Homeಚಳವಳಿತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

ತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

- Advertisement -
- Advertisement -

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೊಂದಿಗೆ ಸಂಯೋಜಿತವಾಗಿರುವ ತಮಿಳುನಾಡಿನ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ಮತ್ತು ಸ್ಯಾಮ್‌ಸಂಗ್ ಇಂಡಿಯಾ ಆಡಳಿತ ಮಂಡಳಿಯ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಎಸ್‌ಐಡಬ್ಲ್ಯುಯು ತನ್ನ ಪ್ರತಿಭಟನೆಯನ್ನು ಕಂಪನಿಯ ಆವರಣದಿಂದ ಹೊರಗಡೆಗೆ ವಿಸ್ತರಿಸಲು ನಿರ್ಧರಿಸಿದೆ.

ಫೆಬ್ರವರಿ 21 ಶುಕ್ರವಾರ ಕಾಂಚೀಪುರಂ ಜಿಲ್ಲೆಯ ನಾಲ್ಕು ರಾಜ್ಯ ಕೈಗಾರಿಕಾ ಉತ್ತೇಜನ ನಿಗಮದ (SIPCOT)ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಸಿಐಟಿಯು ಸಿದ್ದತೆ ಮಾಡಿಕೊಂಡಿದೆ.

ಅಲ್ಲದೆ, ಶುಕ್ರವಾರ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರ್ ಕಾರ್ಖಾನೆಯ ಗೇಟ್‌ಗಳನ್ನು ಮುಚ್ಚುವುದಾಗಿ ಸಿಐಟಿಯು ಘೋಷಿಸಿದೆ. ಗುತ್ತಿಗೆ ಕಾರ್ಮಿಕರನ್ನು ‘ಅಕ್ರಮ ಕಾರ್ಮಿಕರು’ ಎಂದು ಕರೆದಿರುವ ಸಿಐಟಿಯು, ಅವರು ಕಾರ್ಖಾನೆ ಆವರಣಕ್ಕೆ ಪ್ರವೇಶಿಸುವುದನ್ನು ತಡೆಯುತ್ತೇವೆ ಎಂದಿದೆ.

ಮಾರ್ಚ್ 7ರಂದು ಕಾಂಚೀಪುರಂ ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಒಂದು ದಿನದ ಮುಷ್ಕರ ನಡೆಸುವುದಾಗಿ ಸಿಐಟಿಯು ಘೋಷಣೆ ಮಾಡಿದೆ.

ಸಿಐಟಿಯು ಕಾಂಚೀಪುರಂ ಜಿಲ್ಲಾ ಕಾರ್ಯದರ್ಶಿ ಮತ್ತು ಎಸ್‌ಐಡಬ್ಲ್ಯುಯು ಅಧ್ಯಕ್ಷ ಇ. ಮುತ್ತುಕುಮಾರ್ ಮಾತನಾಡಿ, “ಸ್ಯಾಮ್‌ಸಂಗ್ ಕಂಪನಿ ಮೂವರು ಎಸ್‌ಐಡಬ್ಲ್ಯುಯು ಪದಾಧಿಕಾರಿಗಳ ಅಮಾನತು ರದ್ದುಗೊಳಿಸಿದರೆ ಮುಷ್ಕರ ಕೊನೆಗೊಳಿಸಲು ನಮ್ಮ ಒಕ್ಕೂಟ ಸಿದ್ಧವಿದೆ ಎಂದು ಹೇಳಿದ್ದಾರೆ. ಕಂಪನಿ ನಮ್ಮ ಬೇಡಿಕೆಯನ್ನು ಪರಿಹರಿಸುವ ಬದಲು, ಒಕ್ಕೂಟಕ್ಕೆ ಸಂಬಂಧಿಸಿದ ಇನ್ನೂ 18 ಕಾರ್ಮಿಕರನ್ನು ಅಮಾನತುಗೊಳಿಸಲು ಯೋಜಿಸುತ್ತಿದೆ ಎಂದು ಮುತ್ತುಕುಮಾರ್ ಆರೋಪಿಸಿದ್ದಾರೆ.

ಫೆಬ್ರವರಿ 19ರಂದು ತಮಿಳುನಾಡು ಕಾರ್ಮಿಕ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಎಸ್‌ಐಡಬ್ಲ್ಯುಯು ಮತ್ತು ಸ್ಯಾಮ್‌ಸಂಗ್ ಆಡಳಿತ ಮಂಡಳಿಯ ನಡುವೆ ನಡೆದ ಮತ್ತೊಂದು ಸುತ್ತಿನ ರಾಜಿ ಮಾತುಕತೆ ವಿಫಲವಾಗಿದೆ.

ಫೆಬ್ರವರಿ 5ರಂದು ಪ್ರತಿಭಟನೆ ಪ್ರಾರಂಭಿಸಿರುವ 500 ಕ್ಕೂ ಹೆಚ್ಚು ಸ್ಯಾಮ್‌ಸಂಗ್ ಕಾರ್ಮಿಕರು, ಮೂವರು ಎಸ್‌ಐಡಬ್ಲ್ಯುಯು ಸದಸ್ಯರ ಅಮಾನತನ್ನು ಖಂಡಿಸಿದ್ದಾರೆ. 38 ದಿನಗಳ ಮುಷ್ಕರ ಮತ್ತು 212 ದಿನಗಳ ಕಾನೂನು ಹೋರಾಟದ ನಂತರ ತಮಿಳುನಾಡು ರಾಜ್ಯ ಕಾರ್ಮಿಕ ಕಲ್ಯಾಣ ಇಲಾಖೆಯು ಎಸ್‌ಐಡಬ್ಲ್ಯುಯು ಅನ್ನು ಜನವರಿ 27ರಂದು ಅಧಿಕೃತವಾಗಿ ನೋಂದಾಯಿಸಿಕೊಂಡಿದೆ.

ಕಾರ್ಮಿಕರ ಪ್ರತಿಭಟನೆ ಮುಂದುರಿದಿರುವ ನಡುವೆ ಹೇಳಿಕೆ ನೀಡಿರುವ ಸ್ಯಾಮ್‌ಸಂಗ್ ಇಂಡಿಯಾ ವಕ್ತಾರರು “ನಮ್ಮ ಕಾರ್ಮಿಕರೊಂದಿಗೆ ನೇರವಾಗಿ ಮಾತನಾಡುವ ಮೂಲಕ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧವಾಗಿದ್ದೇವೆ. ಕೈಗಾರಿಕಾ ಶಾಂತಿ ಮತ್ತು ಕೆಲಸದ ಸ್ಥಳದ ಸುರಕ್ಷತೆಗೆ ಧಕ್ಕೆ ತರುವ ಕೆಲವು ಕಾರ್ಮಿಕರ ಕಾನೂನುಬಾಹಿರ ಚಟುವಟಿಕೆಗಳನ್ನು ನಾವು ಕ್ಷಮಿಸುವುದಿಲ್ಲ. ಎಲ್ಲಾ ಉದ್ಯೋಗಿಗಳು ಕಂಪನಿಯ ನೀತಿಗಳಿಗೆ ಬದ್ಧರಾಗಿರಬೇಕು ಮತ್ತು ಈ ನೀತಿಗಳನ್ನು ಉಲ್ಲಂಘಿಸುವವರು ಸರಿಯಾದ ಕಾನೂನುಬದ್ಧ ಪ್ರಕ್ರಿಯೆಯ ನಂತರ ಶಿಸ್ತು ಕ್ರಮಕ್ಕೆ ಒಳಪಡುತ್ತಾರೆ. ಎಲ್ಲಾ ಕಾರ್ಮಿಕರಿಗೆ ಸುರಕ್ಷಿತ ಮತ್ತು ಸ್ಥಿರವಾದ ಕೆಲಸದ ಸ್ಥಳವನ್ನು ಒದಗಿಸಿಕೊಡುವುದು ನಮ್ಮ ಆದ್ಯತೆಯಾಗಿದೆ” ಎಂದಿದ್ದಾರೆ.

ಕಾಂಚೀಪುರಂ ಜಿಲ್ಲೆಯ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರು ಘಟಕ ಸುಮಾರು 1,800 ಕಾರ್ಮಿಕರನ್ನು ನೇಮಿಸಿಕೊಂಡಿದೆ. ಇಲ್ಲಿ ಟೆಲಿವಿಷನ್‌, ವಾಷಿಂಗ್ ಮೆಷಿನ್‌, ರೆಫ್ರಿಜರೇಟರ್‌, ಹವಾನಿಯಂತ್ರಣಗಳು ಮತ್ತು ಕಂಪ್ರೆಸರ್‌ಗಳನ್ನು ತಯಾರಿಸಲಾಗುತ್ತದೆ. ಈ ಘಟಕವು 2022-23ರಲ್ಲಿ ಸ್ಯಾಮ್‌ಸಂಗ್‌ನ 12 ಬಿಲಿಯನ್ ಡಾಲರ್ ಭಾರತದ ಮಾರಾಟದಲ್ಲಿ ಐದನೇ ಒಂದು ಭಾಗವನ್ನು ಹೊಂದಿದೆ.

ಫೆಬ್ರವರಿ 21ರಂದು ನಡೆಯಲಿರುವ ಪ್ರತಿಭಟನೆ ಎಲ್ಲರ ಗಮನ ಸೆಳೆದಿದ್ದು, ಇದು ಜಿಲ್ಲೆಯಾದ್ಯಂತ ಕೈಗಾರಿಕಾ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...