Homeಮುಖಪುಟತಮಿಳುನಾಡು | ಎಸ್‌ಐಆರ್‌ ಬಹಿಷ್ಕರಿಸಿದ ಕಂದಾಯ ಸಿಬ್ಬಂದಿ : ರಾಜ್ಯವ್ಯಾಪಿ ಪ್ರತಿಭಟನೆ

ತಮಿಳುನಾಡು | ಎಸ್‌ಐಆರ್‌ ಬಹಿಷ್ಕರಿಸಿದ ಕಂದಾಯ ಸಿಬ್ಬಂದಿ : ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸಿರುವ ತಮಿಳುನಾಡಿನ ಕಂದಾಯ ಸಂಘಗಳ ಒಕ್ಕೂಟದ (ಎಫ್‌ಇಆರ್‌ಎ) ಸದಸ್ಯರು ಮಂಗಳವಾರದಿಂದ (ನವೆಂಬರ್ 18) ಪ್ರತಿಭಟನೆ ಆರಂಭಿಸಿದ್ದಾರೆ.

ಅತಿಯಾದ ಕೆಲಸದ ಒತ್ತಡ, ಸಾಕಷ್ಟು ಸಿಬ್ಬಂದಿ ಇಲ್ಲದಿರುವುದು, ಗಡುವಿನ ಒತ್ತಡ, ಸಾಕಷ್ಟು ತರಬೇತಿ ನೀಡದಿರುವುದು ಈ ಎಲ್ಲಾ ಸಮಸ್ಯೆಗಳಿಗೆ ಆಡಳಿತದಿಂದ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿ ಎಸ್‌ಐಆರ್‌ (ಸಂಬಂಧಿತ ದಾಖಲೆಗಳ ಡಿಜಿಟಲೈಸೇಶನ್ ಮತ್ತು ದೃಢೀಕರಣ ಕಾರ್ಯ) ಪ್ರಕ್ರಿಯೆ ಬಹಿಷ್ಕರಿಸಿದ್ದಾರೆ.

ಒಕ್ಕೂಟದ ಸದಸ್ಯರು ಬಹಿಷ್ಕಾರ ಆರಂಭಕ್ಕೂ ಮುನ್ನ, ಸೋಮವಾರ (ನವೆಂಬರ್ 17) ಸಂಜೆ ನಡೆದ “ಪೆರುಂದಿರಲ್ (ಸಾಮೂಹಿಕ ಅರ್ಜಿ) ಕಾರ್ಯಕ್ರಮ”ದಲ್ಲಿ ರಾಜ್ಯದ 32 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ (ಕಲೆಕ್ಟರ್‌ಗಳಿಗೆ) ತಮ್ಮ ಬೇಡಿಕೆಗಳ ಪತ್ರ ಸಲ್ಲಿಸಿದ್ದಾರೆ.

ಮಂಗಳವಾರದಿಂದ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಒಕ್ಕೂಟ ತಿಳಿಸಿದೆ. “ಇಂದಿನಿಂದ (ಮಂಗಳವಾರ) ನಾವು ಎಸ್‌ಐಆರ್‌ಗೆ ಸಂಬಂಧಿಸಿದ ಯಾವುದೇ ಕೆಲಸಕ್ಕೆ ಹಾಜರಾಗುತ್ತಿಲ್ಲ” ಎಂದು ಎಫ್‌ಇಆರ್‌ಎ ರಾಜ್ಯ ಸಂಯೋಜಕ ಎಂ.ಪಿ ಮುರುಗಯ್ಯನ್ ಹೇಳಿದ್ದಾರೆ.

ಎಸ್‌ಐಆರ್‌ ಸಂಬಂಧಿತ ಕೆಲಸಗಳನ್ನು ಮಾತ್ರ ಬಹಿಷ್ಕರಿಸಿದ್ದೇವೆ. ಕಂದಾಯ ಇಲಾಖೆಯ ನಿಯಮಿತ ಕೆಲಸಗಳು ಮುಂದುವರಿಯಲಿದ್ದು, ಪ್ರತಿಭಟನೆಯಿಂದ ಅದರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುರುಗಯ್ಯನ್ ತಿಳಿಸಿದ್ದಾರೆ.

ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಎಲ್ಲಾ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕು, ಹೆಚ್ಚುವರಿ ಬೂತ್ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಬೇಕು ಮತ್ತು ಬಿಎಲ್‌ಒ ಹಂತದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಎಸ್‌ಐಆರ್ ಬಹಿಷ್ಕಾರ ನಡೆಸಲಾಗುತ್ತಿದೆ.

ಜಿಲ್ಲಾಧಿಕಾರಿಗಳು ಮಧ್ಯರಾತ್ರಿಯವರೆಗೆ ಪರಿಶೀಲನಾ ಸಭೆಗಳನ್ನು ನಡೆಸುವುದನ್ನು ಮತ್ತು ಪರಿಶೀಲನೆಯ ಹೆಸರಿನಲ್ಲಿ ಪ್ರತಿದಿನ ಮೂರು ವಿಡಿಯೋ ಕಾನ್ಫರೆನ್ಸ್‌ ನಡೆಸುವುದನ್ನು ಒಕ್ಕೂಟ ವಿರೋಧಿಸಿದೆ.

ಡಿಸೆಂಬರ್ 4 ರಂದು ಮುಕ್ತಾಯಗೊಳ್ಳಲಿರುವ ಎಸ್‌ಐಆರ್ ಪ್ರಕ್ರಿಯೆಯ ಫಾರ್ಮ್‌ಗಳನ್ನು ವಿತರಿಸುವುದು ಮತ್ತು ಸಂಗ್ರಹಿಸುವುದು, ಅವುಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದು ಮತ್ತು ಪರಿಶೀಲನಾ ಸಭೆಗಳನ್ನು ನಡೆಸುವುದನ್ನು ಕಂದಾಯ ಇಲಾಖೆಯ ಸಿಬ್ಬಂದಿಗೆ ವಹಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...