Homeಚಳವಳಿತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

ತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

- Advertisement -
- Advertisement -

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೊಂದಿಗೆ ಸಂಯೋಜಿತವಾಗಿರುವ ತಮಿಳುನಾಡಿನ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ಮತ್ತು ಸ್ಯಾಮ್‌ಸಂಗ್ ಇಂಡಿಯಾ ಆಡಳಿತ ಮಂಡಳಿಯ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಎಸ್‌ಐಡಬ್ಲ್ಯುಯು ತನ್ನ ಪ್ರತಿಭಟನೆಯನ್ನು ಕಂಪನಿಯ ಆವರಣದಿಂದ ಹೊರಗಡೆಗೆ ವಿಸ್ತರಿಸಲು ನಿರ್ಧರಿಸಿದೆ.

ಫೆಬ್ರವರಿ 21 ಶುಕ್ರವಾರ ಕಾಂಚೀಪುರಂ ಜಿಲ್ಲೆಯ ನಾಲ್ಕು ರಾಜ್ಯ ಕೈಗಾರಿಕಾ ಉತ್ತೇಜನ ನಿಗಮದ (SIPCOT)ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಸಿಐಟಿಯು ಸಿದ್ದತೆ ಮಾಡಿಕೊಂಡಿದೆ.

ಅಲ್ಲದೆ, ಶುಕ್ರವಾರ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರ್ ಕಾರ್ಖಾನೆಯ ಗೇಟ್‌ಗಳನ್ನು ಮುಚ್ಚುವುದಾಗಿ ಸಿಐಟಿಯು ಘೋಷಿಸಿದೆ. ಗುತ್ತಿಗೆ ಕಾರ್ಮಿಕರನ್ನು ‘ಅಕ್ರಮ ಕಾರ್ಮಿಕರು’ ಎಂದು ಕರೆದಿರುವ ಸಿಐಟಿಯು, ಅವರು ಕಾರ್ಖಾನೆ ಆವರಣಕ್ಕೆ ಪ್ರವೇಶಿಸುವುದನ್ನು ತಡೆಯುತ್ತೇವೆ ಎಂದಿದೆ.

ಮಾರ್ಚ್ 7ರಂದು ಕಾಂಚೀಪುರಂ ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಒಂದು ದಿನದ ಮುಷ್ಕರ ನಡೆಸುವುದಾಗಿ ಸಿಐಟಿಯು ಘೋಷಣೆ ಮಾಡಿದೆ.

ಸಿಐಟಿಯು ಕಾಂಚೀಪುರಂ ಜಿಲ್ಲಾ ಕಾರ್ಯದರ್ಶಿ ಮತ್ತು ಎಸ್‌ಐಡಬ್ಲ್ಯುಯು ಅಧ್ಯಕ್ಷ ಇ. ಮುತ್ತುಕುಮಾರ್ ಮಾತನಾಡಿ, “ಸ್ಯಾಮ್‌ಸಂಗ್ ಕಂಪನಿ ಮೂವರು ಎಸ್‌ಐಡಬ್ಲ್ಯುಯು ಪದಾಧಿಕಾರಿಗಳ ಅಮಾನತು ರದ್ದುಗೊಳಿಸಿದರೆ ಮುಷ್ಕರ ಕೊನೆಗೊಳಿಸಲು ನಮ್ಮ ಒಕ್ಕೂಟ ಸಿದ್ಧವಿದೆ ಎಂದು ಹೇಳಿದ್ದಾರೆ. ಕಂಪನಿ ನಮ್ಮ ಬೇಡಿಕೆಯನ್ನು ಪರಿಹರಿಸುವ ಬದಲು, ಒಕ್ಕೂಟಕ್ಕೆ ಸಂಬಂಧಿಸಿದ ಇನ್ನೂ 18 ಕಾರ್ಮಿಕರನ್ನು ಅಮಾನತುಗೊಳಿಸಲು ಯೋಜಿಸುತ್ತಿದೆ ಎಂದು ಮುತ್ತುಕುಮಾರ್ ಆರೋಪಿಸಿದ್ದಾರೆ.

ಫೆಬ್ರವರಿ 19ರಂದು ತಮಿಳುನಾಡು ಕಾರ್ಮಿಕ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಎಸ್‌ಐಡಬ್ಲ್ಯುಯು ಮತ್ತು ಸ್ಯಾಮ್‌ಸಂಗ್ ಆಡಳಿತ ಮಂಡಳಿಯ ನಡುವೆ ನಡೆದ ಮತ್ತೊಂದು ಸುತ್ತಿನ ರಾಜಿ ಮಾತುಕತೆ ವಿಫಲವಾಗಿದೆ.

ಫೆಬ್ರವರಿ 5ರಂದು ಪ್ರತಿಭಟನೆ ಪ್ರಾರಂಭಿಸಿರುವ 500 ಕ್ಕೂ ಹೆಚ್ಚು ಸ್ಯಾಮ್‌ಸಂಗ್ ಕಾರ್ಮಿಕರು, ಮೂವರು ಎಸ್‌ಐಡಬ್ಲ್ಯುಯು ಸದಸ್ಯರ ಅಮಾನತನ್ನು ಖಂಡಿಸಿದ್ದಾರೆ. 38 ದಿನಗಳ ಮುಷ್ಕರ ಮತ್ತು 212 ದಿನಗಳ ಕಾನೂನು ಹೋರಾಟದ ನಂತರ ತಮಿಳುನಾಡು ರಾಜ್ಯ ಕಾರ್ಮಿಕ ಕಲ್ಯಾಣ ಇಲಾಖೆಯು ಎಸ್‌ಐಡಬ್ಲ್ಯುಯು ಅನ್ನು ಜನವರಿ 27ರಂದು ಅಧಿಕೃತವಾಗಿ ನೋಂದಾಯಿಸಿಕೊಂಡಿದೆ.

ಕಾರ್ಮಿಕರ ಪ್ರತಿಭಟನೆ ಮುಂದುರಿದಿರುವ ನಡುವೆ ಹೇಳಿಕೆ ನೀಡಿರುವ ಸ್ಯಾಮ್‌ಸಂಗ್ ಇಂಡಿಯಾ ವಕ್ತಾರರು “ನಮ್ಮ ಕಾರ್ಮಿಕರೊಂದಿಗೆ ನೇರವಾಗಿ ಮಾತನಾಡುವ ಮೂಲಕ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧವಾಗಿದ್ದೇವೆ. ಕೈಗಾರಿಕಾ ಶಾಂತಿ ಮತ್ತು ಕೆಲಸದ ಸ್ಥಳದ ಸುರಕ್ಷತೆಗೆ ಧಕ್ಕೆ ತರುವ ಕೆಲವು ಕಾರ್ಮಿಕರ ಕಾನೂನುಬಾಹಿರ ಚಟುವಟಿಕೆಗಳನ್ನು ನಾವು ಕ್ಷಮಿಸುವುದಿಲ್ಲ. ಎಲ್ಲಾ ಉದ್ಯೋಗಿಗಳು ಕಂಪನಿಯ ನೀತಿಗಳಿಗೆ ಬದ್ಧರಾಗಿರಬೇಕು ಮತ್ತು ಈ ನೀತಿಗಳನ್ನು ಉಲ್ಲಂಘಿಸುವವರು ಸರಿಯಾದ ಕಾನೂನುಬದ್ಧ ಪ್ರಕ್ರಿಯೆಯ ನಂತರ ಶಿಸ್ತು ಕ್ರಮಕ್ಕೆ ಒಳಪಡುತ್ತಾರೆ. ಎಲ್ಲಾ ಕಾರ್ಮಿಕರಿಗೆ ಸುರಕ್ಷಿತ ಮತ್ತು ಸ್ಥಿರವಾದ ಕೆಲಸದ ಸ್ಥಳವನ್ನು ಒದಗಿಸಿಕೊಡುವುದು ನಮ್ಮ ಆದ್ಯತೆಯಾಗಿದೆ” ಎಂದಿದ್ದಾರೆ.

ಕಾಂಚೀಪುರಂ ಜಿಲ್ಲೆಯ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರು ಘಟಕ ಸುಮಾರು 1,800 ಕಾರ್ಮಿಕರನ್ನು ನೇಮಿಸಿಕೊಂಡಿದೆ. ಇಲ್ಲಿ ಟೆಲಿವಿಷನ್‌, ವಾಷಿಂಗ್ ಮೆಷಿನ್‌, ರೆಫ್ರಿಜರೇಟರ್‌, ಹವಾನಿಯಂತ್ರಣಗಳು ಮತ್ತು ಕಂಪ್ರೆಸರ್‌ಗಳನ್ನು ತಯಾರಿಸಲಾಗುತ್ತದೆ. ಈ ಘಟಕವು 2022-23ರಲ್ಲಿ ಸ್ಯಾಮ್‌ಸಂಗ್‌ನ 12 ಬಿಲಿಯನ್ ಡಾಲರ್ ಭಾರತದ ಮಾರಾಟದಲ್ಲಿ ಐದನೇ ಒಂದು ಭಾಗವನ್ನು ಹೊಂದಿದೆ.

ಫೆಬ್ರವರಿ 21ರಂದು ನಡೆಯಲಿರುವ ಪ್ರತಿಭಟನೆ ಎಲ್ಲರ ಗಮನ ಸೆಳೆದಿದ್ದು, ಇದು ಜಿಲ್ಲೆಯಾದ್ಯಂತ ಕೈಗಾರಿಕಾ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...