Homeಚಳವಳಿತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

ತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

- Advertisement -
- Advertisement -

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೊಂದಿಗೆ ಸಂಯೋಜಿತವಾಗಿರುವ ತಮಿಳುನಾಡಿನ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ಮತ್ತು ಸ್ಯಾಮ್‌ಸಂಗ್ ಇಂಡಿಯಾ ಆಡಳಿತ ಮಂಡಳಿಯ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಎಸ್‌ಐಡಬ್ಲ್ಯುಯು ತನ್ನ ಪ್ರತಿಭಟನೆಯನ್ನು ಕಂಪನಿಯ ಆವರಣದಿಂದ ಹೊರಗಡೆಗೆ ವಿಸ್ತರಿಸಲು ನಿರ್ಧರಿಸಿದೆ.

ಫೆಬ್ರವರಿ 21 ಶುಕ್ರವಾರ ಕಾಂಚೀಪುರಂ ಜಿಲ್ಲೆಯ ನಾಲ್ಕು ರಾಜ್ಯ ಕೈಗಾರಿಕಾ ಉತ್ತೇಜನ ನಿಗಮದ (SIPCOT)ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಸಿಐಟಿಯು ಸಿದ್ದತೆ ಮಾಡಿಕೊಂಡಿದೆ.

ಅಲ್ಲದೆ, ಶುಕ್ರವಾರ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರ್ ಕಾರ್ಖಾನೆಯ ಗೇಟ್‌ಗಳನ್ನು ಮುಚ್ಚುವುದಾಗಿ ಸಿಐಟಿಯು ಘೋಷಿಸಿದೆ. ಗುತ್ತಿಗೆ ಕಾರ್ಮಿಕರನ್ನು ‘ಅಕ್ರಮ ಕಾರ್ಮಿಕರು’ ಎಂದು ಕರೆದಿರುವ ಸಿಐಟಿಯು, ಅವರು ಕಾರ್ಖಾನೆ ಆವರಣಕ್ಕೆ ಪ್ರವೇಶಿಸುವುದನ್ನು ತಡೆಯುತ್ತೇವೆ ಎಂದಿದೆ.

ಮಾರ್ಚ್ 7ರಂದು ಕಾಂಚೀಪುರಂ ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಒಂದು ದಿನದ ಮುಷ್ಕರ ನಡೆಸುವುದಾಗಿ ಸಿಐಟಿಯು ಘೋಷಣೆ ಮಾಡಿದೆ.

ಸಿಐಟಿಯು ಕಾಂಚೀಪುರಂ ಜಿಲ್ಲಾ ಕಾರ್ಯದರ್ಶಿ ಮತ್ತು ಎಸ್‌ಐಡಬ್ಲ್ಯುಯು ಅಧ್ಯಕ್ಷ ಇ. ಮುತ್ತುಕುಮಾರ್ ಮಾತನಾಡಿ, “ಸ್ಯಾಮ್‌ಸಂಗ್ ಕಂಪನಿ ಮೂವರು ಎಸ್‌ಐಡಬ್ಲ್ಯುಯು ಪದಾಧಿಕಾರಿಗಳ ಅಮಾನತು ರದ್ದುಗೊಳಿಸಿದರೆ ಮುಷ್ಕರ ಕೊನೆಗೊಳಿಸಲು ನಮ್ಮ ಒಕ್ಕೂಟ ಸಿದ್ಧವಿದೆ ಎಂದು ಹೇಳಿದ್ದಾರೆ. ಕಂಪನಿ ನಮ್ಮ ಬೇಡಿಕೆಯನ್ನು ಪರಿಹರಿಸುವ ಬದಲು, ಒಕ್ಕೂಟಕ್ಕೆ ಸಂಬಂಧಿಸಿದ ಇನ್ನೂ 18 ಕಾರ್ಮಿಕರನ್ನು ಅಮಾನತುಗೊಳಿಸಲು ಯೋಜಿಸುತ್ತಿದೆ ಎಂದು ಮುತ್ತುಕುಮಾರ್ ಆರೋಪಿಸಿದ್ದಾರೆ.

ಫೆಬ್ರವರಿ 19ರಂದು ತಮಿಳುನಾಡು ಕಾರ್ಮಿಕ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಎಸ್‌ಐಡಬ್ಲ್ಯುಯು ಮತ್ತು ಸ್ಯಾಮ್‌ಸಂಗ್ ಆಡಳಿತ ಮಂಡಳಿಯ ನಡುವೆ ನಡೆದ ಮತ್ತೊಂದು ಸುತ್ತಿನ ರಾಜಿ ಮಾತುಕತೆ ವಿಫಲವಾಗಿದೆ.

ಫೆಬ್ರವರಿ 5ರಂದು ಪ್ರತಿಭಟನೆ ಪ್ರಾರಂಭಿಸಿರುವ 500 ಕ್ಕೂ ಹೆಚ್ಚು ಸ್ಯಾಮ್‌ಸಂಗ್ ಕಾರ್ಮಿಕರು, ಮೂವರು ಎಸ್‌ಐಡಬ್ಲ್ಯುಯು ಸದಸ್ಯರ ಅಮಾನತನ್ನು ಖಂಡಿಸಿದ್ದಾರೆ. 38 ದಿನಗಳ ಮುಷ್ಕರ ಮತ್ತು 212 ದಿನಗಳ ಕಾನೂನು ಹೋರಾಟದ ನಂತರ ತಮಿಳುನಾಡು ರಾಜ್ಯ ಕಾರ್ಮಿಕ ಕಲ್ಯಾಣ ಇಲಾಖೆಯು ಎಸ್‌ಐಡಬ್ಲ್ಯುಯು ಅನ್ನು ಜನವರಿ 27ರಂದು ಅಧಿಕೃತವಾಗಿ ನೋಂದಾಯಿಸಿಕೊಂಡಿದೆ.

ಕಾರ್ಮಿಕರ ಪ್ರತಿಭಟನೆ ಮುಂದುರಿದಿರುವ ನಡುವೆ ಹೇಳಿಕೆ ನೀಡಿರುವ ಸ್ಯಾಮ್‌ಸಂಗ್ ಇಂಡಿಯಾ ವಕ್ತಾರರು “ನಮ್ಮ ಕಾರ್ಮಿಕರೊಂದಿಗೆ ನೇರವಾಗಿ ಮಾತನಾಡುವ ಮೂಲಕ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧವಾಗಿದ್ದೇವೆ. ಕೈಗಾರಿಕಾ ಶಾಂತಿ ಮತ್ತು ಕೆಲಸದ ಸ್ಥಳದ ಸುರಕ್ಷತೆಗೆ ಧಕ್ಕೆ ತರುವ ಕೆಲವು ಕಾರ್ಮಿಕರ ಕಾನೂನುಬಾಹಿರ ಚಟುವಟಿಕೆಗಳನ್ನು ನಾವು ಕ್ಷಮಿಸುವುದಿಲ್ಲ. ಎಲ್ಲಾ ಉದ್ಯೋಗಿಗಳು ಕಂಪನಿಯ ನೀತಿಗಳಿಗೆ ಬದ್ಧರಾಗಿರಬೇಕು ಮತ್ತು ಈ ನೀತಿಗಳನ್ನು ಉಲ್ಲಂಘಿಸುವವರು ಸರಿಯಾದ ಕಾನೂನುಬದ್ಧ ಪ್ರಕ್ರಿಯೆಯ ನಂತರ ಶಿಸ್ತು ಕ್ರಮಕ್ಕೆ ಒಳಪಡುತ್ತಾರೆ. ಎಲ್ಲಾ ಕಾರ್ಮಿಕರಿಗೆ ಸುರಕ್ಷಿತ ಮತ್ತು ಸ್ಥಿರವಾದ ಕೆಲಸದ ಸ್ಥಳವನ್ನು ಒದಗಿಸಿಕೊಡುವುದು ನಮ್ಮ ಆದ್ಯತೆಯಾಗಿದೆ” ಎಂದಿದ್ದಾರೆ.

ಕಾಂಚೀಪುರಂ ಜಿಲ್ಲೆಯ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರು ಘಟಕ ಸುಮಾರು 1,800 ಕಾರ್ಮಿಕರನ್ನು ನೇಮಿಸಿಕೊಂಡಿದೆ. ಇಲ್ಲಿ ಟೆಲಿವಿಷನ್‌, ವಾಷಿಂಗ್ ಮೆಷಿನ್‌, ರೆಫ್ರಿಜರೇಟರ್‌, ಹವಾನಿಯಂತ್ರಣಗಳು ಮತ್ತು ಕಂಪ್ರೆಸರ್‌ಗಳನ್ನು ತಯಾರಿಸಲಾಗುತ್ತದೆ. ಈ ಘಟಕವು 2022-23ರಲ್ಲಿ ಸ್ಯಾಮ್‌ಸಂಗ್‌ನ 12 ಬಿಲಿಯನ್ ಡಾಲರ್ ಭಾರತದ ಮಾರಾಟದಲ್ಲಿ ಐದನೇ ಒಂದು ಭಾಗವನ್ನು ಹೊಂದಿದೆ.

ಫೆಬ್ರವರಿ 21ರಂದು ನಡೆಯಲಿರುವ ಪ್ರತಿಭಟನೆ ಎಲ್ಲರ ಗಮನ ಸೆಳೆದಿದ್ದು, ಇದು ಜಿಲ್ಲೆಯಾದ್ಯಂತ ಕೈಗಾರಿಕಾ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...