Homeಚಳವಳಿತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

ತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

- Advertisement -
- Advertisement -

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೊಂದಿಗೆ ಸಂಯೋಜಿತವಾಗಿರುವ ತಮಿಳುನಾಡಿನ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ಮತ್ತು ಸ್ಯಾಮ್‌ಸಂಗ್ ಇಂಡಿಯಾ ಆಡಳಿತ ಮಂಡಳಿಯ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಎಸ್‌ಐಡಬ್ಲ್ಯುಯು ತನ್ನ ಪ್ರತಿಭಟನೆಯನ್ನು ಕಂಪನಿಯ ಆವರಣದಿಂದ ಹೊರಗಡೆಗೆ ವಿಸ್ತರಿಸಲು ನಿರ್ಧರಿಸಿದೆ.

ಫೆಬ್ರವರಿ 21 ಶುಕ್ರವಾರ ಕಾಂಚೀಪುರಂ ಜಿಲ್ಲೆಯ ನಾಲ್ಕು ರಾಜ್ಯ ಕೈಗಾರಿಕಾ ಉತ್ತೇಜನ ನಿಗಮದ (SIPCOT)ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಸಿಐಟಿಯು ಸಿದ್ದತೆ ಮಾಡಿಕೊಂಡಿದೆ.

ಅಲ್ಲದೆ, ಶುಕ್ರವಾರ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರ್ ಕಾರ್ಖಾನೆಯ ಗೇಟ್‌ಗಳನ್ನು ಮುಚ್ಚುವುದಾಗಿ ಸಿಐಟಿಯು ಘೋಷಿಸಿದೆ. ಗುತ್ತಿಗೆ ಕಾರ್ಮಿಕರನ್ನು ‘ಅಕ್ರಮ ಕಾರ್ಮಿಕರು’ ಎಂದು ಕರೆದಿರುವ ಸಿಐಟಿಯು, ಅವರು ಕಾರ್ಖಾನೆ ಆವರಣಕ್ಕೆ ಪ್ರವೇಶಿಸುವುದನ್ನು ತಡೆಯುತ್ತೇವೆ ಎಂದಿದೆ.

ಮಾರ್ಚ್ 7ರಂದು ಕಾಂಚೀಪುರಂ ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಒಂದು ದಿನದ ಮುಷ್ಕರ ನಡೆಸುವುದಾಗಿ ಸಿಐಟಿಯು ಘೋಷಣೆ ಮಾಡಿದೆ.

ಸಿಐಟಿಯು ಕಾಂಚೀಪುರಂ ಜಿಲ್ಲಾ ಕಾರ್ಯದರ್ಶಿ ಮತ್ತು ಎಸ್‌ಐಡಬ್ಲ್ಯುಯು ಅಧ್ಯಕ್ಷ ಇ. ಮುತ್ತುಕುಮಾರ್ ಮಾತನಾಡಿ, “ಸ್ಯಾಮ್‌ಸಂಗ್ ಕಂಪನಿ ಮೂವರು ಎಸ್‌ಐಡಬ್ಲ್ಯುಯು ಪದಾಧಿಕಾರಿಗಳ ಅಮಾನತು ರದ್ದುಗೊಳಿಸಿದರೆ ಮುಷ್ಕರ ಕೊನೆಗೊಳಿಸಲು ನಮ್ಮ ಒಕ್ಕೂಟ ಸಿದ್ಧವಿದೆ ಎಂದು ಹೇಳಿದ್ದಾರೆ. ಕಂಪನಿ ನಮ್ಮ ಬೇಡಿಕೆಯನ್ನು ಪರಿಹರಿಸುವ ಬದಲು, ಒಕ್ಕೂಟಕ್ಕೆ ಸಂಬಂಧಿಸಿದ ಇನ್ನೂ 18 ಕಾರ್ಮಿಕರನ್ನು ಅಮಾನತುಗೊಳಿಸಲು ಯೋಜಿಸುತ್ತಿದೆ ಎಂದು ಮುತ್ತುಕುಮಾರ್ ಆರೋಪಿಸಿದ್ದಾರೆ.

ಫೆಬ್ರವರಿ 19ರಂದು ತಮಿಳುನಾಡು ಕಾರ್ಮಿಕ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಎಸ್‌ಐಡಬ್ಲ್ಯುಯು ಮತ್ತು ಸ್ಯಾಮ್‌ಸಂಗ್ ಆಡಳಿತ ಮಂಡಳಿಯ ನಡುವೆ ನಡೆದ ಮತ್ತೊಂದು ಸುತ್ತಿನ ರಾಜಿ ಮಾತುಕತೆ ವಿಫಲವಾಗಿದೆ.

ಫೆಬ್ರವರಿ 5ರಂದು ಪ್ರತಿಭಟನೆ ಪ್ರಾರಂಭಿಸಿರುವ 500 ಕ್ಕೂ ಹೆಚ್ಚು ಸ್ಯಾಮ್‌ಸಂಗ್ ಕಾರ್ಮಿಕರು, ಮೂವರು ಎಸ್‌ಐಡಬ್ಲ್ಯುಯು ಸದಸ್ಯರ ಅಮಾನತನ್ನು ಖಂಡಿಸಿದ್ದಾರೆ. 38 ದಿನಗಳ ಮುಷ್ಕರ ಮತ್ತು 212 ದಿನಗಳ ಕಾನೂನು ಹೋರಾಟದ ನಂತರ ತಮಿಳುನಾಡು ರಾಜ್ಯ ಕಾರ್ಮಿಕ ಕಲ್ಯಾಣ ಇಲಾಖೆಯು ಎಸ್‌ಐಡಬ್ಲ್ಯುಯು ಅನ್ನು ಜನವರಿ 27ರಂದು ಅಧಿಕೃತವಾಗಿ ನೋಂದಾಯಿಸಿಕೊಂಡಿದೆ.

ಕಾರ್ಮಿಕರ ಪ್ರತಿಭಟನೆ ಮುಂದುರಿದಿರುವ ನಡುವೆ ಹೇಳಿಕೆ ನೀಡಿರುವ ಸ್ಯಾಮ್‌ಸಂಗ್ ಇಂಡಿಯಾ ವಕ್ತಾರರು “ನಮ್ಮ ಕಾರ್ಮಿಕರೊಂದಿಗೆ ನೇರವಾಗಿ ಮಾತನಾಡುವ ಮೂಲಕ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧವಾಗಿದ್ದೇವೆ. ಕೈಗಾರಿಕಾ ಶಾಂತಿ ಮತ್ತು ಕೆಲಸದ ಸ್ಥಳದ ಸುರಕ್ಷತೆಗೆ ಧಕ್ಕೆ ತರುವ ಕೆಲವು ಕಾರ್ಮಿಕರ ಕಾನೂನುಬಾಹಿರ ಚಟುವಟಿಕೆಗಳನ್ನು ನಾವು ಕ್ಷಮಿಸುವುದಿಲ್ಲ. ಎಲ್ಲಾ ಉದ್ಯೋಗಿಗಳು ಕಂಪನಿಯ ನೀತಿಗಳಿಗೆ ಬದ್ಧರಾಗಿರಬೇಕು ಮತ್ತು ಈ ನೀತಿಗಳನ್ನು ಉಲ್ಲಂಘಿಸುವವರು ಸರಿಯಾದ ಕಾನೂನುಬದ್ಧ ಪ್ರಕ್ರಿಯೆಯ ನಂತರ ಶಿಸ್ತು ಕ್ರಮಕ್ಕೆ ಒಳಪಡುತ್ತಾರೆ. ಎಲ್ಲಾ ಕಾರ್ಮಿಕರಿಗೆ ಸುರಕ್ಷಿತ ಮತ್ತು ಸ್ಥಿರವಾದ ಕೆಲಸದ ಸ್ಥಳವನ್ನು ಒದಗಿಸಿಕೊಡುವುದು ನಮ್ಮ ಆದ್ಯತೆಯಾಗಿದೆ” ಎಂದಿದ್ದಾರೆ.

ಕಾಂಚೀಪುರಂ ಜಿಲ್ಲೆಯ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರು ಘಟಕ ಸುಮಾರು 1,800 ಕಾರ್ಮಿಕರನ್ನು ನೇಮಿಸಿಕೊಂಡಿದೆ. ಇಲ್ಲಿ ಟೆಲಿವಿಷನ್‌, ವಾಷಿಂಗ್ ಮೆಷಿನ್‌, ರೆಫ್ರಿಜರೇಟರ್‌, ಹವಾನಿಯಂತ್ರಣಗಳು ಮತ್ತು ಕಂಪ್ರೆಸರ್‌ಗಳನ್ನು ತಯಾರಿಸಲಾಗುತ್ತದೆ. ಈ ಘಟಕವು 2022-23ರಲ್ಲಿ ಸ್ಯಾಮ್‌ಸಂಗ್‌ನ 12 ಬಿಲಿಯನ್ ಡಾಲರ್ ಭಾರತದ ಮಾರಾಟದಲ್ಲಿ ಐದನೇ ಒಂದು ಭಾಗವನ್ನು ಹೊಂದಿದೆ.

ಫೆಬ್ರವರಿ 21ರಂದು ನಡೆಯಲಿರುವ ಪ್ರತಿಭಟನೆ ಎಲ್ಲರ ಗಮನ ಸೆಳೆದಿದ್ದು, ಇದು ಜಿಲ್ಲೆಯಾದ್ಯಂತ ಕೈಗಾರಿಕಾ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...