Homeದಲಿತ್ ಫೈಲ್ಸ್ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ.

- Advertisement -
- Advertisement -

ಪೊಲ್ಲಾಚಿ ಅತ್ಯಾಚಾರ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, 22 ವರ್ಷದ ದಲಿತ ಮಹಿಳೆಯ ಮೇಲೆ ಏಳು ತಿಂಗಳ ಅವಧಿಯಲ್ಲಿ ಪದೇ ಪದೇ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.

ಆರೋಪಿಗಳು ಮಹಿಳೆಯ ಖಾಸಗೀ ಸಂಗತಿಗಳನ್ನು ವಿಡಿಯೊ ಮಾಡಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ, ತಿಂಗಳುಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನಲ್ಲಿ ಹರಿಹರನ್ ಅಲಿಯಾಸ್ ಸರವಣನ್ (27) ಎಂಬಾತ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಇದಲ್ಲದೆ, ಹರಿಹರನ್ ಮತ್ತು ಮಹಿಳೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಇದನ್ನು ಸರವಣನ್‌ ಚಿತ್ರೀಕರಿಸಿಕೊಂಡಿದ್ದ.

“ಒಂದು ದಿನ ಹರಿಹರನ್ ತನ್ನ ಸ್ನೇಹಿತರೊಂದಿಗೆ ಇದ್ದಾಗ, ಅವರು ಈ ವೀಡಿಯೊವನ್ನು ನೋಡಿ, ಆತನಿಂದ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಮಹಿಳೆಯನ್ನು ಸಂಪರ್ಕಿಸಿ, ಈ ವೀಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ ಆಗಸ್ಟ್ 2021ರಿಂದ ಹಿಡಿದು ಮಾರ್ಚ್ 2022ರವರೆಗೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಡಿಎಂಕೆ ಪದಾಧಿಕಾರಿ ಮತ್ತು ಮೂವರು ಶಾಲಾ ವಿದ್ಯಾರ್ಥಿಗಳೂ ಇದ್ದಾರೆ.

ಸಂತ್ರಸ್ತೆಯು ಮಹಿಳಾ ಸಹಾಯವಾಣಿಯನ್ನು ಸಂಪರ್ಕಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. “ಸಂತ್ರಸ್ತಯು ಮಹಿಳಾ ಸಹಾಯವಾಣಿ ಸಂಖ್ಯೆ 181 ಅನ್ನು ಸಂಪರ್ಕಿಸಲು ನಿರ್ಧರಿಸಿದರು. ತನ್ನ ಮೇಲಾದ ಅತ್ಯಾಚಾರವನ್ನು ತಿಳಿಸಿದರು. ನಂತರ ಪ್ರಕರಣವನ್ನು ವಿರುದುನಗರ ಗ್ರಾಮಾಂತರ ಪೊಲೀಸರು ಕೈಗೆತ್ತಿಕೊಂಡರು” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಮಹಿಳೆ ತನ್ನ ಮೇಲಾಗುತ್ತಿರುವ ದೌರ್ಜನ್ಯವನ್ನು ನೆರೆಹೊರೆಯವರಾದ ಮಾದಸ್ವಾಮಿ (37) ಎಂಬ ವ್ಯಕ್ತಿಯಲ್ಲಿ ಹೇಳಿಕೊಂಡು ಸಹಾಯ ಕೋರಿದ್ದರು. ಆದರೆ ಆತನೂ ಸಂತ್ರಸ್ತೆಗೆ ಬೆದರಿಕೆ ಹಾಕಿ ಲೈಂಗಿಕ ಕಿರುಕುಳ ನೀಡಲು ವೀಡಿಯೊವನ್ನು ಬಳಸಿಕೊಂಡನು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕೇರಳ: ಅತ್ಯಾಚಾರ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ಮಾರ್ಚ್ 20, ಭಾನುವಾರದಂದು ಮಹಿಳೆಯ ದೂರಿನ ಆಧಾರದ ಮೇಲೆ ಅದೇ ದಿನ ಎಫ್‌ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್) (ಅತ್ಯಾಚಾರ), 354 (ಸಿ) (ವೋಯರಿಸಂ/ಇತರರು ಬೆತ್ತಲೆಯಾಗಿದ್ದಾಗ ಅಥವಾ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವಾಗ ಅವರನ್ನು ನೋಡುವುದರಿಂದ ಲೈಂಗಿಕ ಆನಂದವನ್ನು ಪಡೆಯುವ ಅಭ್ಯಾಸ), 354 (ಡಿ) (ಹಿಂಬಾಲಿಸುವಿಕೆ), ಮಾಹಿತಿ ತಂತ್ರಜ್ಞಾನ ಕಾಯಿದೆಯ 66(ಇ) (ಗೌಪ್ಯತೆಯ ಉಲ್ಲಂಘನೆ), 3(1)(ಡಬ್ಲ್ಯೂ)(1) (ಅಪರಾಧಗಳ ದೌರ್ಜನ್ಯಗಳಿಗೆ ಶಿಕ್ಷೆ), 3(2)(ವಿ) (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಹರಿಹರನ್, ಮಾದಸಾಮಿ (37), ಪ್ರವೀಣ್ (22), ಜುನೈತ್ ಅಹಮದ್ (27), 18 ವರ್ಷದ ಒಬ್ಬ ಯುವಕ, 17 ವರ್ಷದ ಇಬ್ಬರು ಯುವಕರು, 15 ವರ್ಷದ ಒಬ್ಬ ಹುಡುಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಲ್ಲ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಜುನೈತ್ ಅಹ್ಮದ್ ಡಿಎಂಕೆ ಪಕ್ಷದ ಪದಾಧಿಕಾರಿಯಾಗಿದ್ದಾನೆ. ಈ ವ್ಯಕ್ತಿಗಳು ಬೇರೆ ಯಾವುದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಪೊಲ್ಲಾಚಿ ಪ್ರಕರಣ ಪುನಾರಾವರ್ತನೆ

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ. ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣವು ತಮಿಳುನಾಡಿನ ಕೊಯಮತ್ತೂರಿನ ಪೊಲ್ಲಾಚಿಯಲ್ಲಿ ಬೆಳಕಿಗೆ ಬಂದಿತ್ತು. ಗ್ಯಾಂಗ್‌ವೊಂದು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಅದನ್ನು ಚಿತ್ರೀಕರಿಸಿ ಬ್ಲಾಕ್ಮೇಲ್ ಮಾಡುತ್ತಿತ್ತು.

ಈ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರೊಂದಿಗೆ ಸ್ನೇಹ ಬೆಳೆಸಿದ ನಂತರ ಪ್ರತ್ಯೇಕ ಸ್ಥಳಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿ ಕೃತ್ಯವನ್ನು ಚಿತ್ರೀಕರಿಸುತ್ತಿತ್ತು. ನಂತರ ವೀಡಿಯೊಗಳನ್ನು ಲೈಂಗಿಕ ಅನುಕೂಲಕ್ಕಾಗಿ ಅಥವಾ ಹಣಕ್ಕಾಗಿ ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡಲು ಬಳಸುತ್ತಿತ್ತು. 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ ಬಳಿಕ ಈ ಗ್ಯಾಂಗ್ ಬೆಳಕಿಗೆ ಬಂದಿತ್ತು.


ಇದನ್ನೂ ಓದಿರಿ: 11 ವರ್ಷದ ಬಾಲಕಿಯ ಮೇಲೆ ತಂದೆ, ಸಹೋದರ, ಅಜ್ಜ ಮತ್ತು ಚಿಕ್ಕಪ್ಪನಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...