Homeಮುಖಪುಟಕರೂರಿನ ನಟ ವಿಜಯ್ ರ‍್ಯಾಲಿ ಕಾಲ್ತುಳಿತ; ಸಾವನ್ನಪ್ಪಿದವರ ಸಂಖ್ಯೆ 41 ಕ್ಕೆ ಏರಿಕೆ

ಕರೂರಿನ ನಟ ವಿಜಯ್ ರ‍್ಯಾಲಿ ಕಾಲ್ತುಳಿತ; ಸಾವನ್ನಪ್ಪಿದವರ ಸಂಖ್ಯೆ 41 ಕ್ಕೆ ಏರಿಕೆ

- Advertisement -
- Advertisement -

ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ಶನಿವಾರ ಸಂಜೆ ನಟ-ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 18 ಮಹಿಳೆಯರು ಮತ್ತು ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 41 ಜನರು ಸಾವನ್ನಪ್ಪಿದ್ದಾರೆ.

ಮೃತರೆಲ್ಲರ ಗುರುತುಗಳನ್ನು ಪತ್ತೆಹಚ್ಚಲಾಗಿದ್ದು, ಅವರ ಶವಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದರು.

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ತಮ್ಮ ಪ್ರಚಾರ ವಾಹನದ ಮೇಲಿನಿಂದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಲುಚಾಮಿ ಪುರಂ ಪ್ರದೇಶದಲ್ಲಿ ಸಂಜೆ 7:30 ರ ನಂತರ ಈ ಘಟನೆ ನಡೆಯಿತು.

ಸ್ಥಳದಲ್ಲಿ ಜನದಟ್ಟಣೆಯಿಂದಾಗಿ ಹಲವಾರು ಜನರು ಮೂರ್ಛೆ ಹೋದರು. ವಿಜಯ್ ಅವರ ಭಾಷಣದ ಸಮಯದಲ್ಲಿ ಕುಸಿದು ಬಿದ್ದ ವ್ಯಕ್ತಿಗಳನ್ನು ಆಸ್ಪತ್ರೆಗಳಿಗೆ ಸಾಗಿಸಲು ಆಂಬ್ಯುಲೆನ್ಸ್‌ಗಳು ಜನಸಂದಣಿಯ ಮೂಲಕ ಸಾಗಬೇಕಾಯಿತು.

ರ‍್ಯಾಲಿಯಲ್ಲಿ ನಟ ವಿಜಯ್ ಅವರನ್ನು ಹತ್ತಿದಿಂದ ಕಾಣಲು ಉತ್ಸುಕರಾಗಿದ್ದ ಕೆಲವು ಬೆಂಬಲಿಗರು ಮರವನ್ನು ಹತ್ತಿದಾಗ ಗೊಂದಲ ತೀವ್ರಗೊಂಡಿತು. ಅದರ ಒಂದು ಕೊಂಬೆ ಮುರಿದು ಕೆಳಗೆ ಇದ್ದ ಜನಸಮೂಹದ ಮೇಲೆ ಉರುಳಿ ಬಿತ್ತು. ಜನಭಯಭೀತರಾದ ಬಳಿಕ ಅದು ಮಾರಣಾಂತಿಕ ನೂಕು ನುಗ್ಗಲಿಗೆ ಕಾರಣವಾಯಿತು.

ಇದರ ಪರಿಣಾಮವಾಗಿ, 111 ಗಾಯಾಳುಗಳನ್ನು ಚಿಕಿತ್ಸೆಗಾಗಿ ಕರೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ರಾತ್ರಿಯಿಡೀ ಮತ್ತು ಭಾನುವಾರ ಬೆಳಗಿನವರೆಗೆ, ಉನ್ನತ ಅಧಿಕಾರಿಗಳು, ನಾಯಕರು ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗಳಿಗೆ ಬರಲು ಪ್ರಾರಂಭಿಸಿದರು.

ನ್ಯಾಯಾಂಗ ತನಿಖೆ ನಡೆಸುವ ಜವಾಬ್ದಾರಿಯನ್ನು ಹೊಂದಿರುವ ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್, ಕಾಲ್ತುಳಿತದ ಸ್ಥಳವನ್ನು ಬೆಳಿಗ್ಗೆ ಪರಿಶೀಲಿಸಿದರು. ನಂತರ, ಕರೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿದರು.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಬೆಳಗಿನ ಜಾವ 3:15 ರ ಸುಮಾರಿಗೆ ಆಸ್ಪತ್ರೆಗೆ ತಲುಪಿ ಗಾಯಾಳುಗಳನ್ನು ಭೇಟಿ ಮಾಡಿ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದರು. ನಂತರ, ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಕೂಡ ಭೇಟಿ ನೀಡಿ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ಸಂವಾದ ನಡೆಸಿದರು.

ಈ ಮಧ್ಯೆ, ತಮಿಳಗ ವೆಟ್ರಿ ಕಳಗಂ ಮದ್ರಾಸ್ ಹೈಕೋರ್ಟ್ ಅನ್ನು ಸಂಪರ್ಕಿಸಿ, ಘಟನೆಯ ಬಗ್ಗೆ ಸ್ವಯಂಪ್ರೇರಿತವಾಗಿ ದೂರು ನೀಡಬೇಕೆಂದು ಒತ್ತಾಯಿಸಿತು.

ಈ ಗಲಭೆಯ ಹಿಂದೆ ‘ಕೆಲವು ಪಿತೂರಿಗಳು’ ಇರಬಹುದು ಎಂದು ಪಕ್ಷವು ತನ್ನ ಅರ್ಜಿಯಲ್ಲಿ ಆರೋಪಿಸಿದ್ದು, ಸ್ವಯಂಪ್ರೇರಿತ ತನಿಖೆ ಅಥವಾ ಸ್ವತಂತ್ರ ಸಂಸ್ಥೆಯ ತನಿಖೆಗೆ ಒತ್ತಾಯಿಸಿದೆ.

ಕರೂರು ಕಾಲ್ತುಳಿತದ ಬಗ್ಗೆ ಸ್ವತಂತ್ರ ತನಿಖೆ ಕೋರಿ ಹೈಕೋರ್ಟ್‌ ಮೊರೆ ಹೋದ ಟಿವಿಕೆ: ಮೃತರ ಸಂಖ್ಯೆ 40ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...