Homeಮುಖಪುಟತಮಿಳುನಾಡು ಚುನಾವಣೆ: BJPಗೆ 20 ಮತ್ತು PMKಗೆ 23 ಸೀಟು ನೀಡಿದ AIADMK

ತಮಿಳುನಾಡು ಚುನಾವಣೆ: BJPಗೆ 20 ಮತ್ತು PMKಗೆ 23 ಸೀಟು ನೀಡಿದ AIADMK

ತಮಿಳುನಾಡಿನಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಅಷ್ಟು ಮನ್ನಣೆ ಇಲ್ಲ ಎಂಬುದನ್ನು ಇದು ತೋರಿಸುತ್ತದೆ. ಅಲ್ಲೇನಿದ್ದರೂ ಪ್ರಾದೇಶಿಕ ಪಕ್ಷಗಳದ್ದೆ ಮೇಲುಗೈ.

- Advertisement -
- Advertisement -

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ AIADMK ಮೈತ್ರಿಕೂಟವು ಸೀಟು ಹಂಚಿಕೆ ಆರಂಭಿಸಿದೆ. ತಮಿಳುನಾಡಿನ ಒಟ್ಟು 243 ವಿಧಾನಸಭಾ ಕ್ಷೇತ್ರಗಳಲ್ಲಿ ಅದು ರಾಷ್ಟ್ರೀಯ ಪಕ್ಷ ಬಿಜೆಪಿಗೆ 20 ಸ್ಥಾನ ಮತ್ತು ಪ್ರಾದೇಶಿಕ ಪಕ್ಷ PMKಗೆ 23 ಸ್ಥಾನ ಹಂಚಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಸೀಟು ಹಂಚಿಕೆ ಒಪ್ಪಂದಕ್ಕೆ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ, ಉಪಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಸಿ.ಟಿ ರವಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಸಹಿ ಹಾಕಿದ್ದಾರೆ. AIADMK ಮೈತ್ರಿಕೂಟದ ಮತ್ತೊಂದು ಮೈತ್ರಿ ಪಕ್ಷ ನಟ ವಿಜಯಕಾಂತ್‌ರವರ DMDK ಇನ್ನು ಸೀಟು ಹಂಚಿಕೆ ನಿಗಧಿಪಡಿಸಿಲ್ಲ.

ಕಳೆದ ಲೋಕಸಭಾ ಚುನಾವಣೆ ವೇಳೆ AIADMK ಮೈತ್ರಿಕೂಟವು ಭಾರೀ ಹಿನ್ನಡೆ ಅನುಭವಿಸಿತ್ತು. ಒಟ್ಟು 39 ಕ್ಷೇತ್ರಗಳಲ್ಲಿ 38 ಕ್ಷೇತ್ರಗಳಲ್ಲಿ ಅದು ಸೋಲನ್ನು ಅನುಭವಿಸಿತ್ತು. ಬಿಜೆಪಿ ಪಕ್ಷವು 5 ಸ್ಥಾನಗಳಲ್ಲಿ ಸ್ಪರ್ಧಿಸಿ 5 ರಲ್ಲಿಯೂ ಪರಾಭವಗೊಂಡಿತ್ತು.

ಇನ್ನೊಂದು ಕಡೆ ಡಿಎಂಕೆ ಮೈತ್ರಿಕೂಟ ಸೀಟು ಹಂಚಿಕೆಯಲ್ಲಿ ಭಿನ್ನಾಭಿಪ್ರಾಯ ಎದುರಿಸುತ್ತಿದೆ. 2021 ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯು ಸ್ಪಷ್ಟವಾಗಿ ಕಾಂಗ್ರೆಸ್ ಕೇವಲ 20 ಸ್ಥಾನಗಳನ್ನು ಮಾತ್ರ ನೀಡಬಲ್ಲೆವು ಎಂದು ಹೇಳಿದೆ. ಮೊದಲಿಗೆ 18 ಸ್ಥಾನ ನೀಡುವುದಾಗಿ ಹೇಳಿದ ಅದು ಆರಂಭಿಕ ಮಾತುಕತೆಗಳ ನಂತರ 20 ಸ್ಥಾನದ ಆಫರ್ ಮಾಡಿದೆ. ಆದರೆ ಕಾಂಗ್ರೆಸ್ ಕನಿಷ್ಠ 30 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಯಸಿದೆ.

ತಮಿಳುನಾಡಿನಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಅಷ್ಟು ಮನ್ನಣೆ ಇಲ್ಲ ಎಂಬುದನ್ನು ಇದು ತೋರಿಸುತ್ತದೆ. ಅಲ್ಲೇನಿದ್ದರೂ ಪ್ರಾದೇಶಿಕ ಪಕ್ಷಗಳದ್ದೆ ಮೇಲುಗೈ. ಅದಕ್ಕೆ ಸಾಕ್ಷಿ ಎಂಬಂತೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳಿಗೂ ಕೇವಲ ತಲಾ 20 ಸ್ಥಾನಗಳಷ್ಟೇ ನೀಡಲಾಗಿದೆ.


ಇದನ್ನೂ ಓದಿ: ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...