Homeಚಳವಳಿತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

ತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

- Advertisement -
- Advertisement -

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೊಂದಿಗೆ ಸಂಯೋಜಿತವಾಗಿರುವ ತಮಿಳುನಾಡಿನ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ಮತ್ತು ಸ್ಯಾಮ್‌ಸಂಗ್ ಇಂಡಿಯಾ ಆಡಳಿತ ಮಂಡಳಿಯ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಎಸ್‌ಐಡಬ್ಲ್ಯುಯು ತನ್ನ ಪ್ರತಿಭಟನೆಯನ್ನು ಕಂಪನಿಯ ಆವರಣದಿಂದ ಹೊರಗಡೆಗೆ ವಿಸ್ತರಿಸಲು ನಿರ್ಧರಿಸಿದೆ.

ಫೆಬ್ರವರಿ 21 ಶುಕ್ರವಾರ ಕಾಂಚೀಪುರಂ ಜಿಲ್ಲೆಯ ನಾಲ್ಕು ರಾಜ್ಯ ಕೈಗಾರಿಕಾ ಉತ್ತೇಜನ ನಿಗಮದ (SIPCOT)ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಸಿಐಟಿಯು ಸಿದ್ದತೆ ಮಾಡಿಕೊಂಡಿದೆ.

ಅಲ್ಲದೆ, ಶುಕ್ರವಾರ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರ್ ಕಾರ್ಖಾನೆಯ ಗೇಟ್‌ಗಳನ್ನು ಮುಚ್ಚುವುದಾಗಿ ಸಿಐಟಿಯು ಘೋಷಿಸಿದೆ. ಗುತ್ತಿಗೆ ಕಾರ್ಮಿಕರನ್ನು ‘ಅಕ್ರಮ ಕಾರ್ಮಿಕರು’ ಎಂದು ಕರೆದಿರುವ ಸಿಐಟಿಯು, ಅವರು ಕಾರ್ಖಾನೆ ಆವರಣಕ್ಕೆ ಪ್ರವೇಶಿಸುವುದನ್ನು ತಡೆಯುತ್ತೇವೆ ಎಂದಿದೆ.

ಮಾರ್ಚ್ 7ರಂದು ಕಾಂಚೀಪುರಂ ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಒಂದು ದಿನದ ಮುಷ್ಕರ ನಡೆಸುವುದಾಗಿ ಸಿಐಟಿಯು ಘೋಷಣೆ ಮಾಡಿದೆ.

ಸಿಐಟಿಯು ಕಾಂಚೀಪುರಂ ಜಿಲ್ಲಾ ಕಾರ್ಯದರ್ಶಿ ಮತ್ತು ಎಸ್‌ಐಡಬ್ಲ್ಯುಯು ಅಧ್ಯಕ್ಷ ಇ. ಮುತ್ತುಕುಮಾರ್ ಮಾತನಾಡಿ, “ಸ್ಯಾಮ್‌ಸಂಗ್ ಕಂಪನಿ ಮೂವರು ಎಸ್‌ಐಡಬ್ಲ್ಯುಯು ಪದಾಧಿಕಾರಿಗಳ ಅಮಾನತು ರದ್ದುಗೊಳಿಸಿದರೆ ಮುಷ್ಕರ ಕೊನೆಗೊಳಿಸಲು ನಮ್ಮ ಒಕ್ಕೂಟ ಸಿದ್ಧವಿದೆ ಎಂದು ಹೇಳಿದ್ದಾರೆ. ಕಂಪನಿ ನಮ್ಮ ಬೇಡಿಕೆಯನ್ನು ಪರಿಹರಿಸುವ ಬದಲು, ಒಕ್ಕೂಟಕ್ಕೆ ಸಂಬಂಧಿಸಿದ ಇನ್ನೂ 18 ಕಾರ್ಮಿಕರನ್ನು ಅಮಾನತುಗೊಳಿಸಲು ಯೋಜಿಸುತ್ತಿದೆ ಎಂದು ಮುತ್ತುಕುಮಾರ್ ಆರೋಪಿಸಿದ್ದಾರೆ.

ಫೆಬ್ರವರಿ 19ರಂದು ತಮಿಳುನಾಡು ಕಾರ್ಮಿಕ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಎಸ್‌ಐಡಬ್ಲ್ಯುಯು ಮತ್ತು ಸ್ಯಾಮ್‌ಸಂಗ್ ಆಡಳಿತ ಮಂಡಳಿಯ ನಡುವೆ ನಡೆದ ಮತ್ತೊಂದು ಸುತ್ತಿನ ರಾಜಿ ಮಾತುಕತೆ ವಿಫಲವಾಗಿದೆ.

ಫೆಬ್ರವರಿ 5ರಂದು ಪ್ರತಿಭಟನೆ ಪ್ರಾರಂಭಿಸಿರುವ 500 ಕ್ಕೂ ಹೆಚ್ಚು ಸ್ಯಾಮ್‌ಸಂಗ್ ಕಾರ್ಮಿಕರು, ಮೂವರು ಎಸ್‌ಐಡಬ್ಲ್ಯುಯು ಸದಸ್ಯರ ಅಮಾನತನ್ನು ಖಂಡಿಸಿದ್ದಾರೆ. 38 ದಿನಗಳ ಮುಷ್ಕರ ಮತ್ತು 212 ದಿನಗಳ ಕಾನೂನು ಹೋರಾಟದ ನಂತರ ತಮಿಳುನಾಡು ರಾಜ್ಯ ಕಾರ್ಮಿಕ ಕಲ್ಯಾಣ ಇಲಾಖೆಯು ಎಸ್‌ಐಡಬ್ಲ್ಯುಯು ಅನ್ನು ಜನವರಿ 27ರಂದು ಅಧಿಕೃತವಾಗಿ ನೋಂದಾಯಿಸಿಕೊಂಡಿದೆ.

ಕಾರ್ಮಿಕರ ಪ್ರತಿಭಟನೆ ಮುಂದುರಿದಿರುವ ನಡುವೆ ಹೇಳಿಕೆ ನೀಡಿರುವ ಸ್ಯಾಮ್‌ಸಂಗ್ ಇಂಡಿಯಾ ವಕ್ತಾರರು “ನಮ್ಮ ಕಾರ್ಮಿಕರೊಂದಿಗೆ ನೇರವಾಗಿ ಮಾತನಾಡುವ ಮೂಲಕ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧವಾಗಿದ್ದೇವೆ. ಕೈಗಾರಿಕಾ ಶಾಂತಿ ಮತ್ತು ಕೆಲಸದ ಸ್ಥಳದ ಸುರಕ್ಷತೆಗೆ ಧಕ್ಕೆ ತರುವ ಕೆಲವು ಕಾರ್ಮಿಕರ ಕಾನೂನುಬಾಹಿರ ಚಟುವಟಿಕೆಗಳನ್ನು ನಾವು ಕ್ಷಮಿಸುವುದಿಲ್ಲ. ಎಲ್ಲಾ ಉದ್ಯೋಗಿಗಳು ಕಂಪನಿಯ ನೀತಿಗಳಿಗೆ ಬದ್ಧರಾಗಿರಬೇಕು ಮತ್ತು ಈ ನೀತಿಗಳನ್ನು ಉಲ್ಲಂಘಿಸುವವರು ಸರಿಯಾದ ಕಾನೂನುಬದ್ಧ ಪ್ರಕ್ರಿಯೆಯ ನಂತರ ಶಿಸ್ತು ಕ್ರಮಕ್ಕೆ ಒಳಪಡುತ್ತಾರೆ. ಎಲ್ಲಾ ಕಾರ್ಮಿಕರಿಗೆ ಸುರಕ್ಷಿತ ಮತ್ತು ಸ್ಥಿರವಾದ ಕೆಲಸದ ಸ್ಥಳವನ್ನು ಒದಗಿಸಿಕೊಡುವುದು ನಮ್ಮ ಆದ್ಯತೆಯಾಗಿದೆ” ಎಂದಿದ್ದಾರೆ.

ಕಾಂಚೀಪುರಂ ಜಿಲ್ಲೆಯ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರು ಘಟಕ ಸುಮಾರು 1,800 ಕಾರ್ಮಿಕರನ್ನು ನೇಮಿಸಿಕೊಂಡಿದೆ. ಇಲ್ಲಿ ಟೆಲಿವಿಷನ್‌, ವಾಷಿಂಗ್ ಮೆಷಿನ್‌, ರೆಫ್ರಿಜರೇಟರ್‌, ಹವಾನಿಯಂತ್ರಣಗಳು ಮತ್ತು ಕಂಪ್ರೆಸರ್‌ಗಳನ್ನು ತಯಾರಿಸಲಾಗುತ್ತದೆ. ಈ ಘಟಕವು 2022-23ರಲ್ಲಿ ಸ್ಯಾಮ್‌ಸಂಗ್‌ನ 12 ಬಿಲಿಯನ್ ಡಾಲರ್ ಭಾರತದ ಮಾರಾಟದಲ್ಲಿ ಐದನೇ ಒಂದು ಭಾಗವನ್ನು ಹೊಂದಿದೆ.

ಫೆಬ್ರವರಿ 21ರಂದು ನಡೆಯಲಿರುವ ಪ್ರತಿಭಟನೆ ಎಲ್ಲರ ಗಮನ ಸೆಳೆದಿದ್ದು, ಇದು ಜಿಲ್ಲೆಯಾದ್ಯಂತ ಕೈಗಾರಿಕಾ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...