Homeದಲಿತ್ ಫೈಲ್ಸ್ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ.

- Advertisement -
- Advertisement -

ಪೊಲ್ಲಾಚಿ ಅತ್ಯಾಚಾರ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, 22 ವರ್ಷದ ದಲಿತ ಮಹಿಳೆಯ ಮೇಲೆ ಏಳು ತಿಂಗಳ ಅವಧಿಯಲ್ಲಿ ಪದೇ ಪದೇ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.

ಆರೋಪಿಗಳು ಮಹಿಳೆಯ ಖಾಸಗೀ ಸಂಗತಿಗಳನ್ನು ವಿಡಿಯೊ ಮಾಡಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ, ತಿಂಗಳುಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನಲ್ಲಿ ಹರಿಹರನ್ ಅಲಿಯಾಸ್ ಸರವಣನ್ (27) ಎಂಬಾತ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಇದಲ್ಲದೆ, ಹರಿಹರನ್ ಮತ್ತು ಮಹಿಳೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಇದನ್ನು ಸರವಣನ್‌ ಚಿತ್ರೀಕರಿಸಿಕೊಂಡಿದ್ದ.

“ಒಂದು ದಿನ ಹರಿಹರನ್ ತನ್ನ ಸ್ನೇಹಿತರೊಂದಿಗೆ ಇದ್ದಾಗ, ಅವರು ಈ ವೀಡಿಯೊವನ್ನು ನೋಡಿ, ಆತನಿಂದ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಮಹಿಳೆಯನ್ನು ಸಂಪರ್ಕಿಸಿ, ಈ ವೀಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ ಆಗಸ್ಟ್ 2021ರಿಂದ ಹಿಡಿದು ಮಾರ್ಚ್ 2022ರವರೆಗೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಡಿಎಂಕೆ ಪದಾಧಿಕಾರಿ ಮತ್ತು ಮೂವರು ಶಾಲಾ ವಿದ್ಯಾರ್ಥಿಗಳೂ ಇದ್ದಾರೆ.

ಸಂತ್ರಸ್ತೆಯು ಮಹಿಳಾ ಸಹಾಯವಾಣಿಯನ್ನು ಸಂಪರ್ಕಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. “ಸಂತ್ರಸ್ತಯು ಮಹಿಳಾ ಸಹಾಯವಾಣಿ ಸಂಖ್ಯೆ 181 ಅನ್ನು ಸಂಪರ್ಕಿಸಲು ನಿರ್ಧರಿಸಿದರು. ತನ್ನ ಮೇಲಾದ ಅತ್ಯಾಚಾರವನ್ನು ತಿಳಿಸಿದರು. ನಂತರ ಪ್ರಕರಣವನ್ನು ವಿರುದುನಗರ ಗ್ರಾಮಾಂತರ ಪೊಲೀಸರು ಕೈಗೆತ್ತಿಕೊಂಡರು” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಮಹಿಳೆ ತನ್ನ ಮೇಲಾಗುತ್ತಿರುವ ದೌರ್ಜನ್ಯವನ್ನು ನೆರೆಹೊರೆಯವರಾದ ಮಾದಸ್ವಾಮಿ (37) ಎಂಬ ವ್ಯಕ್ತಿಯಲ್ಲಿ ಹೇಳಿಕೊಂಡು ಸಹಾಯ ಕೋರಿದ್ದರು. ಆದರೆ ಆತನೂ ಸಂತ್ರಸ್ತೆಗೆ ಬೆದರಿಕೆ ಹಾಕಿ ಲೈಂಗಿಕ ಕಿರುಕುಳ ನೀಡಲು ವೀಡಿಯೊವನ್ನು ಬಳಸಿಕೊಂಡನು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕೇರಳ: ಅತ್ಯಾಚಾರ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ಮಾರ್ಚ್ 20, ಭಾನುವಾರದಂದು ಮಹಿಳೆಯ ದೂರಿನ ಆಧಾರದ ಮೇಲೆ ಅದೇ ದಿನ ಎಫ್‌ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್) (ಅತ್ಯಾಚಾರ), 354 (ಸಿ) (ವೋಯರಿಸಂ/ಇತರರು ಬೆತ್ತಲೆಯಾಗಿದ್ದಾಗ ಅಥವಾ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವಾಗ ಅವರನ್ನು ನೋಡುವುದರಿಂದ ಲೈಂಗಿಕ ಆನಂದವನ್ನು ಪಡೆಯುವ ಅಭ್ಯಾಸ), 354 (ಡಿ) (ಹಿಂಬಾಲಿಸುವಿಕೆ), ಮಾಹಿತಿ ತಂತ್ರಜ್ಞಾನ ಕಾಯಿದೆಯ 66(ಇ) (ಗೌಪ್ಯತೆಯ ಉಲ್ಲಂಘನೆ), 3(1)(ಡಬ್ಲ್ಯೂ)(1) (ಅಪರಾಧಗಳ ದೌರ್ಜನ್ಯಗಳಿಗೆ ಶಿಕ್ಷೆ), 3(2)(ವಿ) (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಹರಿಹರನ್, ಮಾದಸಾಮಿ (37), ಪ್ರವೀಣ್ (22), ಜುನೈತ್ ಅಹಮದ್ (27), 18 ವರ್ಷದ ಒಬ್ಬ ಯುವಕ, 17 ವರ್ಷದ ಇಬ್ಬರು ಯುವಕರು, 15 ವರ್ಷದ ಒಬ್ಬ ಹುಡುಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಲ್ಲ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಜುನೈತ್ ಅಹ್ಮದ್ ಡಿಎಂಕೆ ಪಕ್ಷದ ಪದಾಧಿಕಾರಿಯಾಗಿದ್ದಾನೆ. ಈ ವ್ಯಕ್ತಿಗಳು ಬೇರೆ ಯಾವುದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಪೊಲ್ಲಾಚಿ ಪ್ರಕರಣ ಪುನಾರಾವರ್ತನೆ

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ. ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣವು ತಮಿಳುನಾಡಿನ ಕೊಯಮತ್ತೂರಿನ ಪೊಲ್ಲಾಚಿಯಲ್ಲಿ ಬೆಳಕಿಗೆ ಬಂದಿತ್ತು. ಗ್ಯಾಂಗ್‌ವೊಂದು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಅದನ್ನು ಚಿತ್ರೀಕರಿಸಿ ಬ್ಲಾಕ್ಮೇಲ್ ಮಾಡುತ್ತಿತ್ತು.

ಈ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರೊಂದಿಗೆ ಸ್ನೇಹ ಬೆಳೆಸಿದ ನಂತರ ಪ್ರತ್ಯೇಕ ಸ್ಥಳಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿ ಕೃತ್ಯವನ್ನು ಚಿತ್ರೀಕರಿಸುತ್ತಿತ್ತು. ನಂತರ ವೀಡಿಯೊಗಳನ್ನು ಲೈಂಗಿಕ ಅನುಕೂಲಕ್ಕಾಗಿ ಅಥವಾ ಹಣಕ್ಕಾಗಿ ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡಲು ಬಳಸುತ್ತಿತ್ತು. 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ ಬಳಿಕ ಈ ಗ್ಯಾಂಗ್ ಬೆಳಕಿಗೆ ಬಂದಿತ್ತು.


ಇದನ್ನೂ ಓದಿರಿ: 11 ವರ್ಷದ ಬಾಲಕಿಯ ಮೇಲೆ ತಂದೆ, ಸಹೋದರ, ಅಜ್ಜ ಮತ್ತು ಚಿಕ್ಕಪ್ಪನಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....