Homeಚಳವಳಿತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

ತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

- Advertisement -
- Advertisement -

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೊಂದಿಗೆ ಸಂಯೋಜಿತವಾಗಿರುವ ತಮಿಳುನಾಡಿನ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ಮತ್ತು ಸ್ಯಾಮ್‌ಸಂಗ್ ಇಂಡಿಯಾ ಆಡಳಿತ ಮಂಡಳಿಯ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಎಸ್‌ಐಡಬ್ಲ್ಯುಯು ತನ್ನ ಪ್ರತಿಭಟನೆಯನ್ನು ಕಂಪನಿಯ ಆವರಣದಿಂದ ಹೊರಗಡೆಗೆ ವಿಸ್ತರಿಸಲು ನಿರ್ಧರಿಸಿದೆ.

ಫೆಬ್ರವರಿ 21 ಶುಕ್ರವಾರ ಕಾಂಚೀಪುರಂ ಜಿಲ್ಲೆಯ ನಾಲ್ಕು ರಾಜ್ಯ ಕೈಗಾರಿಕಾ ಉತ್ತೇಜನ ನಿಗಮದ (SIPCOT)ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಸಿಐಟಿಯು ಸಿದ್ದತೆ ಮಾಡಿಕೊಂಡಿದೆ.

ಅಲ್ಲದೆ, ಶುಕ್ರವಾರ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರ್ ಕಾರ್ಖಾನೆಯ ಗೇಟ್‌ಗಳನ್ನು ಮುಚ್ಚುವುದಾಗಿ ಸಿಐಟಿಯು ಘೋಷಿಸಿದೆ. ಗುತ್ತಿಗೆ ಕಾರ್ಮಿಕರನ್ನು ‘ಅಕ್ರಮ ಕಾರ್ಮಿಕರು’ ಎಂದು ಕರೆದಿರುವ ಸಿಐಟಿಯು, ಅವರು ಕಾರ್ಖಾನೆ ಆವರಣಕ್ಕೆ ಪ್ರವೇಶಿಸುವುದನ್ನು ತಡೆಯುತ್ತೇವೆ ಎಂದಿದೆ.

ಮಾರ್ಚ್ 7ರಂದು ಕಾಂಚೀಪುರಂ ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಒಂದು ದಿನದ ಮುಷ್ಕರ ನಡೆಸುವುದಾಗಿ ಸಿಐಟಿಯು ಘೋಷಣೆ ಮಾಡಿದೆ.

ಸಿಐಟಿಯು ಕಾಂಚೀಪುರಂ ಜಿಲ್ಲಾ ಕಾರ್ಯದರ್ಶಿ ಮತ್ತು ಎಸ್‌ಐಡಬ್ಲ್ಯುಯು ಅಧ್ಯಕ್ಷ ಇ. ಮುತ್ತುಕುಮಾರ್ ಮಾತನಾಡಿ, “ಸ್ಯಾಮ್‌ಸಂಗ್ ಕಂಪನಿ ಮೂವರು ಎಸ್‌ಐಡಬ್ಲ್ಯುಯು ಪದಾಧಿಕಾರಿಗಳ ಅಮಾನತು ರದ್ದುಗೊಳಿಸಿದರೆ ಮುಷ್ಕರ ಕೊನೆಗೊಳಿಸಲು ನಮ್ಮ ಒಕ್ಕೂಟ ಸಿದ್ಧವಿದೆ ಎಂದು ಹೇಳಿದ್ದಾರೆ. ಕಂಪನಿ ನಮ್ಮ ಬೇಡಿಕೆಯನ್ನು ಪರಿಹರಿಸುವ ಬದಲು, ಒಕ್ಕೂಟಕ್ಕೆ ಸಂಬಂಧಿಸಿದ ಇನ್ನೂ 18 ಕಾರ್ಮಿಕರನ್ನು ಅಮಾನತುಗೊಳಿಸಲು ಯೋಜಿಸುತ್ತಿದೆ ಎಂದು ಮುತ್ತುಕುಮಾರ್ ಆರೋಪಿಸಿದ್ದಾರೆ.

ಫೆಬ್ರವರಿ 19ರಂದು ತಮಿಳುನಾಡು ಕಾರ್ಮಿಕ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಎಸ್‌ಐಡಬ್ಲ್ಯುಯು ಮತ್ತು ಸ್ಯಾಮ್‌ಸಂಗ್ ಆಡಳಿತ ಮಂಡಳಿಯ ನಡುವೆ ನಡೆದ ಮತ್ತೊಂದು ಸುತ್ತಿನ ರಾಜಿ ಮಾತುಕತೆ ವಿಫಲವಾಗಿದೆ.

ಫೆಬ್ರವರಿ 5ರಂದು ಪ್ರತಿಭಟನೆ ಪ್ರಾರಂಭಿಸಿರುವ 500 ಕ್ಕೂ ಹೆಚ್ಚು ಸ್ಯಾಮ್‌ಸಂಗ್ ಕಾರ್ಮಿಕರು, ಮೂವರು ಎಸ್‌ಐಡಬ್ಲ್ಯುಯು ಸದಸ್ಯರ ಅಮಾನತನ್ನು ಖಂಡಿಸಿದ್ದಾರೆ. 38 ದಿನಗಳ ಮುಷ್ಕರ ಮತ್ತು 212 ದಿನಗಳ ಕಾನೂನು ಹೋರಾಟದ ನಂತರ ತಮಿಳುನಾಡು ರಾಜ್ಯ ಕಾರ್ಮಿಕ ಕಲ್ಯಾಣ ಇಲಾಖೆಯು ಎಸ್‌ಐಡಬ್ಲ್ಯುಯು ಅನ್ನು ಜನವರಿ 27ರಂದು ಅಧಿಕೃತವಾಗಿ ನೋಂದಾಯಿಸಿಕೊಂಡಿದೆ.

ಕಾರ್ಮಿಕರ ಪ್ರತಿಭಟನೆ ಮುಂದುರಿದಿರುವ ನಡುವೆ ಹೇಳಿಕೆ ನೀಡಿರುವ ಸ್ಯಾಮ್‌ಸಂಗ್ ಇಂಡಿಯಾ ವಕ್ತಾರರು “ನಮ್ಮ ಕಾರ್ಮಿಕರೊಂದಿಗೆ ನೇರವಾಗಿ ಮಾತನಾಡುವ ಮೂಲಕ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧವಾಗಿದ್ದೇವೆ. ಕೈಗಾರಿಕಾ ಶಾಂತಿ ಮತ್ತು ಕೆಲಸದ ಸ್ಥಳದ ಸುರಕ್ಷತೆಗೆ ಧಕ್ಕೆ ತರುವ ಕೆಲವು ಕಾರ್ಮಿಕರ ಕಾನೂನುಬಾಹಿರ ಚಟುವಟಿಕೆಗಳನ್ನು ನಾವು ಕ್ಷಮಿಸುವುದಿಲ್ಲ. ಎಲ್ಲಾ ಉದ್ಯೋಗಿಗಳು ಕಂಪನಿಯ ನೀತಿಗಳಿಗೆ ಬದ್ಧರಾಗಿರಬೇಕು ಮತ್ತು ಈ ನೀತಿಗಳನ್ನು ಉಲ್ಲಂಘಿಸುವವರು ಸರಿಯಾದ ಕಾನೂನುಬದ್ಧ ಪ್ರಕ್ರಿಯೆಯ ನಂತರ ಶಿಸ್ತು ಕ್ರಮಕ್ಕೆ ಒಳಪಡುತ್ತಾರೆ. ಎಲ್ಲಾ ಕಾರ್ಮಿಕರಿಗೆ ಸುರಕ್ಷಿತ ಮತ್ತು ಸ್ಥಿರವಾದ ಕೆಲಸದ ಸ್ಥಳವನ್ನು ಒದಗಿಸಿಕೊಡುವುದು ನಮ್ಮ ಆದ್ಯತೆಯಾಗಿದೆ” ಎಂದಿದ್ದಾರೆ.

ಕಾಂಚೀಪುರಂ ಜಿಲ್ಲೆಯ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರು ಘಟಕ ಸುಮಾರು 1,800 ಕಾರ್ಮಿಕರನ್ನು ನೇಮಿಸಿಕೊಂಡಿದೆ. ಇಲ್ಲಿ ಟೆಲಿವಿಷನ್‌, ವಾಷಿಂಗ್ ಮೆಷಿನ್‌, ರೆಫ್ರಿಜರೇಟರ್‌, ಹವಾನಿಯಂತ್ರಣಗಳು ಮತ್ತು ಕಂಪ್ರೆಸರ್‌ಗಳನ್ನು ತಯಾರಿಸಲಾಗುತ್ತದೆ. ಈ ಘಟಕವು 2022-23ರಲ್ಲಿ ಸ್ಯಾಮ್‌ಸಂಗ್‌ನ 12 ಬಿಲಿಯನ್ ಡಾಲರ್ ಭಾರತದ ಮಾರಾಟದಲ್ಲಿ ಐದನೇ ಒಂದು ಭಾಗವನ್ನು ಹೊಂದಿದೆ.

ಫೆಬ್ರವರಿ 21ರಂದು ನಡೆಯಲಿರುವ ಪ್ರತಿಭಟನೆ ಎಲ್ಲರ ಗಮನ ಸೆಳೆದಿದ್ದು, ಇದು ಜಿಲ್ಲೆಯಾದ್ಯಂತ ಕೈಗಾರಿಕಾ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...