Homeಮುಖಪುಟತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

ತಮಿಳುನಾಡು| ಸೆಕ್ಯೂರಿಟಿ ಗಾರ್ಡ್‌ ಲಾಕಪ್ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

- Advertisement -
- Advertisement -

ತಮಿಳುನಾಡಿನ ಶಿವಗಂಗೆ ಜಿಲ್ಲೆಯಲ್ಲಿ ನಡೆದ ದೇವಾಲಯದ ಭದ್ರತಾ ಸಿಬ್ಬಂದಿಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಜೂನ್‌.30) ತಡರಾತ್ರಿ ಐವರು ಪೊಲೀಸರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ ಬೆನ್ನಲ್ಲೇ ಪೊಲೀಸರ ಬಂಧನವಾಗಿದೆ.

ಬಿ. ಅಜಿತ್ ಕುಮಾರ್ (27) ಸಾವಿಗೀಡಾದ ಯುವಕ. ಜೂನ್ 27ರಂದು ತಿರುಪುವನಂ ಮಾದಾಪುರಂ ಭದ್ರಕಾಳಿಯಮ್ಮನ್ ದೇವಸ್ಥಾನದಲ್ಲಿ ತಮ್ಮ ಕಾರಿನಿಂದ 10 ಗ್ರಾಂ. ಚಿನ್ನ ಕಾಣೆಯಾಗಿದೆ ಎಂದು ತಾಯಿ-ಮಗಳು ದೂರು ನೀಡಿದ್ದರು. ಪ್ರಕರಣದ ತನಿಖೆಗೆ ರಚಿಸಿದ್ದ ವಿಶೇಷ ತಂಡದ 6 ಮಂದಿ ಪೊಲೀಸರು, ಪ್ರಕರಣದಲ್ಲಿ ಭದ್ರತಾ ಸಿಬ್ಬಂದಿ ಅಜಿತ್ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸಲು ಕರೆದೊಯ್ದು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತಾಯಿ-ಮಗಳು ತಮ್ಮ ಕಾರು ನಿಲ್ಲಿಸಲು ಭದ್ರತಾ ಸಿಬ್ಬಂದಿ ಅಜಿತ್ ಅವರ ಸಹಾಯ ಕೋರಿದ್ದರು. ಆ ಬಳಿಕ ಅವರ ಕಾರಿನಲ್ಲಿದ್ದ ಚಿನ್ನ ಕಾಣೆಯಾಗಿದೆ ಎಂದು ಹೇಳಲಾಗ್ತಿದೆ. ಚಿನ್ನ ಕಳವಾಗಿರಬಹುದು ಎಂದು ಅಜಿತ್ ಮೇಲೆ ಸಂಶಯ ವ್ಯಕ್ತಪಡಿಸಿ ತಾಯಿ, ಮಗಳು ದೂರು ಕೊಟ್ಟಿದ್ದರು. ಪೊಲೀಸರು ಅಂದೇ ಅಜಿತ್, ಅವರ ಸಹೋದರ ನವೀನ್ ಮತ್ತು ಇತರ ಮೂವರನ್ನು ಬಂಧಿಸಿದ್ದರು. ಆದರೆ, ಜೂನ್ 27 ರಂದು ಸಂಜೆಯ ವೇಳೆಗೆ ಎಲ್ಲರನ್ನು ಬಿಡುಗಡೆ ಮಾಡಿದ್ದರು.

ನಂತರ, ಮತ್ತೊಮ್ಮೆ ಅಜಿತ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಬೇರೆ ಬೇರೆ ಕಡೆಗಳಿಗೆ ಕರೆದೊಯ್ದು ಥಳಿಸಿ ಅಜಿತ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಅಜಿತ್ ದೇಹದಲ್ಲಿ ಬಾಹ್ಯವಾಗಿ 15ಕ್ಕೂ ಹೆಚ್ಚು ಗಾಯದ ಗುರುತುಗಳು ಮತ್ತು ಆಂತರಿಕವಾಗಿ ಗಂಭೀರವಾದ ಗಾಯಗಳು ಪತ್ತೆಯಾಗಿವೆ ಎಂದು ಕೆಲ ಮಾಧ್ಯಮ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು 30-40 ಗಾಯದ ಗುರುತುಗಳ ಬಗ್ಗೆ ವರದಿ ಮಾಡಿವೆ.

ವಿಶೇಷ ಪೊಲೀಸ್ ತಂಡ ಬಂಧಿಸಿ ಕರೆದೊಯ್ದು ನನ್ನ ಮುಂದೆಯೇ ನನ್ನ ಸಹೋದರನಿಗೆ ಕ್ರೂರವಾಗಿ ಥಳಿಸಿದ್ದಾರೆ. ಬಳಿಕ ಜೂನ್ 29ರಂದು ಖಾಸಗಿ ಆಸ್ಪತ್ರೆಯಲ್ಲಿ ಆತ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ ಎಂದು ಅಜಿತ್ ಅವರ ಸಹೋದರ ನವೀನ್ ಕುಮಾರ್ ಹೇಳಿದ್ದಾರೆ.

ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಬಗ್ಗೆ ಸಬ್-ಮ್ಯಾಜಿಸ್ಟ್ರೇಟ್ ವೆಂಕಟೇಶ್ ಪ್ರಸಾದ್ ಅವರು ವಿಚಾರಣೆ ನಡೆಸುತ್ತಿದ್ದು, ನವೀನ್ ಕುಮಾರ್ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿ ಪೊಲೀಸರ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ.

ಶಿವಗಂಗೆ ಜಿಲ್ಲಾ ಪೊಲೀಸ್ ಇಲಾಖೆ ಪ್ರಭು, ಶಂಕರ ಮಣಿಕಂದನ್, ರಾಜ, ಆನಂದ್, ಕಣ್ಣನ್ ಮತ್ತು ರಾಮಚಂದ್ರನ್ ಎಂಬ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಆದರೆ, ಇದು ಕಣ್ಣೊರೆಸುವ ತಂತ್ರ ಎಂದು ನವೀನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮಗೆ ಯಾವುದೇ ಹಣದ ಅಗತ್ಯವಿಲ್ಲ. ನನ್ನ ಸಹೋದರನಿಗೆ ನ್ಯಾಯ ಬೇಕು. ಅವನು ಯಾವುದೇ ತಪ್ಪು ಮಾಡಿಲ್ಲ, ಆದರೆ ಇಬ್ಬರು ಮಹಿಳೆಯರ ಮೌಖಿಕ ದೂರಿನ ಆಧಾರದ ಮೇಲೆ ಪೊಲೀಸರು ಅವನನ್ನು ಕೊಂದರು” ಎಂದು ನವೀನ್ ಕುಮಾರ್ ಸೋಮವಾರ ಕಣ್ಣೀರು ಹಾಕಿದ್ದಾರೆ.

ಅಜಿತ್ ಅವರ ಲಾಕಪ್‌ ಡೆತ್ ತಮಿಳುನಾಡಿನಲ್ಲಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷಗಳು ಮಾತ್ರವಲ್ಲದೆ, ಸ್ವಪಕ್ಷ ಡಿಎಂಕೆ ನಾಯಕರು ಕೂಡ ಘಟನೆಯನ್ನು ಖಂಡಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಡಿಎಂಕೆ ಪ್ರತಿಪಕ್ಷದಲ್ಲಿ ಇದ್ದಾಗ ಜನರ ಬಗ್ಗೆ ಅತಿ ಕಾಳಜಿ ಹೊಂದಿದ್ದ ಸಿಎಂ ಎಂ.ಕೆ ಸ್ಟಾಲಿನ್, ಈಗ ಏಕೆ ಮೌನವಾಗಿದ್ದಾರೆ? ಎಂದು ಪ್ರತಿಪಕ್ಷಗಳಾದ ಎಐಎಡಿಎಂಕೆ ಮತ್ತು ಬಿಜೆಪಿ ಪ್ರಶ್ನಿಸಿದೆ.

2020ರ ಜೂನ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ಸಾತಂಕುಲಂನ ತಂದೆ-ಮಗ ಪಿ ಜಯರಾಜ್ ಮತ್ತು ಎಮ್ಯಾನುಯೆಲ್ ಬೆನ್ನಿಕ್ಸ್ ಅವರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಡಿಎಂಕೆ ತೋರಿದ ಉತ್ಸಾಹದ ಬಗ್ಗೆ ಪ್ರತಿಪಕ್ಷಗಳು ಉಲ್ಲೇಖಿಸಿವೆ.

ಬಿಜೆಪಿಯ ಪ್ರಕಾರ, ಡಿಎಂಕೆ ಸರ್ಕಾರ ಅಧಿಕಾರ ವಹಿಸಿಕೊಂಡ ಮೇ 2021 ರಿಂದ ಅಜಿತ್ ಕುಮಾರ್ ಅವರದ್ದು ಸಾವು ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸಿದ 24ನೇ ಪ್ರಕರಣವಾಗಿದೆ.

ಮೃತನ ಸಹೋದರ ಪೊಲೀಸ್ ಚಿತ್ರಹಿಂಸೆಗೆ ಪ್ರತ್ಯಕ್ಷದರ್ಶಿ ಎಂದು ಆರೋಪಿಸಿರುವುದರಿಂದ, ಮದ್ರಾಸ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ವಿವರವಾದ ತನಿಖೆ ನಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಒತ್ತಾಯಿಸಿದ್ದಾರೆ.

ಯುಪಿ: ಬಿಎಸ್‌ಎಫ್ ಯೋಧನ ಪತ್ನಿ ಮೇಲೆ ಮೈದುನರಿಂದಲೇ ಸರಣಿ ಅತ್ಯಾಚಾರ, ವಿಡಿಯೋ ಬ್ಲಾಕ್‌ಮೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...