Homeಮುಖಪುಟತಮಿಳುನಾಡಿನಲ್ಲಿ ED-ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳ ನಡುವೆ ಮುಂದುವರಿದ ಫೈಟ್

ತಮಿಳುನಾಡಿನಲ್ಲಿ ED-ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳ ನಡುವೆ ಮುಂದುವರಿದ ಫೈಟ್

- Advertisement -
- Advertisement -

ತಮಿಳುನಾಡಿನಲ್ಲಿ ‘ಇಡಿ’ ಅಧಿಕಾರಿ ಅಂಕಿತ್ ತಿವಾರಿ ಬಂಧನದ ನಂತರ ಜಾರಿ ನಿರ್ದೇಶನಾಲಯ (ಇಡಿ) ಮತ್ತು ತಮಿಳುನಾಡಿನ ಭ್ರಷ್ಟಾಚಾರ ನಿಗ್ರಹ ಮತ್ತು ಜಾಗೃತ ಪಡೆ (ಡಿವಿಎಸಿ) ನಡುವೆ ಸಂಘರ್ಷ ನಡೆಯುತ್ತಿದೆ. ಈ ಮಧ್ಯೆ ಮಧುರೈ ನಗರ ಪೊಲೀಸರು, ಡಿವಿಎಸಿ ಅಧಿಕಾರಿಗಳ ಕರ್ತವ್ಯದ ವೇಳೆ ಅಡ್ಡಿಪಡಿಸಿದ ಆರೋಪದಲ್ಲಿ ‘ಇಡಿ’ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಲಂಚ ಪಡೆಯುವಾಗ ಕೇಂದ್ರೀಯ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದ ಅಧಿಕಾರಿ ಅಂಕಿತ್ ಬಂಧನದ ನಂತರ ಮಧುರೈ ‘ಇಡಿ’ ಉಪ ವಲಯ ಕಚೇರಿಯಲ್ಲಿ ತಪಾಸಣೆ ನಡೆಸುತ್ತಿದ್ದಾಗ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿ ಡಿವಿಎಸಿ ಅಧಿಕಾರಿಗಳು ಸಲ್ಲಿಸಿದ ದೂರಿನ ಆಧಾರದ ಮೇಲೆ ತಲ್ಲಕುಲಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

‘ಇಡಿ’ ಅಧಿಕಾರಿಗಳು ಈ ಹಿಂದೆ ತಮಿಳುನಾಡಿನ ಭ್ರಷ್ಟಾಚಾರ ನಿಗ್ರಹ ಮತ್ತು ಜಾಗೃತ ಪಡೆ (ಡಿವಿಎಸಿ) ಅಧಿಕಾರಿಗಳ ವಿರುದ್ಧ ‘ಇಡಿ’ ಉಪ ವಲಯ ಕಚೇರಿಯಿಂದ ಸೂಕ್ಷ್ಮ ದಾಖಲೆಗಳನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣವನ್ನು ದಾಖಲಿಸಿದ್ದರು. ಭ್ರಷ್ಟಾಚಾರ ನಿಗ್ರಹ ಮತ್ತು ಜಾಗೃತ ಪಡೆ ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಸಮರ್ಥಿಸಿಕೊಂಡಿತ್ತು.

35 ಜನರು ತಮ್ಮ ಕಚೇರಿ ಆವರಣವನ್ನು ಪ್ರವೇಶಿಸಿದ್ದಾರೆ ಎಂದು ‘ಇಡಿ’ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಇಡಿ ಡಿ.2ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿತ್ತು. ಈ ಶೋಧ ಕಾನೂನುಬಾಹಿರ ಎಂದು  ಆರೋಪಿಸಿದ ‘ಇಡಿ’ ‘ಡಿವಿಎಸಿ’ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿತ್ತು. ‘ಡಿವಿಎಸಿ’ ಅತಿಕ್ರಮಣ ಮಾಡಿ ತನಿಖೆಗಳಿಗೆ ಸಂಬಂಧಿಸಿದ ವಿವಿಧ ಸೂಕ್ಷ್ಮ ಮತ್ತು ಗೌಪ್ಯ ದಾಖಲೆಗಳನ್ನು ಕಳ್ಳತನ ಮಾಡಿದೆ ಎಂದು ಇಡಿ ಆರೋಪಿಸಿತ್ತು.

ಏನಿದು ಘಟನೆ?

2016ರ ಬ್ಯಾಚ್ ಅಧಿಕಾರಿ ಅಂಕಿತ್ ತಿವಾರಿ ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದರು.  ಕೇಂದ್ರ ಸರ್ಕಾರದ ಮಧುರೈ ಜಾರಿ ಇಲಾಖೆ ಕಚೇರಿಯಲ್ಲಿ ‘ಇಡಿ’ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಂಕಿತ್ ತಿವಾರಿ ದಿಂಡಿಗಲ್ ಬಳಿ ಸರ್ಕಾರಿ ವೈದ್ಯರೊಬ್ಬರಿಂದ 20 ಲಕ್ಷ ರೂಪಾಯಿ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದರು.

ಸರ್ಕಾರಿ ವೈದ್ಯನ ವಿರುದ್ದದ ಕಾನೂನು ಕ್ರಮವನ್ನು ತಪ್ಪಿಸಲು ‘ಇಡಿ’ ಅಧಿಕಾರಿ ತಿವಾರಿ 3 ಕೋಟಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ನಿಮ್ಮ ಮೇಲೆ ದಾಳಿ ನಡೆಸಲು ನನಗೆ ಪ್ರಧಾನಮಂತ್ರಿ ಕಚೇರಿಯಿಂದ ಸೂಚನೆ ಬಂದಿದೆ ಎಂದು ಅಧಿಕಾರಿ ಅಂಕಿತ್ ತಿವಾರಿ ವೈದ್ಯನನ್ನು ನಂಬಿಸಿದ್ದರು. ವೈದ್ಯ 3 ಕೋಟಿ ಹಣ ನೀಡಲು ನಿರಾಕರಿಸಿದಾಗ ಇಬ್ಬರು ಮಾತನಾಡಿಕೊಂಡು 51 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಅದರ ಮೊದಲ ಕಂತು 20 ಲಕ್ಷ ಹಣವನ್ನು ಪಡೆಯಲು ಮುಂದಾದಾಗ ಡಿವಿಎಸಿ ಅಧಿಕಾರಿಗಳು ಬಂಧಿಸಿದ್ದಾರೆ.

ಅಂಕಿತ್‌ನನ್ನು ಬಂಧಿಸಿದ ಬೆನ್ನಲ್ಲೇ ಡಿವಿಎಸಿ ಅಧಿಕಾರಿಗಳು ‘ಇಡಿ’ ಕಚೇರಿ ಮತ್ತು ಅಂಕಿತ್‌ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7(ಎ) ಅಡಿಯಲ್ಲಿ ‘ಇಡಿ’ ಅಧಿಕಾರಿ ಅಂಕಿತ್‌ನನ್ನು ಬಂಧಿಸಲಾಗಿತ್ತು. ಇತ್ತೀಚೆಗೆ ಪ್ರಕರಣದಲ್ಲಿ ಜಾಮೀನು ಕೋರಿ ಅಂಕಿತ್‌ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ‘ಇಡಿ’ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಪುರಾವೆಗಳಿವೆ ಎಂದು ಅವರ ಮನವಿಯನ್ನು ತಿರಸ್ಕರಿಸಲಾಗಿತ್ತು.

ಇದನ್ನು ಓದಿ: ಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...