Homeಚಳವಳಿತಮಿಳುನಾಡು | ಸ್ಯಾಮ್‌ಸಂಗ್ ವಿರುದ್ಧ ಪ್ರತಿಭಟನೆ: 600 ಕಾರ್ಮಿಕರು ವಶಕ್ಕೆ ಪಡೆದ ಪೊಲೀಸರು

ತಮಿಳುನಾಡು | ಸ್ಯಾಮ್‌ಸಂಗ್ ವಿರುದ್ಧ ಪ್ರತಿಭಟನೆ: 600 ಕಾರ್ಮಿಕರು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ತಮಿಳುನಾಡಿನ ಸ್ಯಾಮ್‌ಸಂಗ್ ಕಾರ್ಖಾನೆಯಲ್ಲಿ ನಡೆಯುತ್ತಿರುವ ಕಾರ್ಮಿಕರ ಮುಷ್ಕರ 4ನೇ ವಾರಕ್ಕೆ ಕಾಲಿಟ್ಟಿದೆ. ಮಂಗಳವಾರ ಕಾರ್ಮಿಕರ ಸಂಘಟನೆ ಬೀದಿ ಪ್ರತಿಭಟನೆಗಳನ್ನು ಆಯೋಜಿಸಿದ್ದಕ್ಕಾಗಿ ಸುಮಾರು 600 ಕಾರ್ಮಿಕರು ಮತ್ತು ಸಂಘಟನೆಯ ಸದಸ್ಯರನ್ನು ರಾಜ್ಯದ ಪೊಲೀಸರು ಬಂಧಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೆಪ್ಟೆಂಬರ್ 9 ರಿಂದ ಚೆನ್ನೈ ನಗರದ ಸಮೀಪವಿರುವ ಸ್ಯಾಮ್‌ಸಂಗ್ ಕಾರ್ಖಾನೆಯ 1,000 ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯಾಚರಣೆ ನಿಲ್ಲಿಸಿ ಮುಷ್ಕರ ಹೂಡಿದ್ದು, ಕಾರ್ಖಾನೆ ಬಳಿಯ ತಾತ್ಕಾಲಿಕ ಟೆಂಟ್‌ನಲ್ಲಿ ಪ್ರತಿಭಟಿಸುತ್ತಿದ್ದಾರೆ.

ದಕ್ಷಿಣ ಕೊರಿಯಾ ಮೂಲದ ಸ್ಯಾಮ್‌ಸಂಗ್‌ ಕಂಪೆನಿಯ ಭಾರತೀಯ ಆದಾಯ ಸರಿ ಸುಮಾರು ವಾರ್ಷಿಕವಾಗಿ 12 ಬಿಲಿಯನ್ ಡಾಲರ್‌ ಆದಾಯ ಹೊಂದಿದ್ದು, ಇದು ಕಂಪೆನಿಯ ಆದಾಯದ ಮೂರನೇ ಒಂದು ಭಾಗವಾಗಿದೆ. ಮುಷ್ಕರ ನಿರತ ಕಾರ್ಮಿಕರು ಕಂಪೆನಿಯು ತಮಗೆ ಹೆಚ್ಚಿನ ವೇತನ ಮತ್ತು ತಮ್ಮ ಯೂನಿಯನ್‌ಗೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಪ್ರತಿಭಟನ ನಡೆಯುತ್ತಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ಕಾರ್ಮಿಕ ಸಂಘಟನೆಯಾದ ಸಿಐಟಿಯು ವಹಿಸಿದೆ. ಸಿಐಟಿಯು ಸಂಯೋಜಿತ ಸ್ಯಾಮ್‌ಸಂಗ್ ಕಾರ್ಮಿಕರ ಸಂಘಟನೆ ನಡೆಸಿದ ಪ್ರತಿಭಟನಾ ಮೆರವಣಿಗೆಯು ಸಾರ್ವಜನಿಕರಿಗೆ ಅನಾನುಕೂಲವಾಗಿರುವುದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಚಾರ್ಲ್ಸ್ ಸ್ಯಾಮ್ ರಾಜದೊರೈ ಹೇಳಿದ್ದಾರೆ.

ಇದನ್ನೂಓದಿ: ಬ್ಯಾಂಕಾಕ್‌: ರಸ್ತೆ ಮಧ್ಯೆ ಹೊತ್ತಿ ಉರಿದ ಶಾಲಾ ಬಸ್‌, 25 ವಿದ್ಯಾರ್ಥಿಗಳು ಸಜೀವ ದಹನ

‘ನಾಲ್ಕು ಮದುವೆ ಮಂಟಪಗಳಲ್ಲಿ ಅವರನ್ನು ಬಂಧಿಸಿಡಲಾಗಿದೆ’ ಎಂದು ಅವರು ಹೇಳಿದ್ದಾರೆ. ಸೆಪ್ಟೆಂಬರ್ 16 ರಂದು ಕೂಡಾ ಪೊಲೀಸರು ಮುಷ್ಕರ ನಡೆಸುತ್ತಿರುವ 104 ಸ್ಯಾಮ್‌ಸಂಗ್ ಕಾರ್ಮಿಕರನ್ನು ಸುಮಾರು ಒಂದು ದಿನದವರೆಗೆ ಬಂಧಿಸಿದ್ದರು.

ತಮಿಳುನಾಡಿನ ಸ್ಯಾಮ್‌ಸಂಗ್ ಕಾರ್ಖಾನೆಯಲ್ಲಿ ಕಾರ್ಮಿಕರು ನಡೆಸುತ್ತಿರುವ ಮುಷ್ಕರವು ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ನಡೆಯುತ್ತಿರುವ ಅತಿದೊಡ್ಡ ಮುಷ್ಕರವಾಗಿದೆ. ಮುಷ್ಕರ ನಿರತ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಅಪಾಯವಿದೆ ಎಂದು ಸ್ಯಾಮ್‌ಸಂಗ್ ಎಚ್ಚರಿಕೆ ನೀಡಿದೆ.

ಕಡಿಮೆ ಕೆಲಸದ ಸಮಯ ಮತ್ತು ಪರಿಷ್ಕೃತ ವೇತನ ಸೇರಿದಂತೆ ಹಲವಾರು ಬೇಡಿಕೆಗಳನ್ನು ಕಾರ್ಮಿಕರು ಕಂಪೆನಿಯ ಮುಂದಿಟ್ಟಿದ್ದಾರೆ. ಸಿಐಟಿಯು ಬೆಂಬಲಿತ ಒಕ್ಕೂಟದ ಮಾನ್ಯತೆ ಪ್ರಮುಖ ಒತ್ತಾಯವಾಗಿದ್ದು, ಕಾರ್ಖಾನೆಯೊಳಗೆ ಕಂಪನಿಯ ಅಧಿಕಾರಿಗಳು ಗೌರವದಿಂದ ವರ್ತಿಸುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಟ ನಿವಿನ್ ಪೌಲಿ ವಿಚಾರಣೆ ನಡೆಸಿದ ಎಸ್‌ಐಟಿ

ನಡೆಯುತ್ತಿರುವ ಪ್ರತಿಭಟನೆಯಿಂದ ಕಾರ್ಖಾನೆಯ ಶೇ.80 ರಷ್ಟು ಉತ್ಪಾದನೆಗೆ ಹೊಡೆತ ಬಿದ್ದಿದೆ ಎಂದು ಕಾರ್ಮಿಕರು ಹೇಳಿದ್ದಾರೆ. ಜುಲೈ 25, 2024 ರಂದು, ಇ ಮುತ್ತುಕುಮಾರ್ ನೇತೃತ್ವದ CITU ಸದಸ್ಯರು ‘Samsung India Workers Union (SIWU)’ ನೋಂದಣಿಯನ್ನು ಪ್ರಾರಂಭಿಸಿದರು. ನೋಂದಣಿಗಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ 1455 ಕಾರ್ಮಿಕರನ್ನು ಸದಸ್ಯರನ್ನಾಗಿ ಪಟ್ಟಿಮಾಡಲಾಗಿತ್ತು. ನೋಂದಣಿಗೆ ಇನ್ನಷ್ಟೆ ಅನುಮೋದನೆ ದೊರೆಯಬೇಕಿದೆ. ಈ ಸಂಘಟನೆಗೆ ಆಗಸ್ಟ್ 20 ರಂದು ಲೇಬರ್ ಕಮಿಷನರ್‌ಗೆ Samsung India Electronics ನಿಂದ ಕಾನೂನು ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಮತ್ತೊಂದೆಡೆ ದಕ್ಷಿಣ ಕೊರಿಯಾದಲ್ಲಿ ನ್ಯಾಷನಲ್ ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಯೂನಿಯನ್(NSEU) ಈ ವರ್ಷದ ಜುಲೈನಲ್ಲಿ ಅನಿರ್ದಿಷ್ಟ ಮುಷ್ಕರವನ್ನು ನಡೆಸಿತು. ಈ ಮುಷ್ಕರದ ವೇಳೆ ಸುಧಾರಿತ ವೇತನ, ಹೆಚ್ಚು ಪಾರದರ್ಶಕ ಬೋನಸ್ ವ್ಯವಸ್ಥೆ ಮತ್ತು ವರ್ಷಕ್ಕೆ ಹೆಚ್ಚುವರಿ ದಿನ ರಜೆಯನ್ನು ಕೋರಲಾಗಿತ್ತು. NSEU ಭಾರತದ ಮುಷ್ಕರವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಭಾರತೀಯ ಸ್ಥಾವರದಲ್ಲಿ ಕಾರ್ಮಿಕರಿಗೆ ನ್ಯಾಯಯುತ ವೇತನ ಮತ್ತು ಸಮಂಜಸವಾದ ಕೆಲಸದ ಪರಿಸ್ಥಿತಿಗಳನ್ನು ಒದಗಿಸದಿರುವುದು ತೀವ್ರ ವಿಷಾದನೀಯ ಎಂದು ಹೇಳಿದೆ.

ದಕ್ಷಿಣ ಕೊರಿಯಾದಲ್ಲಿ ಸರಾಸರಿ ವೇತನವು ಸುಮಾರು 4.5 ಲಕ್ಷ ರೂ.ಗಳಷ್ಟಿದ್ದರೆ ಭಾರತದಲ್ಲಿ ಸರಾಸರಿ ವೇತನವು ಸುಮಾರು 30,000 ರೂ. ಆಗಿದೆ. ಸ್ಯಾಮ್‌ಸಂಗ್ ಇಂಡಿಯಾ ಪ್ಲಾಂಟ್‌ನಲ್ಲಿನ ಕಾರ್ಮಿಕ ವೆಚ್ಚವು ಅದರ ವಾರ್ಷಿಕ ಉತ್ಪಾದನಾ ಮೌಲ್ಯದ 0.3% ಕ್ಕಿಂತ ಕಡಿಮೆ ಎಂದು CITU ಹೇಳಿದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...