Homeಚಳವಳಿತಮಿಳುನಾಡು | ಸ್ಯಾಮ್‌ಸಂಗ್ ವಿರುದ್ಧ ಪ್ರತಿಭಟನೆ: 600 ಕಾರ್ಮಿಕರು ವಶಕ್ಕೆ ಪಡೆದ ಪೊಲೀಸರು

ತಮಿಳುನಾಡು | ಸ್ಯಾಮ್‌ಸಂಗ್ ವಿರುದ್ಧ ಪ್ರತಿಭಟನೆ: 600 ಕಾರ್ಮಿಕರು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ತಮಿಳುನಾಡಿನ ಸ್ಯಾಮ್‌ಸಂಗ್ ಕಾರ್ಖಾನೆಯಲ್ಲಿ ನಡೆಯುತ್ತಿರುವ ಕಾರ್ಮಿಕರ ಮುಷ್ಕರ 4ನೇ ವಾರಕ್ಕೆ ಕಾಲಿಟ್ಟಿದೆ. ಮಂಗಳವಾರ ಕಾರ್ಮಿಕರ ಸಂಘಟನೆ ಬೀದಿ ಪ್ರತಿಭಟನೆಗಳನ್ನು ಆಯೋಜಿಸಿದ್ದಕ್ಕಾಗಿ ಸುಮಾರು 600 ಕಾರ್ಮಿಕರು ಮತ್ತು ಸಂಘಟನೆಯ ಸದಸ್ಯರನ್ನು ರಾಜ್ಯದ ಪೊಲೀಸರು ಬಂಧಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೆಪ್ಟೆಂಬರ್ 9 ರಿಂದ ಚೆನ್ನೈ ನಗರದ ಸಮೀಪವಿರುವ ಸ್ಯಾಮ್‌ಸಂಗ್ ಕಾರ್ಖಾನೆಯ 1,000 ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯಾಚರಣೆ ನಿಲ್ಲಿಸಿ ಮುಷ್ಕರ ಹೂಡಿದ್ದು, ಕಾರ್ಖಾನೆ ಬಳಿಯ ತಾತ್ಕಾಲಿಕ ಟೆಂಟ್‌ನಲ್ಲಿ ಪ್ರತಿಭಟಿಸುತ್ತಿದ್ದಾರೆ.

ದಕ್ಷಿಣ ಕೊರಿಯಾ ಮೂಲದ ಸ್ಯಾಮ್‌ಸಂಗ್‌ ಕಂಪೆನಿಯ ಭಾರತೀಯ ಆದಾಯ ಸರಿ ಸುಮಾರು ವಾರ್ಷಿಕವಾಗಿ 12 ಬಿಲಿಯನ್ ಡಾಲರ್‌ ಆದಾಯ ಹೊಂದಿದ್ದು, ಇದು ಕಂಪೆನಿಯ ಆದಾಯದ ಮೂರನೇ ಒಂದು ಭಾಗವಾಗಿದೆ. ಮುಷ್ಕರ ನಿರತ ಕಾರ್ಮಿಕರು ಕಂಪೆನಿಯು ತಮಗೆ ಹೆಚ್ಚಿನ ವೇತನ ಮತ್ತು ತಮ್ಮ ಯೂನಿಯನ್‌ಗೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಪ್ರತಿಭಟನ ನಡೆಯುತ್ತಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ಕಾರ್ಮಿಕ ಸಂಘಟನೆಯಾದ ಸಿಐಟಿಯು ವಹಿಸಿದೆ. ಸಿಐಟಿಯು ಸಂಯೋಜಿತ ಸ್ಯಾಮ್‌ಸಂಗ್ ಕಾರ್ಮಿಕರ ಸಂಘಟನೆ ನಡೆಸಿದ ಪ್ರತಿಭಟನಾ ಮೆರವಣಿಗೆಯು ಸಾರ್ವಜನಿಕರಿಗೆ ಅನಾನುಕೂಲವಾಗಿರುವುದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಚಾರ್ಲ್ಸ್ ಸ್ಯಾಮ್ ರಾಜದೊರೈ ಹೇಳಿದ್ದಾರೆ.

ಇದನ್ನೂಓದಿ: ಬ್ಯಾಂಕಾಕ್‌: ರಸ್ತೆ ಮಧ್ಯೆ ಹೊತ್ತಿ ಉರಿದ ಶಾಲಾ ಬಸ್‌, 25 ವಿದ್ಯಾರ್ಥಿಗಳು ಸಜೀವ ದಹನ

‘ನಾಲ್ಕು ಮದುವೆ ಮಂಟಪಗಳಲ್ಲಿ ಅವರನ್ನು ಬಂಧಿಸಿಡಲಾಗಿದೆ’ ಎಂದು ಅವರು ಹೇಳಿದ್ದಾರೆ. ಸೆಪ್ಟೆಂಬರ್ 16 ರಂದು ಕೂಡಾ ಪೊಲೀಸರು ಮುಷ್ಕರ ನಡೆಸುತ್ತಿರುವ 104 ಸ್ಯಾಮ್‌ಸಂಗ್ ಕಾರ್ಮಿಕರನ್ನು ಸುಮಾರು ಒಂದು ದಿನದವರೆಗೆ ಬಂಧಿಸಿದ್ದರು.

ತಮಿಳುನಾಡಿನ ಸ್ಯಾಮ್‌ಸಂಗ್ ಕಾರ್ಖಾನೆಯಲ್ಲಿ ಕಾರ್ಮಿಕರು ನಡೆಸುತ್ತಿರುವ ಮುಷ್ಕರವು ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ನಡೆಯುತ್ತಿರುವ ಅತಿದೊಡ್ಡ ಮುಷ್ಕರವಾಗಿದೆ. ಮುಷ್ಕರ ನಿರತ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಅಪಾಯವಿದೆ ಎಂದು ಸ್ಯಾಮ್‌ಸಂಗ್ ಎಚ್ಚರಿಕೆ ನೀಡಿದೆ.

ಕಡಿಮೆ ಕೆಲಸದ ಸಮಯ ಮತ್ತು ಪರಿಷ್ಕೃತ ವೇತನ ಸೇರಿದಂತೆ ಹಲವಾರು ಬೇಡಿಕೆಗಳನ್ನು ಕಾರ್ಮಿಕರು ಕಂಪೆನಿಯ ಮುಂದಿಟ್ಟಿದ್ದಾರೆ. ಸಿಐಟಿಯು ಬೆಂಬಲಿತ ಒಕ್ಕೂಟದ ಮಾನ್ಯತೆ ಪ್ರಮುಖ ಒತ್ತಾಯವಾಗಿದ್ದು, ಕಾರ್ಖಾನೆಯೊಳಗೆ ಕಂಪನಿಯ ಅಧಿಕಾರಿಗಳು ಗೌರವದಿಂದ ವರ್ತಿಸುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಟ ನಿವಿನ್ ಪೌಲಿ ವಿಚಾರಣೆ ನಡೆಸಿದ ಎಸ್‌ಐಟಿ

ನಡೆಯುತ್ತಿರುವ ಪ್ರತಿಭಟನೆಯಿಂದ ಕಾರ್ಖಾನೆಯ ಶೇ.80 ರಷ್ಟು ಉತ್ಪಾದನೆಗೆ ಹೊಡೆತ ಬಿದ್ದಿದೆ ಎಂದು ಕಾರ್ಮಿಕರು ಹೇಳಿದ್ದಾರೆ. ಜುಲೈ 25, 2024 ರಂದು, ಇ ಮುತ್ತುಕುಮಾರ್ ನೇತೃತ್ವದ CITU ಸದಸ್ಯರು ‘Samsung India Workers Union (SIWU)’ ನೋಂದಣಿಯನ್ನು ಪ್ರಾರಂಭಿಸಿದರು. ನೋಂದಣಿಗಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ 1455 ಕಾರ್ಮಿಕರನ್ನು ಸದಸ್ಯರನ್ನಾಗಿ ಪಟ್ಟಿಮಾಡಲಾಗಿತ್ತು. ನೋಂದಣಿಗೆ ಇನ್ನಷ್ಟೆ ಅನುಮೋದನೆ ದೊರೆಯಬೇಕಿದೆ. ಈ ಸಂಘಟನೆಗೆ ಆಗಸ್ಟ್ 20 ರಂದು ಲೇಬರ್ ಕಮಿಷನರ್‌ಗೆ Samsung India Electronics ನಿಂದ ಕಾನೂನು ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಮತ್ತೊಂದೆಡೆ ದಕ್ಷಿಣ ಕೊರಿಯಾದಲ್ಲಿ ನ್ಯಾಷನಲ್ ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಯೂನಿಯನ್(NSEU) ಈ ವರ್ಷದ ಜುಲೈನಲ್ಲಿ ಅನಿರ್ದಿಷ್ಟ ಮುಷ್ಕರವನ್ನು ನಡೆಸಿತು. ಈ ಮುಷ್ಕರದ ವೇಳೆ ಸುಧಾರಿತ ವೇತನ, ಹೆಚ್ಚು ಪಾರದರ್ಶಕ ಬೋನಸ್ ವ್ಯವಸ್ಥೆ ಮತ್ತು ವರ್ಷಕ್ಕೆ ಹೆಚ್ಚುವರಿ ದಿನ ರಜೆಯನ್ನು ಕೋರಲಾಗಿತ್ತು. NSEU ಭಾರತದ ಮುಷ್ಕರವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಭಾರತೀಯ ಸ್ಥಾವರದಲ್ಲಿ ಕಾರ್ಮಿಕರಿಗೆ ನ್ಯಾಯಯುತ ವೇತನ ಮತ್ತು ಸಮಂಜಸವಾದ ಕೆಲಸದ ಪರಿಸ್ಥಿತಿಗಳನ್ನು ಒದಗಿಸದಿರುವುದು ತೀವ್ರ ವಿಷಾದನೀಯ ಎಂದು ಹೇಳಿದೆ.

ದಕ್ಷಿಣ ಕೊರಿಯಾದಲ್ಲಿ ಸರಾಸರಿ ವೇತನವು ಸುಮಾರು 4.5 ಲಕ್ಷ ರೂ.ಗಳಷ್ಟಿದ್ದರೆ ಭಾರತದಲ್ಲಿ ಸರಾಸರಿ ವೇತನವು ಸುಮಾರು 30,000 ರೂ. ಆಗಿದೆ. ಸ್ಯಾಮ್‌ಸಂಗ್ ಇಂಡಿಯಾ ಪ್ಲಾಂಟ್‌ನಲ್ಲಿನ ಕಾರ್ಮಿಕ ವೆಚ್ಚವು ಅದರ ವಾರ್ಷಿಕ ಉತ್ಪಾದನಾ ಮೌಲ್ಯದ 0.3% ಕ್ಕಿಂತ ಕಡಿಮೆ ಎಂದು CITU ಹೇಳಿದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...