Homeದಲಿತ್ ಫೈಲ್ಸ್ತಮಿಳುನಾಡು| ಪ್ರಬಲ ಜಾತಿ ಯುವತಿಯೊಂದಿಗೆ ಸಂಬಂಧ; ದಲಿತ ಯುವಕನ ಕೊಲೆ

ತಮಿಳುನಾಡು| ಪ್ರಬಲ ಜಾತಿ ಯುವತಿಯೊಂದಿಗೆ ಸಂಬಂಧ; ದಲಿತ ಯುವಕನ ಕೊಲೆ

- Advertisement -
- Advertisement -

ಪ್ರಬಲ ಜಾತಿ ಯುವತಿಯೊಂದಿಗೆ ಸಂಬಂಧದ ಆರೋಪದ ಮೇಲೆ ಪರಯರ್ ಸಮುದಾಯದ 28 ವರ್ಷದ ದಲಿತ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಸೆಪ್ಟೆಂಬರ್ 15 ರ ಸೋಮವಾರ ತಡರಾತ್ರಿ ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯಲ್ಲಿ ನಡೆದಿದೆ ಎಂದು ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಯುವಕನ ಹತ್ಯೆಯು ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದು, ಪದೇಪದೇ ದೂರುಗಳು ಬಂದರೂ ಪೊಲೀಸರು ಅಪರಾಧವನ್ನು ತಡೆಯಲು ವಿಫಲರಾಗಿದ್ದಾರೆ ಎಂದು ರಾಜಕೀಯ ನಾಯಕರು ಆರೋಪಿಸಿದ್ದಾರೆ.

ಮೃತನನ್ನು ಡಿಎಂಇಯಲ್ಲಿ ಡಿಪ್ಲೊಮಾ ಪದವೀಧರ ಮತ್ತು ಆದಿಯಮಂಗಲಂ ಗ್ರಾಮದ ದ್ವಿಚಕ್ರ ವಾಹನ ಮೆಕ್ಯಾನಿಕ್ ಆಗಿರುವ ಕೆ. ವೈರಮುತ್ತು ಎಂದು ಗುರುತಿಸಲಾಗಿದ್ದು, ಚೆನ್ನೈನಲ್ಲಿ ಉದ್ಯೋಗದಲ್ಲಿರುವ ಎಂಬಿಎ ಪದವೀಧರೆ ಮಾಲಿನಿ (26) ಅವರೊಂದಿಗೆ ಹಲವು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ. ಆಕೆಯ ಕುಟುಂಬವು ಈ ಸಂಬಂಧವನ್ನು ವಿರೋಧಿಸಿತ್ತು.

ವರದಿಗಳ ಪ್ರಕಾರ, ರಾತ್ರಿ 10.30 ರ ಸುಮಾರಿಗೆ ವೈರಮುತ್ತು ಮನೆಗೆ ಹೋಗುತ್ತಿದ್ದಾಗ, ಪುರುಷರ ಗುಂಪೊಂದು ಅವರನ್ನು ಅಡ್ಡಗಟ್ಟಿ ಕುಡುಗೋಲುಗಳಿಂದ ಹಲ್ಲೆ ನಡೆಸಿತು. ಅವರ ಕುತ್ತಿಗೆ ಮತ್ತು ಮಣಿಕಟ್ಟುಗಳಿಗೆ ಆಳವಾದ ಗಾಯಗಳಾಗಿದ್ದು, ಗಾಯಾಳುವನ್ನು ಕೂಡಲೇ ಮೈಲಾಡುತುರೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು.

ಮಾಲಿನಿಯ ತಂದೆ ಪರೈಯರ್ ಸಮುದಾಯಕ್ಕೆ ಸೇರಿದವರಾಗಿದ್ದರೂ, ತಾಯಿ ವಿಜಯಾ ಹಿಂದುಳಿದ ವರ್ಗ (ಬಿಸಿ) ಚೆಟ್ಟಿಯಾರ್ ಸಮುದಾಯದವರು ಎಂದು ವರದಿಯಾಗಿದೆ. ಮಾಲಿನಿಯ ವೈರಮುತ್ತು ಜೊತೆಗಿನ ಸಂಬಂಧ ಮತ್ತು ಅವರ ವಿವಾಹ ಯೋಜನೆಗಳನ್ನು ವಿಜಯಾ ತೀವ್ರವಾಗಿ ವಿರೋಧಿಸಿದ್ದರು ಎಂದು ಹೇಳಲಾಗಿದೆ.

ಸೆಪ್ಟೆಂಬರ್ 14 ರಂದು, ಪೊಲೀಸರು ಎರಡು ಕುಟುಂಬಗಳ ನಡುವೆ ಮಧ್ಯಸ್ಥಿಕೆ ವಹಿಸಿದ್ದರು. ಮಾಲಿನಿ ವೈರಮುತ್ತು ಅವರನ್ನು ಮದುವೆಯಾಗುವ ನಿರ್ಧಾರವನ್ನು ಪ್ರತಿಪಾದಿಸಿದರು. ಆದರೆ, ಅವರ ಕುಟುಂಬದ ಪ್ರಬಲ ವಿರೋಧದ ನಂತರವೂ ಯುವಕನೊಂದಿಗೆ ವಾಸಿಸುತ್ತಿದ್ದರು. ಅವರ ಕುಟುಂಬವು ಮದುವೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪೊಲೀಸರಿಗೆ ಲಿಖಿತ ಹೇಳಿಕೆಯನ್ನೂ ನೀಡಿತ್ತು.

ವೈರಮುತ್ತು ಹತ್ಯೆ ಖಂಡಿಸಿ ವಿವಿಧ ಸಂಘಟನೆಗಳಿಂದ ರಸ್ತೆ ತಡೆದು ಪ್ರತಿಭಟನೆ

ಕೊಲೆಯಾದ ದಿನ, ಮಾಲಿನಿ ತಮ್ಮ ಮದುವೆಯನ್ನು ನೋಂದಾಯಿಸಲು ದಾಖಲೆಗಳನ್ನು ಸಂಗ್ರಹಿಸಲು ಚೆನ್ನೈಗೆ ಪ್ರಯಾಣ ಬೆಳೆಸಿದ್ದರು. ಆ ರಾತ್ರಿ, ವೈರಮುತ್ತು ಅವರನ್ನು ಅಡ್ಡಗಟ್ಟಿ ಕೊಲ್ಲಲಾಯಿತು.

ವೈರಮುತ್ತು ಅವರ ತಾಯಿ ರಾಜಲಕ್ಷ್ಮಿ ಅವರ ದೂರಿನ ನಂತರ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ಕು ವಿಶೇಷ ತಂಡಗಳನ್ನು ರಚಿಸಿದರು. ಮಾಲಿನಿಯ ಸಹೋದರರಾದ ಗುಗನ್ ಮತ್ತು ಗುಣಲ್ ಸೇರಿದಂತೆ ಕನಿಷ್ಠ 10 ಶಂಕಿತರನ್ನು ಕೊಲೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಬಂಧಿಸಲಾಗಿದೆ.

ಈ ಹತ್ಯೆಯು ಮೈಲಾಡುತುರೈನಲ್ಲಿ ಪ್ರತಿಭಟನೆಗೆ ಕಾರಣವಾಗಿದ್ದು, ಮಾಲಿನಿ, ವೈರಮುತ್ತು ಅವರ ಸಂಬಂಧಿಕರು ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) ಸಿಪಿಐ(ಎಂ), ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ), ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಮತ್ತು ತಮಿಳುನಾಡು ಅಸ್ಪೃಶ್ಯತಾ ನಿರ್ಮೂಲನಾ ರಂಗದ ಸದಸ್ಯರು ಸೇರಿದಂತೆ 150 ಕ್ಕೂ ಹೆಚ್ಚು ಜನರು ಮೈಲಾಡುತುರೈ ಸರ್ಕಾರಿ ಆಸ್ಪತ್ರೆ ಬಳಿ ಮತ್ತು ಮೈಲಾಡುತುರೈ-ಕುಂಭಕೋಣಂ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು.

ವಿಜಯ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ವೈರಮುತ್ತು ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ವೈರಮುತ್ತು ಅವರ ಶವವನ್ನು ಸ್ವೀಕರಿಸಲು ನಿರಾಕರಿಸಿದ್ದರಿಂದ ಮಂಗಳವಾರ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ಸಂಚಾರ ಅಸ್ತವ್ಯಸ್ತವಾಯಿತು.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಹತ್ಯೆಯನ್ನು ಖಂಡಿಸಿದರು, ಇದನ್ನು ಜಾತಿ ಆಧಾರಿತ ಕೊಲೆ ಎಂದು ಬಣ್ಣಿಸಿದರು ಮತ್ತು ಪದೇ ಪದೇ ಬೆದರಿಕೆಗಳು ಮತ್ತು ದೂರುಗಳ ಹೊರತಾಗಿಯೂ, ಪೊಲೀಸರು ವೈರಮುತ್ತು ಅವರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಚೆನ್ನೈ| ಅನ್ಯಜಾತಿ ಯುವತಿಯನ್ನು ಭೇಟಿಯಾದ ದಲಿತ ಅಪ್ರಾಪ್ತನನ್ನು ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...