Homeರಾಷ್ಟ್ರೀಯತಮಿಳುನಾಡು: ಶಾಲಾ ಬಾಲಕಿಯ ಸಾವು ಸರಣಿ ಮುಂದುವರಿಕೆ; 2 ವಾರಗಳಲ್ಲಿ 4ನೇ ಪ್ರಕರಣ

ತಮಿಳುನಾಡು: ಶಾಲಾ ಬಾಲಕಿಯ ಸಾವು ಸರಣಿ ಮುಂದುವರಿಕೆ; 2 ವಾರಗಳಲ್ಲಿ 4ನೇ ಪ್ರಕರಣ

- Advertisement -
- Advertisement -

ಕಳೆದೆರಡು ವಾರಗಳಿಂದ ತಮಿಳುನಾಡಿನಲ್ಲಿ ನಡೆಯುತ್ತಿರುವ ಶಾಲಾ ಬಾಲಕಿಯರ ಸಾವಿನ ಸರಣಿಗೆ ಮತ್ತೊಂದು ಸಾವು ಸೇರ್ಪಡೆಯಾಗಿದೆ. 11ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಮಂಗಳವಾರ ಶಿವಕಾಶಿಯ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ ಎನ್‌ಡಿಟಿವಿ ವರದಿ ಮಾಡಿದೆ. ಆದರೆ “ತನಿಖೆ ಪೂರ್ಣಗೊಳ್ಳುವವರೆಗೂ ನಾವು ಏನನ್ನೂ ಹೇಳುವುದಿಲ್ಲ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಅದು ಉಲ್ಲೇಖಿಸಿದೆ. ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಪತ್ರ ಇನ್ನೂ ಪತ್ತೆಯಾಗಿಲ್ಲ. ಬಾಲಕಿಯು ಆಗಾಗ್ಗೆ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ 12 ನೇ ತರಗತಿಯ ಮೂವರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಸಾವಿಗೀಡಾಗಿರುವ ಬಾಲಕಿ 11 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ. ರಾಜ್ಯದ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಶವವಾಗಿ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಶಿವಕಾಶಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ಕಡಲೂರು ವಿದ್ಯಾರ್ಥಿನಿಯು ನಾಲ್ಕು ಪುಟಗಳ ಆತ್ಮಹತ್ಯೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ತನ್ನ ಹೆತ್ತವರು ತನ್ನ ಮೇಲೆ ಇಟ್ಟಿರುವ ಐಎಎಸ್ ಆಕಾಂಕ್ಷೆಗಳನ್ನು ಪೂರೈಸಲು ಅಸಮರ್ಥಳಾಗಿರುವುದರಿಂದ ಕೃತ್ಯ ಎಸಗುತ್ತಿರುವುದಾಗಿ ಬರೆದಿದ್ದಾರೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಕಾರ್ತಿಕ್ ಹೇಳಿದ್ದಾರೆ.

ಮರುಕಳಿಸುತ್ತಿರುವ ವಿದ್ಯಾರ್ಥಿನಿಯರ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ವಿದ್ಯಾರ್ಥಿನಿಯರು ಆತ್ಮಹತ್ಯೆಯ ಆಲೋಚನೆಗಳನ್ನು ದೂರವಿಡುವಂತೆ ಮನವಿ ಮಾಡಿದ್ದಾರೆ. “ಹೆಣ್ಣು ಮಕ್ಕಳನ್ನು ಯಾವತ್ತೂ ಆತ್ಮಹತ್ಯಾ ಯೋಚನೆಗೆ ತಳ್ಳಬಾರದು. ವಿದ್ಯಾರ್ಥಿನಿಯರಿಗೆ ಲೈಂಗಿಕ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ನಂಬಿಕೆಗಳಲ್ಲಿ ಹಸ್ತಕ್ಷೇಪವಿಲ್ಲ, ಆದರೆ ತಮಿಳರನ್ನು ವಿಭಜಿಸಲು ಧರ್ಮ ಬಳಸಿದರೆ ವಿರೋಧಿಸುತ್ತೇವೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್

ಸೋಮವಾರ, ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯ 12 ನೇ ತರಗತಿಯ ವಿದ್ಯಾರ್ಥಿನಿ ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ.

ಇತ್ತೀಚೆಗೆ ನಡೆದ ನಾಲ್ಕು ಸಾವುಗಳಲ್ಲಿ ಮೊದಲನೆಯದು ಜುಲೈ 13 ರಂದು ಕಲ್ಲಕುರಿಚಿ ಜಿಲ್ಲೆಯಲ್ಲಿ ವರದಿಯಾಗಿದೆ. ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯು ಖಾಸಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಘಟನೆಯಿಂದಾಗಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಗಾಯಗೊಂಡರು.

ಕಲ್ಲಾಕುರಿಚಿ ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ಇಬ್ಬರು ಶಿಕ್ಷಕರು ವಿದ್ಯಾರ್ಥಿನಿಯನ್ನು, ‘ಶೈಕ್ಷಣಿಕವಾಗಿ ಹಿಂದುಳಿದಿದ್ದಕ್ಕಾಗಿ ಅವಮಾನಿಸಿದ್ದರು’ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡು: ತಂದೆಯಿಂದಲೆ ನವವಿವಾಹಿತ ಮಗಳು, ಅಳಿಯನ ಕೊಲೆ

ಆದಾಗ್ಯೂ, ಬಾಲಕಿಯ ಪೋಷಕರು, ಅಪರಾಧದ ಸ್ಥಳದಲ್ಲಿ ದೈಹಿಕ ಹೊಡೆದಾಟ ನಡೆದಿರುವ ಲಕ್ಷಣಗಳಿವೆ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ನಂತರ ಮದ್ರಾಸ್ ಹೈಕೋರ್ಟ್ ಪುನರಾವರ್ತಿತ ಶವಪರೀಕ್ಷೆಗೆ ಆದೇಶ ನೀಡಿತು. ಶಿಕ್ಷಣ ಸಂಸ್ಥೆಗಳಲ್ಲಿನ ಸಾವುಗಳ ಬಗ್ಗೆ ಸಿಬಿಐ-ಸಿಐಡಿ ತನಿಖೆ ನಡೆಸುವಂತೆಯೂ ಹೈಕೋರ್ಟ್ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...