Homeಮುಖಪುಟತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

ತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

- Advertisement -
- Advertisement -

ತಮಿಳುನಾಡಿನ ಶಿವಗಂಗೆ ಜಿಲ್ಲೆಯಲ್ಲಿ ನಡೆದ ದೇವಾಲಯದ ಭದ್ರತಾ ಸಿಬ್ಬಂದಿಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಜೂನ್‌.30) ತಡರಾತ್ರಿ ಐವರು ಪೊಲೀಸರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ ಬೆನ್ನಲ್ಲೇ ಪೊಲೀಸರ ಬಂಧನವಾಗಿದೆ.

ಬಿ. ಅಜಿತ್ ಕುಮಾರ್ (27) ಸಾವಿಗೀಡಾದ ಯುವಕ. ಜೂನ್ 27ರಂದು ತಿರುಪುವನಂ ಮಾದಾಪುರಂ ಭದ್ರಕಾಳಿಯಮ್ಮನ್ ದೇವಸ್ಥಾನದಲ್ಲಿ ತಮ್ಮ ಕಾರಿನಿಂದ 10 ಗ್ರಾಂ. ಚಿನ್ನ ಕಾಣೆಯಾಗಿದೆ ಎಂದು ತಾಯಿ-ಮಗಳು ದೂರು ನೀಡಿದ್ದರು. ಪ್ರಕರಣದ ತನಿಖೆಗೆ ರಚಿಸಿದ್ದ ವಿಶೇಷ ತಂಡದ 6 ಮಂದಿ ಪೊಲೀಸರು, ಪ್ರಕರಣದಲ್ಲಿ ಭದ್ರತಾ ಸಿಬ್ಬಂದಿ ಅಜಿತ್ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಲು ಕರೆದೊಯ್ದು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತಾಯಿ-ಮಗಳು ತಮ್ಮ ಕಾರು ನಿಲ್ಲಿಸಲು ಭದ್ರತಾ ಸಿಬ್ಬಂದಿ ಅಜಿತ್ ಅವರ ಸಹಾಯ ಕೋರಿದ್ದರು. ಆ ಬಳಿಕ ಅವರ ಕಾರಿನಲ್ಲಿದ್ದ ಚಿನ್ನ ಕಾಣೆಯಾಗಿದೆ ಎಂದು ಹೇಳಲಾಗ್ತಿದೆ. ಚಿನ್ನ ಕಳವಾಗಿರಬಹುದು ಎಂದು ಅಜಿತ್ ಮೇಲೆ ಸಂಶಯ ವ್ಯಕ್ತಪಡಿಸಿ ತಾಯಿ, ಮಗಳು ದೂರು ಕೊಟ್ಟಿದ್ದರು. ಪೊಲೀಸರು ಅಂದೇ ಅಜಿತ್, ಅವರ ಸಹೋದರ ನವೀನ್ ಮತ್ತು ಇತರ ಮೂವರನ್ನು ಬಂಧಿಸಿದ್ದರು. ಆದರೆ, ಜೂನ್ 27 ರಂದು ಸಂಜೆಯ ವೇಳೆಗೆ ಎಲ್ಲರನ್ನು ಬಿಡುಗಡೆ ಮಾಡಿದ್ದರು.

ನಂತರ, ಮತ್ತೊಮ್ಮೆ ಅಜಿತ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಬೇರೆ ಬೇರೆ ಕಡೆಗಳಿಗೆ ಕರೆದೊಯ್ದು ಥಳಿಸಿ ಅಜಿತ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಅಜಿತ್ ದೇಹದಲ್ಲಿ ಬಾಹ್ಯವಾಗಿ 15ಕ್ಕೂ ಹೆಚ್ಚು ಗಾಯದ ಗುರುತುಗಳು ಮತ್ತು ಆಂತರಿಕವಾಗಿ ಗಂಭೀರವಾದ ಗಾಯಗಳು ಪತ್ತೆಯಾಗಿವೆ ಎಂದು ಕೆಲ ಮಾಧ್ಯಮ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು 30-40 ಗಾಯದ ಗುರುತುಗಳ ಬಗ್ಗೆ ವರದಿ ಮಾಡಿವೆ.

ವಿಶೇಷ ಪೊಲೀಸ್ ತಂಡ ಬಂಧಿಸಿ ಕರೆದೊಯ್ದು ನನ್ನ ಮುಂದೆಯೇ ನನ್ನ ಸಹೋದರನಿಗೆ ಕ್ರೂರವಾಗಿ ಥಳಿಸಿದ್ದಾರೆ. ಬಳಿಕ ಜೂನ್ 29ರಂದು ಖಾಸಗಿ ಆಸ್ಪತ್ರೆಯಲ್ಲಿ ಆತ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ ಎಂದು ಅಜಿತ್ ಅವರ ಸಹೋದರ ನವೀನ್ ಕುಮಾರ್ ಹೇಳಿದ್ದಾರೆ.

ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಬಗ್ಗೆ ಸಬ್-ಮ್ಯಾಜಿಸ್ಟ್ರೇಟ್ ವೆಂಕಟೇಶ್ ಪ್ರಸಾದ್ ಅವರು ವಿಚಾರಣೆ ನಡೆಸುತ್ತಿದ್ದು, ನವೀನ್ ಕುಮಾರ್ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿ ಪೊಲೀಸರ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ.

ಶಿವಗಂಗೆ ಜಿಲ್ಲಾ ಪೊಲೀಸ್ ಇಲಾಖೆ ಪ್ರಭು, ಶಂಕರ ಮಣಿಕಂದನ್, ರಾಜ, ಆನಂದ್, ಕಣ್ಣನ್ ಮತ್ತು ರಾಮಚಂದ್ರನ್ ಎಂಬ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಆದರೆ, ಇದು ಕಣ್ಣೊರೆಸುವ ತಂತ್ರ ಎಂದು ನವೀನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮಗೆ ಯಾವುದೇ ಹಣದ ಅಗತ್ಯವಿಲ್ಲ. ನನ್ನ ಸಹೋದರನಿಗೆ ನ್ಯಾಯ ಬೇಕು. ಅವನು ಯಾವುದೇ ತಪ್ಪು ಮಾಡಿಲ್ಲ, ಆದರೆ ಇಬ್ಬರು ಮಹಿಳೆಯರ ಮೌಖಿಕ ದೂರಿನ ಆಧಾರದ ಮೇಲೆ ಪೊಲೀಸರು ಅವನನ್ನು ಕೊಂದರು” ಎಂದು ನವೀನ್ ಕುಮಾರ್ ಸೋಮವಾರ ಕಣ್ಣೀರು ಹಾಕಿದ್ದಾರೆ.

ಅಜಿತ್ ಅವರ ಲಾಕಪ್‌ ಡೆತ್ ತಮಿಳುನಾಡಿನಲ್ಲಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳು ಮಾತ್ರವಲ್ಲದೆ, ಸ್ವಪಕ್ಷ ಡಿಎಂಕೆ ನಾಯಕರು ಕೂಡ ಘಟನೆಯನ್ನು ಖಂಡಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಡಿಎಂಕೆ ಪ್ರತಿಪಕ್ಷದಲ್ಲಿ ಇದ್ದಾಗ ಜನರ ಬಗ್ಗೆ ಅತಿ ಕಾಳಜಿ ಹೊಂದಿದ್ದ ಸಿಎಂ ಎಂ.ಕೆ ಸ್ಟಾಲಿನ್, ಈಗ ಏಕೆ ಮೌನವಾಗಿದ್ದಾರೆ? ಎಂದು ಪ್ರತಿಪಕ್ಷಗಳಾದ ಎಐಎಡಿಎಂಕೆ ಮತ್ತು ಬಿಜೆಪಿ ಪ್ರಶ್ನಿಸಿದೆ.

2020ರ ಜೂನ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ಸಾತಂಕುಲಂನ ತಂದೆ-ಮಗ ಪಿ ಜಯರಾಜ್ ಮತ್ತು ಎಮ್ಯಾನುಯೆಲ್ ಬೆನ್ನಿಕ್ಸ್ ಅವರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಡಿಎಂಕೆ ತೋರಿದ ಉತ್ಸಾಹದ ಬಗ್ಗೆ ಪ್ರತಿಪಕ್ಷಗಳು ಉಲ್ಲೇಖಿಸಿವೆ.

ಬಿಜೆಪಿಯ ಪ್ರಕಾರ, ಡಿಎಂಕೆ ಸರ್ಕಾರ ಅಧಿಕಾರ ವಹಿಸಿಕೊಂಡ ಮೇ 2021 ರಿಂದ ಅಜಿತ್ ಕುಮಾರ್ ಅವರದ್ದು ಸಾವು ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸಿದ 24ನೇ ಪ್ರಕರಣವಾಗಿದೆ.

ಮೃತನ ಸಹೋದರ ಪೊಲೀಸ್ ಚಿತ್ರಹಿಂಸೆಗೆ ಪ್ರತ್ಯಕ್ಷದರ್ಶಿ ಎಂದು ಆರೋಪಿಸಿರುವುದರಿಂದ, ಮದ್ರಾಸ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ವಿವರವಾದ ತನಿಖೆ ನಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಒತ್ತಾಯಿಸಿದ್ದಾರೆ.

ಯುಪಿ: ಬಿಎಸ್‌ಎಫ್ ಯೋಧನ ಪತ್ನಿ ಮೇಲೆ ಮೈದುನರಿಂದಲೇ ಸರಣಿ ಅತ್ಯಾಚಾರ, ವಿಡಿಯೋ ಬ್ಲಾಕ್‌ಮೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...