Homeಮುಖಪುಟತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

ತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

- Advertisement -
- Advertisement -

ತಮಿಳುನಾಡಿನ ಶಿವಗಂಗೆ ಜಿಲ್ಲೆಯಲ್ಲಿ ನಡೆದ ದೇವಾಲಯದ ಭದ್ರತಾ ಸಿಬ್ಬಂದಿಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಜೂನ್‌.30) ತಡರಾತ್ರಿ ಐವರು ಪೊಲೀಸರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ ಬೆನ್ನಲ್ಲೇ ಪೊಲೀಸರ ಬಂಧನವಾಗಿದೆ.

ಬಿ. ಅಜಿತ್ ಕುಮಾರ್ (27) ಸಾವಿಗೀಡಾದ ಯುವಕ. ಜೂನ್ 27ರಂದು ತಿರುಪುವನಂ ಮಾದಾಪುರಂ ಭದ್ರಕಾಳಿಯಮ್ಮನ್ ದೇವಸ್ಥಾನದಲ್ಲಿ ತಮ್ಮ ಕಾರಿನಿಂದ 10 ಗ್ರಾಂ. ಚಿನ್ನ ಕಾಣೆಯಾಗಿದೆ ಎಂದು ತಾಯಿ-ಮಗಳು ದೂರು ನೀಡಿದ್ದರು. ಪ್ರಕರಣದ ತನಿಖೆಗೆ ರಚಿಸಿದ್ದ ವಿಶೇಷ ತಂಡದ 6 ಮಂದಿ ಪೊಲೀಸರು, ಪ್ರಕರಣದಲ್ಲಿ ಭದ್ರತಾ ಸಿಬ್ಬಂದಿ ಅಜಿತ್ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಲು ಕರೆದೊಯ್ದು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತಾಯಿ-ಮಗಳು ತಮ್ಮ ಕಾರು ನಿಲ್ಲಿಸಲು ಭದ್ರತಾ ಸಿಬ್ಬಂದಿ ಅಜಿತ್ ಅವರ ಸಹಾಯ ಕೋರಿದ್ದರು. ಆ ಬಳಿಕ ಅವರ ಕಾರಿನಲ್ಲಿದ್ದ ಚಿನ್ನ ಕಾಣೆಯಾಗಿದೆ ಎಂದು ಹೇಳಲಾಗ್ತಿದೆ. ಚಿನ್ನ ಕಳವಾಗಿರಬಹುದು ಎಂದು ಅಜಿತ್ ಮೇಲೆ ಸಂಶಯ ವ್ಯಕ್ತಪಡಿಸಿ ತಾಯಿ, ಮಗಳು ದೂರು ಕೊಟ್ಟಿದ್ದರು. ಪೊಲೀಸರು ಅಂದೇ ಅಜಿತ್, ಅವರ ಸಹೋದರ ನವೀನ್ ಮತ್ತು ಇತರ ಮೂವರನ್ನು ಬಂಧಿಸಿದ್ದರು. ಆದರೆ, ಜೂನ್ 27 ರಂದು ಸಂಜೆಯ ವೇಳೆಗೆ ಎಲ್ಲರನ್ನು ಬಿಡುಗಡೆ ಮಾಡಿದ್ದರು.

ನಂತರ, ಮತ್ತೊಮ್ಮೆ ಅಜಿತ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಬೇರೆ ಬೇರೆ ಕಡೆಗಳಿಗೆ ಕರೆದೊಯ್ದು ಥಳಿಸಿ ಅಜಿತ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಅಜಿತ್ ದೇಹದಲ್ಲಿ ಬಾಹ್ಯವಾಗಿ 15ಕ್ಕೂ ಹೆಚ್ಚು ಗಾಯದ ಗುರುತುಗಳು ಮತ್ತು ಆಂತರಿಕವಾಗಿ ಗಂಭೀರವಾದ ಗಾಯಗಳು ಪತ್ತೆಯಾಗಿವೆ ಎಂದು ಕೆಲ ಮಾಧ್ಯಮ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು 30-40 ಗಾಯದ ಗುರುತುಗಳ ಬಗ್ಗೆ ವರದಿ ಮಾಡಿವೆ.

ವಿಶೇಷ ಪೊಲೀಸ್ ತಂಡ ಬಂಧಿಸಿ ಕರೆದೊಯ್ದು ನನ್ನ ಮುಂದೆಯೇ ನನ್ನ ಸಹೋದರನಿಗೆ ಕ್ರೂರವಾಗಿ ಥಳಿಸಿದ್ದಾರೆ. ಬಳಿಕ ಜೂನ್ 29ರಂದು ಖಾಸಗಿ ಆಸ್ಪತ್ರೆಯಲ್ಲಿ ಆತ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ ಎಂದು ಅಜಿತ್ ಅವರ ಸಹೋದರ ನವೀನ್ ಕುಮಾರ್ ಹೇಳಿದ್ದಾರೆ.

ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಬಗ್ಗೆ ಸಬ್-ಮ್ಯಾಜಿಸ್ಟ್ರೇಟ್ ವೆಂಕಟೇಶ್ ಪ್ರಸಾದ್ ಅವರು ವಿಚಾರಣೆ ನಡೆಸುತ್ತಿದ್ದು, ನವೀನ್ ಕುಮಾರ್ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿ ಪೊಲೀಸರ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ.

ಶಿವಗಂಗೆ ಜಿಲ್ಲಾ ಪೊಲೀಸ್ ಇಲಾಖೆ ಪ್ರಭು, ಶಂಕರ ಮಣಿಕಂದನ್, ರಾಜ, ಆನಂದ್, ಕಣ್ಣನ್ ಮತ್ತು ರಾಮಚಂದ್ರನ್ ಎಂಬ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಆದರೆ, ಇದು ಕಣ್ಣೊರೆಸುವ ತಂತ್ರ ಎಂದು ನವೀನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮಗೆ ಯಾವುದೇ ಹಣದ ಅಗತ್ಯವಿಲ್ಲ. ನನ್ನ ಸಹೋದರನಿಗೆ ನ್ಯಾಯ ಬೇಕು. ಅವನು ಯಾವುದೇ ತಪ್ಪು ಮಾಡಿಲ್ಲ, ಆದರೆ ಇಬ್ಬರು ಮಹಿಳೆಯರ ಮೌಖಿಕ ದೂರಿನ ಆಧಾರದ ಮೇಲೆ ಪೊಲೀಸರು ಅವನನ್ನು ಕೊಂದರು” ಎಂದು ನವೀನ್ ಕುಮಾರ್ ಸೋಮವಾರ ಕಣ್ಣೀರು ಹಾಕಿದ್ದಾರೆ.

ಅಜಿತ್ ಅವರ ಲಾಕಪ್‌ ಡೆತ್ ತಮಿಳುನಾಡಿನಲ್ಲಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳು ಮಾತ್ರವಲ್ಲದೆ, ಸ್ವಪಕ್ಷ ಡಿಎಂಕೆ ನಾಯಕರು ಕೂಡ ಘಟನೆಯನ್ನು ಖಂಡಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಡಿಎಂಕೆ ಪ್ರತಿಪಕ್ಷದಲ್ಲಿ ಇದ್ದಾಗ ಜನರ ಬಗ್ಗೆ ಅತಿ ಕಾಳಜಿ ಹೊಂದಿದ್ದ ಸಿಎಂ ಎಂ.ಕೆ ಸ್ಟಾಲಿನ್, ಈಗ ಏಕೆ ಮೌನವಾಗಿದ್ದಾರೆ? ಎಂದು ಪ್ರತಿಪಕ್ಷಗಳಾದ ಎಐಎಡಿಎಂಕೆ ಮತ್ತು ಬಿಜೆಪಿ ಪ್ರಶ್ನಿಸಿದೆ.

2020ರ ಜೂನ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ಸಾತಂಕುಲಂನ ತಂದೆ-ಮಗ ಪಿ ಜಯರಾಜ್ ಮತ್ತು ಎಮ್ಯಾನುಯೆಲ್ ಬೆನ್ನಿಕ್ಸ್ ಅವರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಡಿಎಂಕೆ ತೋರಿದ ಉತ್ಸಾಹದ ಬಗ್ಗೆ ಪ್ರತಿಪಕ್ಷಗಳು ಉಲ್ಲೇಖಿಸಿವೆ.

ಬಿಜೆಪಿಯ ಪ್ರಕಾರ, ಡಿಎಂಕೆ ಸರ್ಕಾರ ಅಧಿಕಾರ ವಹಿಸಿಕೊಂಡ ಮೇ 2021 ರಿಂದ ಅಜಿತ್ ಕುಮಾರ್ ಅವರದ್ದು ಸಾವು ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸಿದ 24ನೇ ಪ್ರಕರಣವಾಗಿದೆ.

ಮೃತನ ಸಹೋದರ ಪೊಲೀಸ್ ಚಿತ್ರಹಿಂಸೆಗೆ ಪ್ರತ್ಯಕ್ಷದರ್ಶಿ ಎಂದು ಆರೋಪಿಸಿರುವುದರಿಂದ, ಮದ್ರಾಸ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ವಿವರವಾದ ತನಿಖೆ ನಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಒತ್ತಾಯಿಸಿದ್ದಾರೆ.

ಯುಪಿ: ಬಿಎಸ್‌ಎಫ್ ಯೋಧನ ಪತ್ನಿ ಮೇಲೆ ಮೈದುನರಿಂದಲೇ ಸರಣಿ ಅತ್ಯಾಚಾರ, ವಿಡಿಯೋ ಬ್ಲಾಕ್‌ಮೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...