Homeಚಳವಳಿತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

ತಮಿಳುನಾಡು | ಮುಂದುವರಿದ ಸ್ಯಾಮ್‌ಸಂಗ್ ಕಂಪನಿ-ಕಾರ್ಮಿಕರ ಬಿಕ್ಕಟ್ಟು : ನಾಳೆ ಬೃಹತ್ ಪ್ರತಿಭಟನೆಗೆ ಕರೆ

- Advertisement -
- Advertisement -

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೊಂದಿಗೆ ಸಂಯೋಜಿತವಾಗಿರುವ ತಮಿಳುನಾಡಿನ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ಮತ್ತು ಸ್ಯಾಮ್‌ಸಂಗ್ ಇಂಡಿಯಾ ಆಡಳಿತ ಮಂಡಳಿಯ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಎಸ್‌ಐಡಬ್ಲ್ಯುಯು ತನ್ನ ಪ್ರತಿಭಟನೆಯನ್ನು ಕಂಪನಿಯ ಆವರಣದಿಂದ ಹೊರಗಡೆಗೆ ವಿಸ್ತರಿಸಲು ನಿರ್ಧರಿಸಿದೆ.

ಫೆಬ್ರವರಿ 21 ಶುಕ್ರವಾರ ಕಾಂಚೀಪುರಂ ಜಿಲ್ಲೆಯ ನಾಲ್ಕು ರಾಜ್ಯ ಕೈಗಾರಿಕಾ ಉತ್ತೇಜನ ನಿಗಮದ (SIPCOT)ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲು ಸಿಐಟಿಯು ಸಿದ್ದತೆ ಮಾಡಿಕೊಂಡಿದೆ.

ಅಲ್ಲದೆ, ಶುಕ್ರವಾರ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರ್ ಕಾರ್ಖಾನೆಯ ಗೇಟ್‌ಗಳನ್ನು ಮುಚ್ಚುವುದಾಗಿ ಸಿಐಟಿಯು ಘೋಷಿಸಿದೆ. ಗುತ್ತಿಗೆ ಕಾರ್ಮಿಕರನ್ನು ‘ಅಕ್ರಮ ಕಾರ್ಮಿಕರು’ ಎಂದು ಕರೆದಿರುವ ಸಿಐಟಿಯು, ಅವರು ಕಾರ್ಖಾನೆ ಆವರಣಕ್ಕೆ ಪ್ರವೇಶಿಸುವುದನ್ನು ತಡೆಯುತ್ತೇವೆ ಎಂದಿದೆ.

ಮಾರ್ಚ್ 7ರಂದು ಕಾಂಚೀಪುರಂ ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಒಂದು ದಿನದ ಮುಷ್ಕರ ನಡೆಸುವುದಾಗಿ ಸಿಐಟಿಯು ಘೋಷಣೆ ಮಾಡಿದೆ.

ಸಿಐಟಿಯು ಕಾಂಚೀಪುರಂ ಜಿಲ್ಲಾ ಕಾರ್ಯದರ್ಶಿ ಮತ್ತು ಎಸ್‌ಐಡಬ್ಲ್ಯುಯು ಅಧ್ಯಕ್ಷ ಇ. ಮುತ್ತುಕುಮಾರ್ ಮಾತನಾಡಿ, “ಸ್ಯಾಮ್‌ಸಂಗ್ ಕಂಪನಿ ಮೂವರು ಎಸ್‌ಐಡಬ್ಲ್ಯುಯು ಪದಾಧಿಕಾರಿಗಳ ಅಮಾನತು ರದ್ದುಗೊಳಿಸಿದರೆ ಮುಷ್ಕರ ಕೊನೆಗೊಳಿಸಲು ನಮ್ಮ ಒಕ್ಕೂಟ ಸಿದ್ಧವಿದೆ ಎಂದು ಹೇಳಿದ್ದಾರೆ. ಕಂಪನಿ ನಮ್ಮ ಬೇಡಿಕೆಯನ್ನು ಪರಿಹರಿಸುವ ಬದಲು, ಒಕ್ಕೂಟಕ್ಕೆ ಸಂಬಂಧಿಸಿದ ಇನ್ನೂ 18 ಕಾರ್ಮಿಕರನ್ನು ಅಮಾನತುಗೊಳಿಸಲು ಯೋಜಿಸುತ್ತಿದೆ ಎಂದು ಮುತ್ತುಕುಮಾರ್ ಆರೋಪಿಸಿದ್ದಾರೆ.

ಫೆಬ್ರವರಿ 19ರಂದು ತಮಿಳುನಾಡು ಕಾರ್ಮಿಕ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಎಸ್‌ಐಡಬ್ಲ್ಯುಯು ಮತ್ತು ಸ್ಯಾಮ್‌ಸಂಗ್ ಆಡಳಿತ ಮಂಡಳಿಯ ನಡುವೆ ನಡೆದ ಮತ್ತೊಂದು ಸುತ್ತಿನ ರಾಜಿ ಮಾತುಕತೆ ವಿಫಲವಾಗಿದೆ.

ಫೆಬ್ರವರಿ 5ರಂದು ಪ್ರತಿಭಟನೆ ಪ್ರಾರಂಭಿಸಿರುವ 500 ಕ್ಕೂ ಹೆಚ್ಚು ಸ್ಯಾಮ್‌ಸಂಗ್ ಕಾರ್ಮಿಕರು, ಮೂವರು ಎಸ್‌ಐಡಬ್ಲ್ಯುಯು ಸದಸ್ಯರ ಅಮಾನತನ್ನು ಖಂಡಿಸಿದ್ದಾರೆ. 38 ದಿನಗಳ ಮುಷ್ಕರ ಮತ್ತು 212 ದಿನಗಳ ಕಾನೂನು ಹೋರಾಟದ ನಂತರ ತಮಿಳುನಾಡು ರಾಜ್ಯ ಕಾರ್ಮಿಕ ಕಲ್ಯಾಣ ಇಲಾಖೆಯು ಎಸ್‌ಐಡಬ್ಲ್ಯುಯು ಅನ್ನು ಜನವರಿ 27ರಂದು ಅಧಿಕೃತವಾಗಿ ನೋಂದಾಯಿಸಿಕೊಂಡಿದೆ.

ಕಾರ್ಮಿಕರ ಪ್ರತಿಭಟನೆ ಮುಂದುರಿದಿರುವ ನಡುವೆ ಹೇಳಿಕೆ ನೀಡಿರುವ ಸ್ಯಾಮ್‌ಸಂಗ್ ಇಂಡಿಯಾ ವಕ್ತಾರರು “ನಮ್ಮ ಕಾರ್ಮಿಕರೊಂದಿಗೆ ನೇರವಾಗಿ ಮಾತನಾಡುವ ಮೂಲಕ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧವಾಗಿದ್ದೇವೆ. ಕೈಗಾರಿಕಾ ಶಾಂತಿ ಮತ್ತು ಕೆಲಸದ ಸ್ಥಳದ ಸುರಕ್ಷತೆಗೆ ಧಕ್ಕೆ ತರುವ ಕೆಲವು ಕಾರ್ಮಿಕರ ಕಾನೂನುಬಾಹಿರ ಚಟುವಟಿಕೆಗಳನ್ನು ನಾವು ಕ್ಷಮಿಸುವುದಿಲ್ಲ. ಎಲ್ಲಾ ಉದ್ಯೋಗಿಗಳು ಕಂಪನಿಯ ನೀತಿಗಳಿಗೆ ಬದ್ಧರಾಗಿರಬೇಕು ಮತ್ತು ಈ ನೀತಿಗಳನ್ನು ಉಲ್ಲಂಘಿಸುವವರು ಸರಿಯಾದ ಕಾನೂನುಬದ್ಧ ಪ್ರಕ್ರಿಯೆಯ ನಂತರ ಶಿಸ್ತು ಕ್ರಮಕ್ಕೆ ಒಳಪಡುತ್ತಾರೆ. ಎಲ್ಲಾ ಕಾರ್ಮಿಕರಿಗೆ ಸುರಕ್ಷಿತ ಮತ್ತು ಸ್ಥಿರವಾದ ಕೆಲಸದ ಸ್ಥಳವನ್ನು ಒದಗಿಸಿಕೊಡುವುದು ನಮ್ಮ ಆದ್ಯತೆಯಾಗಿದೆ” ಎಂದಿದ್ದಾರೆ.

ಕಾಂಚೀಪುರಂ ಜಿಲ್ಲೆಯ ಸ್ಯಾಮ್‌ಸಂಗ್‌ನ ಶ್ರೀಪೆರಂಬುದೂರು ಘಟಕ ಸುಮಾರು 1,800 ಕಾರ್ಮಿಕರನ್ನು ನೇಮಿಸಿಕೊಂಡಿದೆ. ಇಲ್ಲಿ ಟೆಲಿವಿಷನ್‌, ವಾಷಿಂಗ್ ಮೆಷಿನ್‌, ರೆಫ್ರಿಜರೇಟರ್‌, ಹವಾನಿಯಂತ್ರಣಗಳು ಮತ್ತು ಕಂಪ್ರೆಸರ್‌ಗಳನ್ನು ತಯಾರಿಸಲಾಗುತ್ತದೆ. ಈ ಘಟಕವು 2022-23ರಲ್ಲಿ ಸ್ಯಾಮ್‌ಸಂಗ್‌ನ 12 ಬಿಲಿಯನ್ ಡಾಲರ್ ಭಾರತದ ಮಾರಾಟದಲ್ಲಿ ಐದನೇ ಒಂದು ಭಾಗವನ್ನು ಹೊಂದಿದೆ.

ಫೆಬ್ರವರಿ 21ರಂದು ನಡೆಯಲಿರುವ ಪ್ರತಿಭಟನೆ ಎಲ್ಲರ ಗಮನ ಸೆಳೆದಿದ್ದು, ಇದು ಜಿಲ್ಲೆಯಾದ್ಯಂತ ಕೈಗಾರಿಕಾ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...