Homeಚಳವಳಿತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

ತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

- Advertisement -
- Advertisement -

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೊಂದಿಗೆ ಸಂಯೋಜಿತವಾಗಿರುವ ತಮಿಳುನಾಡಿನ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ಮತ್ತು ಸ್ಯಾಮ್‌ಸಂಗ್ ಇಂಡಿಯಾ ಆಡಳಿತ ಮಂಡಳಿಯ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಎಸ್‌ಐಡಬ್ಲ್ಯುಯು ತನ್ನ ಪ್ರತಿಭಟನೆಯನ್ನು ಕಂಪನಿಯ ಆವರಣದಿಂದ ಹೊರಗಡೆಗೆ ವಿಸ್ತರಿಸಲು ನಿರ್ಧರಿಸಿದೆ.

ಫೆಬ್ರವರಿ 21 ಶುಕ್ರವಾರ ಕಾಂಚೀಪುರಂ ಜಿಲ್ಲೆಯ ನಾಲ್ಕು ರಾಜ್ಯ ಕೈಗಾರಿಕಾ ಉತ್ತೇಜನ ನಿಗಮದ (SIPCOT)ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಸಿಐಟಿಯು ಸಿದ್ದತೆ ಮಾಡಿಕೊಂಡಿದೆ.

ಅಲ್ಲದೆ, ಶುಕ್ರವಾರ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರ್ ಕಾರ್ಖಾನೆಯ ಗೇಟ್‌ಗಳನ್ನು ಮುಚ್ಚುವುದಾಗಿ ಸಿಐಟಿಯು ಘೋಷಿಸಿದೆ. ಗುತ್ತಿಗೆ ಕಾರ್ಮಿಕರನ್ನು ‘ಅಕ್ರಮ ಕಾರ್ಮಿಕರು’ ಎಂದು ಕರೆದಿರುವ ಸಿಐಟಿಯು, ಅವರು ಕಾರ್ಖಾನೆ ಆವರಣಕ್ಕೆ ಪ್ರವೇಶಿಸುವುದನ್ನು ತಡೆಯುತ್ತೇವೆ ಎಂದಿದೆ.

ಮಾರ್ಚ್ 7ರಂದು ಕಾಂಚೀಪುರಂ ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಒಂದು ದಿನದ ಮುಷ್ಕರ ನಡೆಸುವುದಾಗಿ ಸಿಐಟಿಯು ಘೋಷಣೆ ಮಾಡಿದೆ.

ಸಿಐಟಿಯು ಕಾಂಚೀಪುರಂ ಜಿಲ್ಲಾ ಕಾರ್ಯದರ್ಶಿ ಮತ್ತು ಎಸ್‌ಐಡಬ್ಲ್ಯುಯು ಅಧ್ಯಕ್ಷ ಇ. ಮುತ್ತುಕುಮಾರ್ ಮಾತನಾಡಿ, “ಸ್ಯಾಮ್‌ಸಂಗ್ ಕಂಪನಿ ಮೂವರು ಎಸ್‌ಐಡಬ್ಲ್ಯುಯು ಪದಾಧಿಕಾರಿಗಳ ಅಮಾನತು ರದ್ದುಗೊಳಿಸಿದರೆ ಮುಷ್ಕರ ಕೊನೆಗೊಳಿಸಲು ನಮ್ಮ ಒಕ್ಕೂಟ ಸಿದ್ಧವಿದೆ ಎಂದು ಹೇಳಿದ್ದಾರೆ. ಕಂಪನಿ ನಮ್ಮ ಬೇಡಿಕೆಯನ್ನು ಪರಿಹರಿಸುವ ಬದಲು, ಒಕ್ಕೂಟಕ್ಕೆ ಸಂಬಂಧಿಸಿದ ಇನ್ನೂ 18 ಕಾರ್ಮಿಕರನ್ನು ಅಮಾನತುಗೊಳಿಸಲು ಯೋಜಿಸುತ್ತಿದೆ ಎಂದು ಮುತ್ತುಕುಮಾರ್ ಆರೋಪಿಸಿದ್ದಾರೆ.

ಫೆಬ್ರವರಿ 19ರಂದು ತಮಿಳುನಾಡು ಕಾರ್ಮಿಕ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಎಸ್‌ಐಡಬ್ಲ್ಯುಯು ಮತ್ತು ಸ್ಯಾಮ್‌ಸಂಗ್ ಆಡಳಿತ ಮಂಡಳಿಯ ನಡುವೆ ನಡೆದ ಮತ್ತೊಂದು ಸುತ್ತಿನ ರಾಜಿ ಮಾತುಕತೆ ವಿಫಲವಾಗಿದೆ.

ಫೆಬ್ರವರಿ 5ರಂದು ಪ್ರತಿಭಟನೆ ಪ್ರಾರಂಭಿಸಿರುವ 500 ಕ್ಕೂ ಹೆಚ್ಚು ಸ್ಯಾಮ್‌ಸಂಗ್ ಕಾರ್ಮಿಕರು, ಮೂವರು ಎಸ್‌ಐಡಬ್ಲ್ಯುಯು ಸದಸ್ಯರ ಅಮಾನತನ್ನು ಖಂಡಿಸಿದ್ದಾರೆ. 38 ದಿನಗಳ ಮುಷ್ಕರ ಮತ್ತು 212 ದಿನಗಳ ಕಾನೂನು ಹೋರಾಟದ ನಂತರ ತಮಿಳುನಾಡು ರಾಜ್ಯ ಕಾರ್ಮಿಕ ಕಲ್ಯಾಣ ಇಲಾಖೆಯು ಎಸ್‌ಐಡಬ್ಲ್ಯುಯು ಅನ್ನು ಜನವರಿ 27ರಂದು ಅಧಿಕೃತವಾಗಿ ನೋಂದಾಯಿಸಿಕೊಂಡಿದೆ.

ಕಾರ್ಮಿಕರ ಪ್ರತಿಭಟನೆ ಮುಂದುರಿದಿರುವ ನಡುವೆ ಹೇಳಿಕೆ ನೀಡಿರುವ ಸ್ಯಾಮ್‌ಸಂಗ್ ಇಂಡಿಯಾ ವಕ್ತಾರರು “ನಮ್ಮ ಕಾರ್ಮಿಕರೊಂದಿಗೆ ನೇರವಾಗಿ ಮಾತನಾಡುವ ಮೂಲಕ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧವಾಗಿದ್ದೇವೆ. ಕೈಗಾರಿಕಾ ಶಾಂತಿ ಮತ್ತು ಕೆಲಸದ ಸ್ಥಳದ ಸುರಕ್ಷತೆಗೆ ಧಕ್ಕೆ ತರುವ ಕೆಲವು ಕಾರ್ಮಿಕರ ಕಾನೂನುಬಾಹಿರ ಚಟುವಟಿಕೆಗಳನ್ನು ನಾವು ಕ್ಷಮಿಸುವುದಿಲ್ಲ. ಎಲ್ಲಾ ಉದ್ಯೋಗಿಗಳು ಕಂಪನಿಯ ನೀತಿಗಳಿಗೆ ಬದ್ಧರಾಗಿರಬೇಕು ಮತ್ತು ಈ ನೀತಿಗಳನ್ನು ಉಲ್ಲಂಘಿಸುವವರು ಸರಿಯಾದ ಕಾನೂನುಬದ್ಧ ಪ್ರಕ್ರಿಯೆಯ ನಂತರ ಶಿಸ್ತು ಕ್ರಮಕ್ಕೆ ಒಳಪಡುತ್ತಾರೆ. ಎಲ್ಲಾ ಕಾರ್ಮಿಕರಿಗೆ ಸುರಕ್ಷಿತ ಮತ್ತು ಸ್ಥಿರವಾದ ಕೆಲಸದ ಸ್ಥಳವನ್ನು ಒದಗಿಸಿಕೊಡುವುದು ನಮ್ಮ ಆದ್ಯತೆಯಾಗಿದೆ” ಎಂದಿದ್ದಾರೆ.

ಕಾಂಚೀಪುರಂ ಜಿಲ್ಲೆಯ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರು ಘಟಕ ಸುಮಾರು 1,800 ಕಾರ್ಮಿಕರನ್ನು ನೇಮಿಸಿಕೊಂಡಿದೆ. ಇಲ್ಲಿ ಟೆಲಿವಿಷನ್‌, ವಾಷಿಂಗ್ ಮೆಷಿನ್‌, ರೆಫ್ರಿಜರೇಟರ್‌, ಹವಾನಿಯಂತ್ರಣಗಳು ಮತ್ತು ಕಂಪ್ರೆಸರ್‌ಗಳನ್ನು ತಯಾರಿಸಲಾಗುತ್ತದೆ. ಈ ಘಟಕವು 2022-23ರಲ್ಲಿ ಸ್ಯಾಮ್‌ಸಂಗ್‌ನ 12 ಬಿಲಿಯನ್ ಡಾಲರ್ ಭಾರತದ ಮಾರಾಟದಲ್ಲಿ ಐದನೇ ಒಂದು ಭಾಗವನ್ನು ಹೊಂದಿದೆ.

ಫೆಬ್ರವರಿ 21ರಂದು ನಡೆಯಲಿರುವ ಪ್ರತಿಭಟನೆ ಎಲ್ಲರ ಗಮನ ಸೆಳೆದಿದ್ದು, ಇದು ಜಿಲ್ಲೆಯಾದ್ಯಂತ ಕೈಗಾರಿಕಾ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...