Homeಮುಖಪುಟತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

ತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

- Advertisement -
- Advertisement -

ತಮಿಳುನಾಡಿನ ಶಿವಗಂಗೆ ಜಿಲ್ಲೆಯಲ್ಲಿ ನಡೆದ ದೇವಾಲಯದ ಭದ್ರತಾ ಸಿಬ್ಬಂದಿಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಜೂನ್‌.30) ತಡರಾತ್ರಿ ಐವರು ಪೊಲೀಸರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ ಬೆನ್ನಲ್ಲೇ ಪೊಲೀಸರ ಬಂಧನವಾಗಿದೆ.

ಬಿ. ಅಜಿತ್ ಕುಮಾರ್ (27) ಸಾವಿಗೀಡಾದ ಯುವಕ. ಜೂನ್ 27ರಂದು ತಿರುಪುವನಂ ಮಾದಾಪುರಂ ಭದ್ರಕಾಳಿಯಮ್ಮನ್ ದೇವಸ್ಥಾನದಲ್ಲಿ ತಮ್ಮ ಕಾರಿನಿಂದ 10 ಗ್ರಾಂ. ಚಿನ್ನ ಕಾಣೆಯಾಗಿದೆ ಎಂದು ತಾಯಿ-ಮಗಳು ದೂರು ನೀಡಿದ್ದರು. ಪ್ರಕರಣದ ತನಿಖೆಗೆ ರಚಿಸಿದ್ದ ವಿಶೇಷ ತಂಡದ 6 ಮಂದಿ ಪೊಲೀಸರು, ಪ್ರಕರಣದಲ್ಲಿ ಭದ್ರತಾ ಸಿಬ್ಬಂದಿ ಅಜಿತ್ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಲು ಕರೆದೊಯ್ದು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತಾಯಿ-ಮಗಳು ತಮ್ಮ ಕಾರು ನಿಲ್ಲಿಸಲು ಭದ್ರತಾ ಸಿಬ್ಬಂದಿ ಅಜಿತ್ ಅವರ ಸಹಾಯ ಕೋರಿದ್ದರು. ಆ ಬಳಿಕ ಅವರ ಕಾರಿನಲ್ಲಿದ್ದ ಚಿನ್ನ ಕಾಣೆಯಾಗಿದೆ ಎಂದು ಹೇಳಲಾಗ್ತಿದೆ. ಚಿನ್ನ ಕಳವಾಗಿರಬಹುದು ಎಂದು ಅಜಿತ್ ಮೇಲೆ ಸಂಶಯ ವ್ಯಕ್ತಪಡಿಸಿ ತಾಯಿ, ಮಗಳು ದೂರು ಕೊಟ್ಟಿದ್ದರು. ಪೊಲೀಸರು ಅಂದೇ ಅಜಿತ್, ಅವರ ಸಹೋದರ ನವೀನ್ ಮತ್ತು ಇತರ ಮೂವರನ್ನು ಬಂಧಿಸಿದ್ದರು. ಆದರೆ, ಜೂನ್ 27 ರಂದು ಸಂಜೆಯ ವೇಳೆಗೆ ಎಲ್ಲರನ್ನು ಬಿಡುಗಡೆ ಮಾಡಿದ್ದರು.

ನಂತರ, ಮತ್ತೊಮ್ಮೆ ಅಜಿತ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಬೇರೆ ಬೇರೆ ಕಡೆಗಳಿಗೆ ಕರೆದೊಯ್ದು ಥಳಿಸಿ ಅಜಿತ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಅಜಿತ್ ದೇಹದಲ್ಲಿ ಬಾಹ್ಯವಾಗಿ 15ಕ್ಕೂ ಹೆಚ್ಚು ಗಾಯದ ಗುರುತುಗಳು ಮತ್ತು ಆಂತರಿಕವಾಗಿ ಗಂಭೀರವಾದ ಗಾಯಗಳು ಪತ್ತೆಯಾಗಿವೆ ಎಂದು ಕೆಲ ಮಾಧ್ಯಮ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು 30-40 ಗಾಯದ ಗುರುತುಗಳ ಬಗ್ಗೆ ವರದಿ ಮಾಡಿವೆ.

ವಿಶೇಷ ಪೊಲೀಸ್ ತಂಡ ಬಂಧಿಸಿ ಕರೆದೊಯ್ದು ನನ್ನ ಮುಂದೆಯೇ ನನ್ನ ಸಹೋದರನಿಗೆ ಕ್ರೂರವಾಗಿ ಥಳಿಸಿದ್ದಾರೆ. ಬಳಿಕ ಜೂನ್ 29ರಂದು ಖಾಸಗಿ ಆಸ್ಪತ್ರೆಯಲ್ಲಿ ಆತ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ ಎಂದು ಅಜಿತ್ ಅವರ ಸಹೋದರ ನವೀನ್ ಕುಮಾರ್ ಹೇಳಿದ್ದಾರೆ.

ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಬಗ್ಗೆ ಸಬ್-ಮ್ಯಾಜಿಸ್ಟ್ರೇಟ್ ವೆಂಕಟೇಶ್ ಪ್ರಸಾದ್ ಅವರು ವಿಚಾರಣೆ ನಡೆಸುತ್ತಿದ್ದು, ನವೀನ್ ಕುಮಾರ್ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿ ಪೊಲೀಸರ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ.

ಶಿವಗಂಗೆ ಜಿಲ್ಲಾ ಪೊಲೀಸ್ ಇಲಾಖೆ ಪ್ರಭು, ಶಂಕರ ಮಣಿಕಂದನ್, ರಾಜ, ಆನಂದ್, ಕಣ್ಣನ್ ಮತ್ತು ರಾಮಚಂದ್ರನ್ ಎಂಬ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಆದರೆ, ಇದು ಕಣ್ಣೊರೆಸುವ ತಂತ್ರ ಎಂದು ನವೀನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮಗೆ ಯಾವುದೇ ಹಣದ ಅಗತ್ಯವಿಲ್ಲ. ನನ್ನ ಸಹೋದರನಿಗೆ ನ್ಯಾಯ ಬೇಕು. ಅವನು ಯಾವುದೇ ತಪ್ಪು ಮಾಡಿಲ್ಲ, ಆದರೆ ಇಬ್ಬರು ಮಹಿಳೆಯರ ಮೌಖಿಕ ದೂರಿನ ಆಧಾರದ ಮೇಲೆ ಪೊಲೀಸರು ಅವನನ್ನು ಕೊಂದರು” ಎಂದು ನವೀನ್ ಕುಮಾರ್ ಸೋಮವಾರ ಕಣ್ಣೀರು ಹಾಕಿದ್ದಾರೆ.

ಅಜಿತ್ ಅವರ ಲಾಕಪ್‌ ಡೆತ್ ತಮಿಳುನಾಡಿನಲ್ಲಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳು ಮಾತ್ರವಲ್ಲದೆ, ಸ್ವಪಕ್ಷ ಡಿಎಂಕೆ ನಾಯಕರು ಕೂಡ ಘಟನೆಯನ್ನು ಖಂಡಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಡಿಎಂಕೆ ಪ್ರತಿಪಕ್ಷದಲ್ಲಿ ಇದ್ದಾಗ ಜನರ ಬಗ್ಗೆ ಅತಿ ಕಾಳಜಿ ಹೊಂದಿದ್ದ ಸಿಎಂ ಎಂ.ಕೆ ಸ್ಟಾಲಿನ್, ಈಗ ಏಕೆ ಮೌನವಾಗಿದ್ದಾರೆ? ಎಂದು ಪ್ರತಿಪಕ್ಷಗಳಾದ ಎಐಎಡಿಎಂಕೆ ಮತ್ತು ಬಿಜೆಪಿ ಪ್ರಶ್ನಿಸಿದೆ.

2020ರ ಜೂನ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ಸಾತಂಕುಲಂನ ತಂದೆ-ಮಗ ಪಿ ಜಯರಾಜ್ ಮತ್ತು ಎಮ್ಯಾನುಯೆಲ್ ಬೆನ್ನಿಕ್ಸ್ ಅವರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಡಿಎಂಕೆ ತೋರಿದ ಉತ್ಸಾಹದ ಬಗ್ಗೆ ಪ್ರತಿಪಕ್ಷಗಳು ಉಲ್ಲೇಖಿಸಿವೆ.

ಬಿಜೆಪಿಯ ಪ್ರಕಾರ, ಡಿಎಂಕೆ ಸರ್ಕಾರ ಅಧಿಕಾರ ವಹಿಸಿಕೊಂಡ ಮೇ 2021 ರಿಂದ ಅಜಿತ್ ಕುಮಾರ್ ಅವರದ್ದು ಸಾವು ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸಿದ 24ನೇ ಪ್ರಕರಣವಾಗಿದೆ.

ಮೃತನ ಸಹೋದರ ಪೊಲೀಸ್ ಚಿತ್ರಹಿಂಸೆಗೆ ಪ್ರತ್ಯಕ್ಷದರ್ಶಿ ಎಂದು ಆರೋಪಿಸಿರುವುದರಿಂದ, ಮದ್ರಾಸ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ವಿವರವಾದ ತನಿಖೆ ನಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಒತ್ತಾಯಿಸಿದ್ದಾರೆ.

ಯುಪಿ: ಬಿಎಸ್‌ಎಫ್ ಯೋಧನ ಪತ್ನಿ ಮೇಲೆ ಮೈದುನರಿಂದಲೇ ಸರಣಿ ಅತ್ಯಾಚಾರ, ವಿಡಿಯೋ ಬ್ಲಾಕ್‌ಮೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...