Homeಮುಖಪುಟತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ಪೊಲೀಸರು ತಂದೆ-ಮಗನನ್ನು ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಪೊಲೀಸ್‌ ದೌರ್ಜನ್ಯಕ್ಕೆ ತುತ್ತಾಗಿ 25 ವರ್ಷದ ಯುವಕನೊಬ್ಬ ಸಾವನಪ್ಪಿರುವ ದುರ್ಘಟನೆ ಜರುಗಿದೆ.

ತೆಂಕಾಸಿ ಜಿಲ್ಲೆಯ ಆಟೋಡ್ರೈವರ್ ಈ ಶನಿವಾರ ಮೃತಪಟ್ಟಿದ್ದು, ಅವರು 48 ದಿನಗಳ ಮೊದಲು ಇಬ್ಬರು ಪೊಲೀಸರಿಂದ ತೀವ್ರ ಹಲ್ಲೆಗೆ ಒಳಗಾಗಿ ಒಳ ಗಾಯಗಳು, ರಕ್ತಸ್ರಾವದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಹತ್ಯೆಗೊಳಗಾದ ವ್ಯಕ್ತಿಯ ತಂದೆ ನೀಡಿದ ದೂರಿನ ಪ್ರಕಾರ “ಎನ್ ಕುಮರೇಶನ್ ಎಂಬ ಆಟೋ ಡ್ರೈವರ್‌ ಮೇಲೆ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಕುಮಾರ್ ಎಂಬುವವರು ತೀವ್ರ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಸಿಆರ್‌ಪಿಸಿ 174(3)ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತನ ತಂದೆ ನವನೀತಕೃಷ್ಣನ್ ಮಾತನಾಡಿ “ಕುಮರೇಶನ್‌ಗೆ ಸೆಂಥಿಲ್ ಎಂಬುವವರ ಜೊತೆ ಆಸ್ತಿ ವಿಚಾರಕ್ಕೆ ವಿವಾದವುಂಟಾಗಿತ್ತು. ಈ ವಿಚಾರವಾಗಿ ಸೆಂಥಿಲ್ ನೀಡಿದ ದೂರಿನ ಆಧಾರದಲ್ಲಿ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಕುಮರೇಶನ್‌ನನ್ನು ಮೇ 08ರಂದು ಠಾಣೆಗೆ ಕರೆಸಿಕೊಂಡು ಥಳಿಸಿದ್ದಾರೆ. ಅದನ್ನು ನಾವು ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಮತ್ತಷ್ಟು ಥಳಿಸಿದ್ದಾರೆ” ಎಂದು ದೂರಿದ್ದಾರೆ.

ಮೇ 09ರ ಮಧ್ಯಾಹ್ನ ಆಟೋ ಸ್ಟ್ಯಾಂಡ್‌ನಲ್ಲಿದ್ದ ಕುಮರೇಶನ್‌ನನ್ನು ಮತ್ತೆ ಸಬ್‌ ಇನ್ಸ್‌ಪೆಕ್ಟರ್‌ ಕರಸಿಕೊಂಡಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ವಿವಾದವಾಗಿದೆ. ನನ್ನ ಮಗ ಕುಮರೇಶನ್ ನಾನು ಕೂಡ ನಿಮ್ಮಂತೆಯೇ ಖಾಕಿ ಧರಿಸಿದ್ದೇನೆ ಎಂದಿದ್ದರಿಂದ ಕೋಪಗೊಂಡ ಎಸ್‌ಐ ಮೊಬೈಲ್ ಕಿತ್ತುಕೊಂಡು ಕಳಿಸಿದ್ದಾರೆ. ಈ ಕುರಿತು ಮೇ 10ರಂದು ಪೊಲೀಸ್‌ ಠಾಣೆಗೆ ಹೋದ ಕುಮರೇಶನ್ ಮೇಲೆ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಕ್ರೂರವಾಗಿ ಥಳಿಸಿದ್ದಾರೆ. ಆತನನ್ನು ಮೊಣಕಾಲ ಮೇಲೆ ಕುಳ್ಳಿರಿಸಿ ಒದ್ದಿದ್ದಾರೆ ಎಂದು ನವನೀತಕೃಷ್ಣನ್ ಆರೋಪಿಸಿದ್ದಾರೆ.

ಆನಂತರ ಕುಮರೇಶನ್‌ನನ್ನು ಮನೆಗೆ ಕಳುಹಿಸಲಾಯಿತಾದರೂ ಹಲ್ಲೆಯ ಕುರಿತು ಎಲ್ಲಾದರೂ ಬಾಯಿಬಿಟ್ಟರೆ ಅಪ್ಪ ಮಗನ ವಿರುದ್ಧ ತೀವ್ರ ಕೇಸ್‌ಗಳನ್ನು ಹಾಕಬೇಕಾಗುತ್ತದೆ ಎಂದು ಬೆದರಿಸಿದ್ದಾರೆ. ಇದರಿಂದ ಕುಮರೇಶನ್ ತನ್ನ ಕುಟುಂಬ ಸೇರಿದಂತೆ‌ ಎಲ್ಲಿಯೂ ಸಹ ಹೇಳಿಕೊಂಡಿಲ್ಲ. ಆದರೆ  ದಿನೇ ದಿನೇ ಆತ ಊಟ ಮಾಡುವುದು ಕಡಿಮೆಯಾಗುತ್ತಾ, ವಾಂತಿ ಶುರುವಾಗಿದೆ. ಕೆಲವೊಮ್ಮೆ ರಕ್ತವಾಂತಿಯಾಗುತ್ತಿತ್ತು ಎಂದು ಅವರ ತಂದೆ ಹೇಳಿದ್ದಾರೆ.

ಜೂನ್ 10ರಂದು ಕುಮರೇಶನ್‌ ರಕ್ತವಾಂತಿ ಮಾಡಿಕೊಂಡಿದ್ದಲ್ಲದೇ ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಆಗ ಆತನನ್ನು ಆಸ್ಪತ್ತೆಗೆ ದಾಖಲು ಮಾಡಿದ್ದು ಅಲ್ಲಿಯೂ ಸಹ ಆತ ತನ್ನ ಮೇಲಾದ ಹಲ್ಲೆಯ ಕುರಿತು ಮಾಹಿತಿ ನೀಡಿಲ್ಲ. ಆದರೆ ಮೂರು ದಿನಗಳ ನಂತರ ಆತನ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಾಗ ಅವರನ್ನು ತಿರುನೆಲ್ವೆಲಿ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ಅಲ್ಲಿ ವೈದ್ಯರು ಚಿಕಿತ್ಸೆ ನೀಡುವ ವೇಳೆ ಒಳಗಾಯಗಳು, ಕರುಳು, ಕಿಡ್ನಿಗೆ ತೊಂದರೆ ಮತ್ತು ರಕ್ತಸ್ರಾವ ಉಂಟಾಗಿರುವುದಾಗಿ ತಿಳಿಸಿದ್ದಾರೆ. ಆಗ ಕುಮರೇಶನ್ ತನ್ನ ಮೇಲಾದ ಪೊಲೀಸ್‌ ಹಲ್ಲೆಯ ಕುರಿತು ಬಾಯ್ಬಿಟ್ಟಿದ್ದಾನೆ ಎಂದು ಅವರ ತಂದೆ ತಿಳಿಸಿದ್ದಾರೆ. ಆನಂತರ ಪೊಲೀಸರು ಬಂದು ದೂರು ದಾಖಲಿಸಿಕೊಂಡಿದ್ದರು ಸಹ ಕ್ರೂರ ಹಲ್ಲೆಯ ಕುರಿತು ಯಾವುದೇ ಹೇಳಿಕೆ ಪಡೆದಿಲ್ಲ ಎಂದು ಅವರ ತಂದೆ ದೂರಿದ್ದಾರೆ.

ಆನಂತರ ನವನೀತಕೃಷ್ಣನ್ ತೆಂಕಾಸಿ ಎಸ್‌ಪಿ ಸುಗಣ ಸಿಂಗ್ ಬಳಿ ದೂರು ದಾಖಲಿಸಿದ್ದಾರೆ. ಆದರೆ ಆರೋಪಿ ಪೊಲೀಸರ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆಸ್ಪತ್ರೆಗೆ ದಾಖಲಿಸಿದ 16 ದಿನದ ನಂತರ ನಮ್ಮ ಮಗ ಸಾವನಪ್ಪಿದ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಆನಂತರ ಪೊಲೀಸರು ಅನುಮಾನಸ್ಪದ ಸಾವಿನ ದೂರು ದಾಖಲಿಸಿಕೊಂಡಿದ್ದಾರೆ.

ಮೃತನ ಮರಣೋತ್ತರ ಪರೀಕ್ಷೆಯನ್ನು ತಿರುನೆಲ್ವೆಲಿ ಮೆಡಿಕಲ್ ಕಾಲೇಜಿನಲ್ಲಿ ಭಾನುವಾರ ನಡೆಸಿದ್ದು ಅದನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಸುರಕ್ಷಿತವಾಗಿವೆ ಎಂದು ಎಸ್‌ಪಿ ತಿಳಿಸಿದ್ದಾರೆ.


ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...