Homeಮುಖಪುಟತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ಪೊಲೀಸರು ತಂದೆ-ಮಗನನ್ನು ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಪೊಲೀಸ್‌ ದೌರ್ಜನ್ಯಕ್ಕೆ ತುತ್ತಾಗಿ 25 ವರ್ಷದ ಯುವಕನೊಬ್ಬ ಸಾವನಪ್ಪಿರುವ ದುರ್ಘಟನೆ ಜರುಗಿದೆ.

ತೆಂಕಾಸಿ ಜಿಲ್ಲೆಯ ಆಟೋಡ್ರೈವರ್ ಈ ಶನಿವಾರ ಮೃತಪಟ್ಟಿದ್ದು, ಅವರು 48 ದಿನಗಳ ಮೊದಲು ಇಬ್ಬರು ಪೊಲೀಸರಿಂದ ತೀವ್ರ ಹಲ್ಲೆಗೆ ಒಳಗಾಗಿ ಒಳ ಗಾಯಗಳು, ರಕ್ತಸ್ರಾವದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಹತ್ಯೆಗೊಳಗಾದ ವ್ಯಕ್ತಿಯ ತಂದೆ ನೀಡಿದ ದೂರಿನ ಪ್ರಕಾರ “ಎನ್ ಕುಮರೇಶನ್ ಎಂಬ ಆಟೋ ಡ್ರೈವರ್‌ ಮೇಲೆ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಕುಮಾರ್ ಎಂಬುವವರು ತೀವ್ರ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಸಿಆರ್‌ಪಿಸಿ 174(3)ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತನ ತಂದೆ ನವನೀತಕೃಷ್ಣನ್ ಮಾತನಾಡಿ “ಕುಮರೇಶನ್‌ಗೆ ಸೆಂಥಿಲ್ ಎಂಬುವವರ ಜೊತೆ ಆಸ್ತಿ ವಿಚಾರಕ್ಕೆ ವಿವಾದವುಂಟಾಗಿತ್ತು. ಈ ವಿಚಾರವಾಗಿ ಸೆಂಥಿಲ್ ನೀಡಿದ ದೂರಿನ ಆಧಾರದಲ್ಲಿ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಕುಮರೇಶನ್‌ನನ್ನು ಮೇ 08ರಂದು ಠಾಣೆಗೆ ಕರೆಸಿಕೊಂಡು ಥಳಿಸಿದ್ದಾರೆ. ಅದನ್ನು ನಾವು ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಮತ್ತಷ್ಟು ಥಳಿಸಿದ್ದಾರೆ” ಎಂದು ದೂರಿದ್ದಾರೆ.

ಮೇ 09ರ ಮಧ್ಯಾಹ್ನ ಆಟೋ ಸ್ಟ್ಯಾಂಡ್‌ನಲ್ಲಿದ್ದ ಕುಮರೇಶನ್‌ನನ್ನು ಮತ್ತೆ ಸಬ್‌ ಇನ್ಸ್‌ಪೆಕ್ಟರ್‌ ಕರಸಿಕೊಂಡಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ವಿವಾದವಾಗಿದೆ. ನನ್ನ ಮಗ ಕುಮರೇಶನ್ ನಾನು ಕೂಡ ನಿಮ್ಮಂತೆಯೇ ಖಾಕಿ ಧರಿಸಿದ್ದೇನೆ ಎಂದಿದ್ದರಿಂದ ಕೋಪಗೊಂಡ ಎಸ್‌ಐ ಮೊಬೈಲ್ ಕಿತ್ತುಕೊಂಡು ಕಳಿಸಿದ್ದಾರೆ. ಈ ಕುರಿತು ಮೇ 10ರಂದು ಪೊಲೀಸ್‌ ಠಾಣೆಗೆ ಹೋದ ಕುಮರೇಶನ್ ಮೇಲೆ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಕ್ರೂರವಾಗಿ ಥಳಿಸಿದ್ದಾರೆ. ಆತನನ್ನು ಮೊಣಕಾಲ ಮೇಲೆ ಕುಳ್ಳಿರಿಸಿ ಒದ್ದಿದ್ದಾರೆ ಎಂದು ನವನೀತಕೃಷ್ಣನ್ ಆರೋಪಿಸಿದ್ದಾರೆ.

ಆನಂತರ ಕುಮರೇಶನ್‌ನನ್ನು ಮನೆಗೆ ಕಳುಹಿಸಲಾಯಿತಾದರೂ ಹಲ್ಲೆಯ ಕುರಿತು ಎಲ್ಲಾದರೂ ಬಾಯಿಬಿಟ್ಟರೆ ಅಪ್ಪ ಮಗನ ವಿರುದ್ಧ ತೀವ್ರ ಕೇಸ್‌ಗಳನ್ನು ಹಾಕಬೇಕಾಗುತ್ತದೆ ಎಂದು ಬೆದರಿಸಿದ್ದಾರೆ. ಇದರಿಂದ ಕುಮರೇಶನ್ ತನ್ನ ಕುಟುಂಬ ಸೇರಿದಂತೆ‌ ಎಲ್ಲಿಯೂ ಸಹ ಹೇಳಿಕೊಂಡಿಲ್ಲ. ಆದರೆ  ದಿನೇ ದಿನೇ ಆತ ಊಟ ಮಾಡುವುದು ಕಡಿಮೆಯಾಗುತ್ತಾ, ವಾಂತಿ ಶುರುವಾಗಿದೆ. ಕೆಲವೊಮ್ಮೆ ರಕ್ತವಾಂತಿಯಾಗುತ್ತಿತ್ತು ಎಂದು ಅವರ ತಂದೆ ಹೇಳಿದ್ದಾರೆ.

ಜೂನ್ 10ರಂದು ಕುಮರೇಶನ್‌ ರಕ್ತವಾಂತಿ ಮಾಡಿಕೊಂಡಿದ್ದಲ್ಲದೇ ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಆಗ ಆತನನ್ನು ಆಸ್ಪತ್ತೆಗೆ ದಾಖಲು ಮಾಡಿದ್ದು ಅಲ್ಲಿಯೂ ಸಹ ಆತ ತನ್ನ ಮೇಲಾದ ಹಲ್ಲೆಯ ಕುರಿತು ಮಾಹಿತಿ ನೀಡಿಲ್ಲ. ಆದರೆ ಮೂರು ದಿನಗಳ ನಂತರ ಆತನ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಾಗ ಅವರನ್ನು ತಿರುನೆಲ್ವೆಲಿ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ಅಲ್ಲಿ ವೈದ್ಯರು ಚಿಕಿತ್ಸೆ ನೀಡುವ ವೇಳೆ ಒಳಗಾಯಗಳು, ಕರುಳು, ಕಿಡ್ನಿಗೆ ತೊಂದರೆ ಮತ್ತು ರಕ್ತಸ್ರಾವ ಉಂಟಾಗಿರುವುದಾಗಿ ತಿಳಿಸಿದ್ದಾರೆ. ಆಗ ಕುಮರೇಶನ್ ತನ್ನ ಮೇಲಾದ ಪೊಲೀಸ್‌ ಹಲ್ಲೆಯ ಕುರಿತು ಬಾಯ್ಬಿಟ್ಟಿದ್ದಾನೆ ಎಂದು ಅವರ ತಂದೆ ತಿಳಿಸಿದ್ದಾರೆ. ಆನಂತರ ಪೊಲೀಸರು ಬಂದು ದೂರು ದಾಖಲಿಸಿಕೊಂಡಿದ್ದರು ಸಹ ಕ್ರೂರ ಹಲ್ಲೆಯ ಕುರಿತು ಯಾವುದೇ ಹೇಳಿಕೆ ಪಡೆದಿಲ್ಲ ಎಂದು ಅವರ ತಂದೆ ದೂರಿದ್ದಾರೆ.

ಆನಂತರ ನವನೀತಕೃಷ್ಣನ್ ತೆಂಕಾಸಿ ಎಸ್‌ಪಿ ಸುಗಣ ಸಿಂಗ್ ಬಳಿ ದೂರು ದಾಖಲಿಸಿದ್ದಾರೆ. ಆದರೆ ಆರೋಪಿ ಪೊಲೀಸರ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆಸ್ಪತ್ರೆಗೆ ದಾಖಲಿಸಿದ 16 ದಿನದ ನಂತರ ನಮ್ಮ ಮಗ ಸಾವನಪ್ಪಿದ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಆನಂತರ ಪೊಲೀಸರು ಅನುಮಾನಸ್ಪದ ಸಾವಿನ ದೂರು ದಾಖಲಿಸಿಕೊಂಡಿದ್ದಾರೆ.

ಮೃತನ ಮರಣೋತ್ತರ ಪರೀಕ್ಷೆಯನ್ನು ತಿರುನೆಲ್ವೆಲಿ ಮೆಡಿಕಲ್ ಕಾಲೇಜಿನಲ್ಲಿ ಭಾನುವಾರ ನಡೆಸಿದ್ದು ಅದನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಸುರಕ್ಷಿತವಾಗಿವೆ ಎಂದು ಎಸ್‌ಪಿ ತಿಳಿಸಿದ್ದಾರೆ.


ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...