Homeಮುಖಪುಟಚೆನ್ನೈ: ಪತ್ನಿಯ ಸಹಾಯದಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ

ಚೆನ್ನೈ: ಪತ್ನಿಯ ಸಹಾಯದಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ

- Advertisement -
- Advertisement -

ಚೆನ್ನೈನಲ್ಲಿ ಯುವತಿಯೊಬ್ಬರ ಮೇಲೆ ಆಕೆಯ ಅಪ್ರಾಪ್ತ ವಯಸ್ಸಿನಿಂದಲೂ ಅತ್ಯಾಚಾರವೆಸಗಿ, ಗರ್ಭಪಾತ ಮಾಡಿಸುವಂತೆ ಒತ್ತಡ ಹೇರಿದ್ದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿಯನ್ನು ತಮಿಳುನಾಡು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಆರೋಪಿಗಳು ಬಾಲಕಿಯ ಬೆತ್ತಲೆ ಚಿತ್ರಗಳನ್ನು ತೆಗೆದುಕೊಂಡು, ಗರ್ಭಪಾತ ಮಾಡಿಸಿಕೊಳ್ಳದಿದ್ದರೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿ ಪುಷ್ಪಲತಾ ಚೆನ್ನೈನಲ್ಲಿ ‘ಶಿರಡಿಪುರಂ ಸರ್ವ ಶಕ್ತಿ ಪೀಠದ ಸಾಯಿಬಾಬಾ ಕೊಯಿಲ್’ ಎಂಬ ದೇವಸ್ಥಾನವನ್ನು ನಡೆಸುತ್ತಿದ್ದಾರೆ. ಯುವತಿ 16 ವರ್ಷದವರಿದ್ದಾಗಿನಿಂದ ಆಕೆಯ ಮೇಲೆ ಅತ್ಯಾಚಾರ ಎಸಗಲು ಆರೋಪಿ ಪುಷ್ಪಲತಾ ಸತ್ಯ ನಾರಾಯಣನ್‌ಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“12 ನೇ ತರಗತಿಯಲ್ಲಿದ್ದಾಗ ನಾನು ನನ್ನ ಅಜ್ಜಿಯ ಮನೆಯಲ್ಲಿಯೇ ಇದ್ದೆ. ನಾವು ಆಗಾಗ್ಗೆ ದೇವಸ್ಥಾನಕ್ಕೆ ಹೋಗುತ್ತಿದ್ದೆವು. 2016 ರ ಏಪ್ರಿಲ್ 12 ರಂದು ನಾನು ದೇವಸ್ಥಾನಕ್ಕೆ ಹೋದಾಗ ಪುಷ್ಪಲತಾ ನನಗೆ ಜ್ಯೂಸ್ ಕೊಟ್ಟರು. ಎರಡು ಗಂಟೆಗಳ ನಂತರ ನನಗೆ ಪ್ರಜ್ಞೆ ಬಂದಾಗ, ನಾನು ಬಟ್ಟೆ ಇಲ್ಲದೆ ಹಾಸಿಗೆಯ ಮೇಲೆ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿ ಪುಷ್ಪಲತಾ ಪಕ್ಕದಲ್ಲಿ ಮಲಗಿದ್ದೆ” ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ನಾಳೆ ಪ್ರತಿಭಟನೆ

ಮುಂದುವರೆದು, ತನ್ನ ಮೇಲೆ ಪಾಪದ ಹೊರೆ ಇದೆ ಎಂದು ಸ್ವಯಂ ಘೋಷಿತ ದೇವಮಾನವ ಸಥಿಯಾ ನಾರಾಯಣನ್ ಹೇಳಿದ್ದು, ಆಕೆಯನ್ನು ಅದರಿಂದ ಮುಕ್ತಗೊಳಿಸಿರುವುದಾಗಿ ತಿಳಿಸಿದರು. ಬಳಿಕ ಆಕೆಯ ಆಕ್ಷೇಪಾರ್ಹ ಫೋಟೋಗಳನ್ನು ತೋರಿಸಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

2018 ರಲ್ಲಿ ಸಂತ್ರಸ್ತೆ ಮದುವೆಯಾಗಿತ್ತು. ಆಕೆಯ ಪತಿ ಕೆಲಸಕ್ಕಾಗಿ ವಿದೇಶಕ್ಕೆ ತೆರಳಿದ ನಂತರ, ಆರೋಪಿ ನಾರಾಯಣನ್ ಮಾರ್ಚ್ 2020 ರಲ್ಲಿ ಮತ್ತೆ ಸಂತ್ರಸ್ತೆಗೆ ಕರೆ ಮಾಡಿ, ಭೇಟಿ ಮಾಡುವಂತೆ ಹೇಳಿದರು. ಇಲ್ಲದಿದ್ದರೆ ಆಕೆಯ ಪತಿಗೆ ನನ್ನ ಬೆತ್ತಲೆ ಚಿತ್ರಗಳನ್ನು ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಹಲವು ತಿಂಗಳುಗಳು ಅವರು ಆಕೆಯ ಮೇಲೆ ಹಲವಾರು ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಜುಲೈ 2020 ತಾನು ಗರ್ಭಿಣಿ ಎಂದು ತಿಳಿದ ಸಂತ್ರಸ್ತೆಗೆ ತಿಳಿದಿದೆ. ಆದರೆ ಆರೋಪಿ ದಂಪತಿ ಗರ್ಭಪಾತ ಮಾಡಿಸುವಂತೆ ಬೆದರಿಕೆ ಹಾಕಿದರು. ಆದರೆ, ಅದಕ್ಕೆ ಯುವತಿ ಒಪ್ಪದೆ ಈ ವರ್ಷದ ಜನವರಿಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಳು. ಇಷ್ಟಾದರೂ ಬೀಡದ ಆರೋಪಿಗಳು ಸಂತ್ರಸ್ತೆಯನ್ನು ಮತ್ತೊಮ್ಮೆ ಭೇಟಿಯಾಗುವಂತೆ ಒತ್ತಾಯಿಸಿದ್ದರು. ಈ ವೇಳೆ ಸಂತ್ರಸ್ತೆ ಪತಿಗೆ ಮಾಹಿತಿ ನೀಡಿದ್ದು, ನಗರದ ಎಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ದೂರಿನ ಆಧಾರದಲ್ಲಿ ಸಥಿಯಾ ನಾರಾಯಣನ್ ಮತ್ತು ಆತನ ಪತ್ನಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಬ್ಬರ ವಿರುದ್ಧ IPC 328, IPS 376 (ಅತ್ಯಾಚಾರ), IPC 506 (ii) (ಕ್ರಿಮಿನಲ್ ಬೆದರಿಕೆ), POCSO ಕಾಯಿದೆ, ಸೆಕ್ಷನ್ 5 (f) ,ಸೇರಿದಂತೆ ಒಂಬತ್ತು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 13 ಮಂದಿಗೆ 20 ವರ್ಷ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...