Homeಚಳವಳಿತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

ತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

- Advertisement -
- Advertisement -

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೊಂದಿಗೆ ಸಂಯೋಜಿತವಾಗಿರುವ ತಮಿಳುನಾಡಿನ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ಮತ್ತು ಸ್ಯಾಮ್‌ಸಂಗ್ ಇಂಡಿಯಾ ಆಡಳಿತ ಮಂಡಳಿಯ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಎಸ್‌ಐಡಬ್ಲ್ಯುಯು ತನ್ನ ಪ್ರತಿಭಟನೆಯನ್ನು ಕಂಪನಿಯ ಆವರಣದಿಂದ ಹೊರಗಡೆಗೆ ವಿಸ್ತರಿಸಲು ನಿರ್ಧರಿಸಿದೆ.

ಫೆಬ್ರವರಿ 21 ಶುಕ್ರವಾರ ಕಾಂಚೀಪುರಂ ಜಿಲ್ಲೆಯ ನಾಲ್ಕು ರಾಜ್ಯ ಕೈಗಾರಿಕಾ ಉತ್ತೇಜನ ನಿಗಮದ (SIPCOT)ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಸಿಐಟಿಯು ಸಿದ್ದತೆ ಮಾಡಿಕೊಂಡಿದೆ.

ಅಲ್ಲದೆ, ಶುಕ್ರವಾರ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರ್ ಕಾರ್ಖಾನೆಯ ಗೇಟ್‌ಗಳನ್ನು ಮುಚ್ಚುವುದಾಗಿ ಸಿಐಟಿಯು ಘೋಷಿಸಿದೆ. ಗುತ್ತಿಗೆ ಕಾರ್ಮಿಕರನ್ನು ‘ಅಕ್ರಮ ಕಾರ್ಮಿಕರು’ ಎಂದು ಕರೆದಿರುವ ಸಿಐಟಿಯು, ಅವರು ಕಾರ್ಖಾನೆ ಆವರಣಕ್ಕೆ ಪ್ರವೇಶಿಸುವುದನ್ನು ತಡೆಯುತ್ತೇವೆ ಎಂದಿದೆ.

ಮಾರ್ಚ್ 7ರಂದು ಕಾಂಚೀಪುರಂ ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಒಂದು ದಿನದ ಮುಷ್ಕರ ನಡೆಸುವುದಾಗಿ ಸಿಐಟಿಯು ಘೋಷಣೆ ಮಾಡಿದೆ.

ಸಿಐಟಿಯು ಕಾಂಚೀಪುರಂ ಜಿಲ್ಲಾ ಕಾರ್ಯದರ್ಶಿ ಮತ್ತು ಎಸ್‌ಐಡಬ್ಲ್ಯುಯು ಅಧ್ಯಕ್ಷ ಇ. ಮುತ್ತುಕುಮಾರ್ ಮಾತನಾಡಿ, “ಸ್ಯಾಮ್‌ಸಂಗ್ ಕಂಪನಿ ಮೂವರು ಎಸ್‌ಐಡಬ್ಲ್ಯುಯು ಪದಾಧಿಕಾರಿಗಳ ಅಮಾನತು ರದ್ದುಗೊಳಿಸಿದರೆ ಮುಷ್ಕರ ಕೊನೆಗೊಳಿಸಲು ನಮ್ಮ ಒಕ್ಕೂಟ ಸಿದ್ಧವಿದೆ ಎಂದು ಹೇಳಿದ್ದಾರೆ. ಕಂಪನಿ ನಮ್ಮ ಬೇಡಿಕೆಯನ್ನು ಪರಿಹರಿಸುವ ಬದಲು, ಒಕ್ಕೂಟಕ್ಕೆ ಸಂಬಂಧಿಸಿದ ಇನ್ನೂ 18 ಕಾರ್ಮಿಕರನ್ನು ಅಮಾನತುಗೊಳಿಸಲು ಯೋಜಿಸುತ್ತಿದೆ ಎಂದು ಮುತ್ತುಕುಮಾರ್ ಆರೋಪಿಸಿದ್ದಾರೆ.

ಫೆಬ್ರವರಿ 19ರಂದು ತಮಿಳುನಾಡು ಕಾರ್ಮಿಕ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಎಸ್‌ಐಡಬ್ಲ್ಯುಯು ಮತ್ತು ಸ್ಯಾಮ್‌ಸಂಗ್ ಆಡಳಿತ ಮಂಡಳಿಯ ನಡುವೆ ನಡೆದ ಮತ್ತೊಂದು ಸುತ್ತಿನ ರಾಜಿ ಮಾತುಕತೆ ವಿಫಲವಾಗಿದೆ.

ಫೆಬ್ರವರಿ 5ರಂದು ಪ್ರತಿಭಟನೆ ಪ್ರಾರಂಭಿಸಿರುವ 500 ಕ್ಕೂ ಹೆಚ್ಚು ಸ್ಯಾಮ್‌ಸಂಗ್ ಕಾರ್ಮಿಕರು, ಮೂವರು ಎಸ್‌ಐಡಬ್ಲ್ಯುಯು ಸದಸ್ಯರ ಅಮಾನತನ್ನು ಖಂಡಿಸಿದ್ದಾರೆ. 38 ದಿನಗಳ ಮುಷ್ಕರ ಮತ್ತು 212 ದಿನಗಳ ಕಾನೂನು ಹೋರಾಟದ ನಂತರ ತಮಿಳುನಾಡು ರಾಜ್ಯ ಕಾರ್ಮಿಕ ಕಲ್ಯಾಣ ಇಲಾಖೆಯು ಎಸ್‌ಐಡಬ್ಲ್ಯುಯು ಅನ್ನು ಜನವರಿ 27ರಂದು ಅಧಿಕೃತವಾಗಿ ನೋಂದಾಯಿಸಿಕೊಂಡಿದೆ.

ಕಾರ್ಮಿಕರ ಪ್ರತಿಭಟನೆ ಮುಂದುರಿದಿರುವ ನಡುವೆ ಹೇಳಿಕೆ ನೀಡಿರುವ ಸ್ಯಾಮ್‌ಸಂಗ್ ಇಂಡಿಯಾ ವಕ್ತಾರರು “ನಮ್ಮ ಕಾರ್ಮಿಕರೊಂದಿಗೆ ನೇರವಾಗಿ ಮಾತನಾಡುವ ಮೂಲಕ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧವಾಗಿದ್ದೇವೆ. ಕೈಗಾರಿಕಾ ಶಾಂತಿ ಮತ್ತು ಕೆಲಸದ ಸ್ಥಳದ ಸುರಕ್ಷತೆಗೆ ಧಕ್ಕೆ ತರುವ ಕೆಲವು ಕಾರ್ಮಿಕರ ಕಾನೂನುಬಾಹಿರ ಚಟುವಟಿಕೆಗಳನ್ನು ನಾವು ಕ್ಷಮಿಸುವುದಿಲ್ಲ. ಎಲ್ಲಾ ಉದ್ಯೋಗಿಗಳು ಕಂಪನಿಯ ನೀತಿಗಳಿಗೆ ಬದ್ಧರಾಗಿರಬೇಕು ಮತ್ತು ಈ ನೀತಿಗಳನ್ನು ಉಲ್ಲಂಘಿಸುವವರು ಸರಿಯಾದ ಕಾನೂನುಬದ್ಧ ಪ್ರಕ್ರಿಯೆಯ ನಂತರ ಶಿಸ್ತು ಕ್ರಮಕ್ಕೆ ಒಳಪಡುತ್ತಾರೆ. ಎಲ್ಲಾ ಕಾರ್ಮಿಕರಿಗೆ ಸುರಕ್ಷಿತ ಮತ್ತು ಸ್ಥಿರವಾದ ಕೆಲಸದ ಸ್ಥಳವನ್ನು ಒದಗಿಸಿಕೊಡುವುದು ನಮ್ಮ ಆದ್ಯತೆಯಾಗಿದೆ” ಎಂದಿದ್ದಾರೆ.

ಕಾಂಚೀಪುರಂ ಜಿಲ್ಲೆಯ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರು ಘಟಕ ಸುಮಾರು 1,800 ಕಾರ್ಮಿಕರನ್ನು ನೇಮಿಸಿಕೊಂಡಿದೆ. ಇಲ್ಲಿ ಟೆಲಿವಿಷನ್‌, ವಾಷಿಂಗ್ ಮೆಷಿನ್‌, ರೆಫ್ರಿಜರೇಟರ್‌, ಹವಾನಿಯಂತ್ರಣಗಳು ಮತ್ತು ಕಂಪ್ರೆಸರ್‌ಗಳನ್ನು ತಯಾರಿಸಲಾಗುತ್ತದೆ. ಈ ಘಟಕವು 2022-23ರಲ್ಲಿ ಸ್ಯಾಮ್‌ಸಂಗ್‌ನ 12 ಬಿಲಿಯನ್ ಡಾಲರ್ ಭಾರತದ ಮಾರಾಟದಲ್ಲಿ ಐದನೇ ಒಂದು ಭಾಗವನ್ನು ಹೊಂದಿದೆ.

ಫೆಬ್ರವರಿ 21ರಂದು ನಡೆಯಲಿರುವ ಪ್ರತಿಭಟನೆ ಎಲ್ಲರ ಗಮನ ಸೆಳೆದಿದ್ದು, ಇದು ಜಿಲ್ಲೆಯಾದ್ಯಂತ ಕೈಗಾರಿಕಾ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...