ 16 ದಿನದ ನಂತರ ನಮ್ಮ ಮಗ ಸಾವನಪ್ಪಿದ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಆನಂತರ ಪೊಲೀಸರು ಅನುಮಾನಸ್ಪದ ಸಾವಿನ ದೂರು ದಾಖಲಿಸಿಕೊಂಡಿದ್ದಾರೆ.

ಮೃತನ ಮರಣೋತ್ತರ ಪರೀಕ್ಷೆಯನ್ನು ತಿರುನೆಲ್ವೆಲಿ ಮೆಡಿಕಲ್ ಕಾಲೇಜಿನಲ್ಲಿ ಭಾನುವಾರ ನಡೆಸಿದ್ದು ಅದನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಸುರಕ್ಷಿತವಾಗಿವೆ ಎಂದು ಎಸ್‌ಪಿ ತಿಳಿಸಿದ್ದಾರೆ.


ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...