Homeದಲಿತ್ ಫೈಲ್ಸ್ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ.

- Advertisement -
- Advertisement -

ಪೊಲ್ಲಾಚಿ ಅತ್ಯಾಚಾರ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, 22 ವರ್ಷದ ದಲಿತ ಮಹಿಳೆಯ ಮೇಲೆ ಏಳು ತಿಂಗಳ ಅವಧಿಯಲ್ಲಿ ಪದೇ ಪದೇ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.

ಆರೋಪಿಗಳು ಮಹಿಳೆಯ ಖಾಸಗೀ ಸಂಗತಿಗಳನ್ನು ವಿಡಿಯೊ ಮಾಡಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ, ತಿಂಗಳುಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನಲ್ಲಿ ಹರಿಹರನ್ ಅಲಿಯಾಸ್ ಸರವಣನ್ (27) ಎಂಬಾತ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಇದಲ್ಲದೆ, ಹರಿಹರನ್ ಮತ್ತು ಮಹಿಳೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಇದನ್ನು ಸರವಣನ್‌ ಚಿತ್ರೀಕರಿಸಿಕೊಂಡಿದ್ದ.

“ಒಂದು ದಿನ ಹರಿಹರನ್ ತನ್ನ ಸ್ನೇಹಿತರೊಂದಿಗೆ ಇದ್ದಾಗ, ಅವರು ಈ ವೀಡಿಯೊವನ್ನು ನೋಡಿ, ಆತನಿಂದ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಮಹಿಳೆಯನ್ನು ಸಂಪರ್ಕಿಸಿ, ಈ ವೀಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ ಆಗಸ್ಟ್ 2021ರಿಂದ ಹಿಡಿದು ಮಾರ್ಚ್ 2022ರವರೆಗೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಡಿಎಂಕೆ ಪದಾಧಿಕಾರಿ ಮತ್ತು ಮೂವರು ಶಾಲಾ ವಿದ್ಯಾರ್ಥಿಗಳೂ ಇದ್ದಾರೆ.

ಸಂತ್ರಸ್ತೆಯು ಮಹಿಳಾ ಸಹಾಯವಾಣಿಯನ್ನು ಸಂಪರ್ಕಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. “ಸಂತ್ರಸ್ತಯು ಮಹಿಳಾ ಸಹಾಯವಾಣಿ ಸಂಖ್ಯೆ 181 ಅನ್ನು ಸಂಪರ್ಕಿಸಲು ನಿರ್ಧರಿಸಿದರು. ತನ್ನ ಮೇಲಾದ ಅತ್ಯಾಚಾರವನ್ನು ತಿಳಿಸಿದರು. ನಂತರ ಪ್ರಕರಣವನ್ನು ವಿರುದುನಗರ ಗ್ರಾಮಾಂತರ ಪೊಲೀಸರು ಕೈಗೆತ್ತಿಕೊಂಡರು” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಮಹಿಳೆ ತನ್ನ ಮೇಲಾಗುತ್ತಿರುವ ದೌರ್ಜನ್ಯವನ್ನು ನೆರೆಹೊರೆಯವರಾದ ಮಾದಸ್ವಾಮಿ (37) ಎಂಬ ವ್ಯಕ್ತಿಯಲ್ಲಿ ಹೇಳಿಕೊಂಡು ಸಹಾಯ ಕೋರಿದ್ದರು. ಆದರೆ ಆತನೂ ಸಂತ್ರಸ್ತೆಗೆ ಬೆದರಿಕೆ ಹಾಕಿ ಲೈಂಗಿಕ ಕಿರುಕುಳ ನೀಡಲು ವೀಡಿಯೊವನ್ನು ಬಳಸಿಕೊಂಡನು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕೇರಳ: ಅತ್ಯಾಚಾರ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ಮಾರ್ಚ್ 20, ಭಾನುವಾರದಂದು ಮಹಿಳೆಯ ದೂರಿನ ಆಧಾರದ ಮೇಲೆ ಅದೇ ದಿನ ಎಫ್‌ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್) (ಅತ್ಯಾಚಾರ), 354 (ಸಿ) (ವೋಯರಿಸಂ/ಇತರರು ಬೆತ್ತಲೆಯಾಗಿದ್ದಾಗ ಅಥವಾ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವಾಗ ಅವರನ್ನು ನೋಡುವುದರಿಂದ ಲೈಂಗಿಕ ಆನಂದವನ್ನು ಪಡೆಯುವ ಅಭ್ಯಾಸ), 354 (ಡಿ) (ಹಿಂಬಾಲಿಸುವಿಕೆ), ಮಾಹಿತಿ ತಂತ್ರಜ್ಞಾನ ಕಾಯಿದೆಯ 66(ಇ) (ಗೌಪ್ಯತೆಯ ಉಲ್ಲಂಘನೆ), 3(1)(ಡಬ್ಲ್ಯೂ)(1) (ಅಪರಾಧಗಳ ದೌರ್ಜನ್ಯಗಳಿಗೆ ಶಿಕ್ಷೆ), 3(2)(ವಿ) (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಹರಿಹರನ್, ಮಾದಸಾಮಿ (37), ಪ್ರವೀಣ್ (22), ಜುನೈತ್ ಅಹಮದ್ (27), 18 ವರ್ಷದ ಒಬ್ಬ ಯುವಕ, 17 ವರ್ಷದ ಇಬ್ಬರು ಯುವಕರು, 15 ವರ್ಷದ ಒಬ್ಬ ಹುಡುಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಲ್ಲ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಜುನೈತ್ ಅಹ್ಮದ್ ಡಿಎಂಕೆ ಪಕ್ಷದ ಪದಾಧಿಕಾರಿಯಾಗಿದ್ದಾನೆ. ಈ ವ್ಯಕ್ತಿಗಳು ಬೇರೆ ಯಾವುದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಪೊಲ್ಲಾಚಿ ಪ್ರಕರಣ ಪುನಾರಾವರ್ತನೆ

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ. ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣವು ತಮಿಳುನಾಡಿನ ಕೊಯಮತ್ತೂರಿನ ಪೊಲ್ಲಾಚಿಯಲ್ಲಿ ಬೆಳಕಿಗೆ ಬಂದಿತ್ತು. ಗ್ಯಾಂಗ್‌ವೊಂದು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಅದನ್ನು ಚಿತ್ರೀಕರಿಸಿ ಬ್ಲಾಕ್ಮೇಲ್ ಮಾಡುತ್ತಿತ್ತು.

ಈ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರೊಂದಿಗೆ ಸ್ನೇಹ ಬೆಳೆಸಿದ ನಂತರ ಪ್ರತ್ಯೇಕ ಸ್ಥಳಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿ ಕೃತ್ಯವನ್ನು ಚಿತ್ರೀಕರಿಸುತ್ತಿತ್ತು. ನಂತರ ವೀಡಿಯೊಗಳನ್ನು ಲೈಂಗಿಕ ಅನುಕೂಲಕ್ಕಾಗಿ ಅಥವಾ ಹಣಕ್ಕಾಗಿ ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡಲು ಬಳಸುತ್ತಿತ್ತು. 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ ಬಳಿಕ ಈ ಗ್ಯಾಂಗ್ ಬೆಳಕಿಗೆ ಬಂದಿತ್ತು.


ಇದನ್ನೂ ಓದಿರಿ: 11 ವರ್ಷದ ಬಾಲಕಿಯ ಮೇಲೆ ತಂದೆ, ಸಹೋದರ, ಅಜ್ಜ ಮತ್ತು ಚಿಕ್ಕಪ್ಪನಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...