Homeಮುಖಪುಟತಮಿಳುನಾಡು | ಎಸ್‌ಐಆರ್‌ ಬಹಿಷ್ಕರಿಸಿದ ಕಂದಾಯ ಸಿಬ್ಬಂದಿ : ರಾಜ್ಯವ್ಯಾಪಿ ಪ್ರತಿಭಟನೆ

ತಮಿಳುನಾಡು | ಎಸ್‌ಐಆರ್‌ ಬಹಿಷ್ಕರಿಸಿದ ಕಂದಾಯ ಸಿಬ್ಬಂದಿ : ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸಿರುವ ತಮಿಳುನಾಡಿನ ಕಂದಾಯ ಸಂಘಗಳ ಒಕ್ಕೂಟದ (ಎಫ್‌ಇಆರ್‌ಎ) ಸದಸ್ಯರು ಮಂಗಳವಾರದಿಂದ (ನವೆಂಬರ್ 18) ಪ್ರತಿಭಟನೆ ಆರಂಭಿಸಿದ್ದಾರೆ.

ಅತಿಯಾದ ಕೆಲಸದ ಒತ್ತಡ, ಸಾಕಷ್ಟು ಸಿಬ್ಬಂದಿ ಇಲ್ಲದಿರುವುದು, ಗಡುವಿನ ಒತ್ತಡ, ಸಾಕಷ್ಟು ತರಬೇತಿ ನೀಡದಿರುವುದು ಈ ಎಲ್ಲಾ ಸಮಸ್ಯೆಗಳಿಗೆ ಆಡಳಿತದಿಂದ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿ ಎಸ್‌ಐಆರ್‌ (ಸಂಬಂಧಿತ ದಾಖಲೆಗಳ ಡಿಜಿಟಲೈಸೇಶನ್ ಮತ್ತು ದೃಢೀಕರಣ ಕಾರ್ಯ) ಪ್ರಕ್ರಿಯೆ ಬಹಿಷ್ಕರಿಸಿದ್ದಾರೆ.

ಒಕ್ಕೂಟದ ಸದಸ್ಯರು ಬಹಿಷ್ಕಾರ ಆರಂಭಕ್ಕೂ ಮುನ್ನ, ಸೋಮವಾರ (ನವೆಂಬರ್ 17) ಸಂಜೆ ನಡೆದ “ಪೆರುಂದಿರಲ್ (ಸಾಮೂಹಿಕ ಅರ್ಜಿ) ಕಾರ್ಯಕ್ರಮ”ದಲ್ಲಿ ರಾಜ್ಯದ 32 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ (ಕಲೆಕ್ಟರ್‌ಗಳಿಗೆ) ತಮ್ಮ ಬೇಡಿಕೆಗಳ ಪತ್ರ ಸಲ್ಲಿಸಿದ್ದಾರೆ.

ಮಂಗಳವಾರದಿಂದ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಒಕ್ಕೂಟ ತಿಳಿಸಿದೆ. “ಇಂದಿನಿಂದ (ಮಂಗಳವಾರ) ನಾವು ಎಸ್‌ಐಆರ್‌ಗೆ ಸಂಬಂಧಿಸಿದ ಯಾವುದೇ ಕೆಲಸಕ್ಕೆ ಹಾಜರಾಗುತ್ತಿಲ್ಲ” ಎಂದು ಎಫ್‌ಇಆರ್‌ಎ ರಾಜ್ಯ ಸಂಯೋಜಕ ಎಂ.ಪಿ ಮುರುಗಯ್ಯನ್ ಹೇಳಿದ್ದಾರೆ.

ಎಸ್‌ಐಆರ್‌ ಸಂಬಂಧಿತ ಕೆಲಸಗಳನ್ನು ಮಾತ್ರ ಬಹಿಷ್ಕರಿಸಿದ್ದೇವೆ. ಕಂದಾಯ ಇಲಾಖೆಯ ನಿಯಮಿತ ಕೆಲಸಗಳು ಮುಂದುವರಿಯಲಿದ್ದು, ಪ್ರತಿಭಟನೆಯಿಂದ ಅದರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುರುಗಯ್ಯನ್ ತಿಳಿಸಿದ್ದಾರೆ.

ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಎಲ್ಲಾ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕು, ಹೆಚ್ಚುವರಿ ಬೂತ್ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಬೇಕು ಮತ್ತು ಬಿಎಲ್‌ಒ ಹಂತದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಎಸ್‌ಐಆರ್ ಬಹಿಷ್ಕಾರ ನಡೆಸಲಾಗುತ್ತಿದೆ.

ಜಿಲ್ಲಾಧಿಕಾರಿಗಳು ಮಧ್ಯರಾತ್ರಿಯವರೆಗೆ ಪರಿಶೀಲನಾ ಸಭೆಗಳನ್ನು ನಡೆಸುವುದನ್ನು ಮತ್ತು ಪರಿಶೀಲನೆಯ ಹೆಸರಿನಲ್ಲಿ ಪ್ರತಿದಿನ ಮೂರು ವಿಡಿಯೋ ಕಾನ್ಫರೆನ್ಸ್‌ ನಡೆಸುವುದನ್ನು ಒಕ್ಕೂಟ ವಿರೋಧಿಸಿದೆ.

ಡಿಸೆಂಬರ್ 4 ರಂದು ಮುಕ್ತಾಯಗೊಳ್ಳಲಿರುವ ಎಸ್‌ಐಆರ್ ಪ್ರಕ್ರಿಯೆಯ ಫಾರ್ಮ್‌ಗಳನ್ನು ವಿತರಿಸುವುದು ಮತ್ತು ಸಂಗ್ರಹಿಸುವುದು, ಅವುಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದು ಮತ್ತು ಪರಿಶೀಲನಾ ಸಭೆಗಳನ್ನು ನಡೆಸುವುದನ್ನು ಕಂದಾಯ ಇಲಾಖೆಯ ಸಿಬ್ಬಂದಿಗೆ ವಹಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...