Homeದಲಿತ್ ಫೈಲ್ಸ್ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

- Advertisement -
- Advertisement -

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ ತಿಳಿಯುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಮೃತ ಶಿವಮತಿ 19 ವರ್ಷ ವಯಸ್ಸಿನವಳಾಗಿದ್ದು, ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಓದುತ್ತಿದ್ದಳು. ಆಕೆ ಪ್ರಬಲಜಾತಿ ಕುಟುಂಬಕ್ಕೆ ಸೇರಿದ್ದು, ಮೊಬೈಲ್ ಫೋನ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ದಲಿತ ವ್ಯಕ್ತಿ ಅನಂತಕೃಷ್ಣನ್ ಅ ವರನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ತಿರುನಲ್ವೇಲಿಯ ಪೆಟ್ಟೈಪುಲಿ ಪ್ರದೇಶದಲ್ಲಿ ಶಿವಮತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ಶಿವಮತಿಯ ಕುಟುಂಬವು ಆಕೆಯ ಅಂತರ್ಜಾತಿ ಸಂಬಂಧವನ್ನು ಬಲವಾಗಿ ವಿರೋಧಿಸಿತು. ನಾವು ಮದುವೆಯಾಗಲು ಯೋಚಿಸಿದ್ದೆವು ಎಂದು ಅನಂತಕೃಷ್ಣನ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ದಂಪತಿಗಳು ಫೆಬ್ರವರಿ 6 ರಂದು ಮದುವೆಯಾಗಲು ನಿರ್ಧರಿಸಿ, ಈಗಾಗಲೇ ಮದುವೆ ಪ್ರಮಾಣಪತ್ರವನ್ನು ಪಡೆಯುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದರು. ಯುವಕನ ಪ್ರಕಾರ, ಕುಟುಂಬದ ವಿರೋಧವು ಸಂಪೂರ್ಣವಾಗಿ ಜಾತಿಯನ್ನು ಆಧರಿಸಿದೆ.

ಶಿವಮತಿಗೆ ಆಕೆಯ ಚಿಕ್ಕಪ್ಪ ಬೆದರಿಕೆ ಹಾಕಿದ್ದರು, ಮದುವೆ ಪ್ರಕ್ರಿಯೆ ಮುಂದುವರಿಸಿದರೆ ಕೊಲ್ಲುವುದಾಗಿ ಎಚ್ಚರಿಸಿದ್ದರು ಎಂದು ಅವರು ಆರೋಪಿಸಿದ್ದಾರೆ. ಸಂಪರ್ಕ ಕಡಿತಗೊಳಿಸಲು ಆಕೆಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದಾರೆ, ಶಿವಮತಿ ಮನೆಯಲ್ಲಿ ಹಲ್ಲೆ ನಡೆಸಿ ಪದೇ ಪದೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಅನಂತಕೃಷ್ಣನ್ ಅವರ ಕುಟುಂಬದವರು ಹೇಳಿದ್ದಾರೆ.

ಈ ಆರೋಪಗಳು ಗಂಭೀರವಾಗಿದ್ದರೂ, ಆರಂಭಿಕ ವಿಚಾರಣೆ ಮತ್ತು ಸ್ಥಳದಿಂದ ಬಂದ ಪುರಾವೆಗಳು ಶಿವಮತಿ ಆತ್ಮಹತ್ಯೆಯಿಂದ ಸಾವನ್ನಪ್ಪಿರಬಹುದು ಎಂದು ಸೂಚಿಸುತ್ತವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಮರಣೋತ್ತರ ವರದಿಯ ನಂತರವೇ ನಾವು ಎಲ್ಲವನ್ನೂ ಖಚಿತಪಡಿಸುತ್ತೇವೆ. ಎಲ್ಲಾ ಕೋನಗಳನ್ನು ತನಿಖೆ ಮಾಡಲಾಗುತ್ತಿದೆ” ಎಂದು ಹೇಳಿದರು. ಶಿವಮತಿಯ ಕುಟುಂಬ ಸದಸ್ಯರು, ಸ್ನೇಹಿತರಿಂದ ಹೇಳಿಕೆಗಳನ್ನು ಪ್ರಸ್ತುತ ದಾಖಲಿಸಲಾಗುತ್ತಿದೆ.

ಪ್ರಕರಣದ ಸೂಕ್ಷ್ಮತೆ ಮತ್ತು ಜಾತಿ ಸಂಬಂಧಿತ ಆರೋಪಗಳನ್ನು ಪರಿಗಣಿಸಿ, ತನಿಖೆಯನ್ನು ಸಹಾಯಕ ಪೊಲೀಸ್ ಆಯುಕ್ತರಿಗೆ ವರ್ಗಾಯಿಸಲಾಗಿದೆ. ಬೆದರಿಕೆ, ಒತ್ತಡ ಅಥವಾ ಕಿರುಕುಳದಿಂದಾಗಿ ಶಿವಮತಿ ಅವರ ಜೀವ ತೆಗೆಯಲು ಪ್ರೇರೇಪಿಸಲಾಗಿದೆ ಎಂಬುದಕ್ಕೆ ಪುರಾವೆಗಳು ಹೊರಬಂದರೆ, ಆಕೆಯ ಕುಟುಂಬ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಗಾಗಿ ಪ್ರಕರಣ ದಾಖಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ತಮಿಳುನಾಡಿನಲ್ಲಿ ಈ ಹಿಂದೆ ನಡೆದ ಜಾತಿ ಸಂಬಂಧಿತ ಹಿಂಸಾಚಾರದ ನೋವಿನ ನೆನಪುಗಳನ್ನು ಈ ಪ್ರಕರಣವು ಮತ್ತೆ ಮುನ್ನಲೆಗೆ ತಂದಿದೆ. ಜುಲೈ 2025 ರಲ್ಲಿ ಅಂತರ್ಜಾತಿ ಸಂಬಂಧ ಹೊಂದಿದ್ದಕ್ಕಾಗಿ ಕೊಂದು ಹಾಕಲಾದ ದಲಿತ ಸಾಫ್ಟ್‌ವೇರ್ ಎಂಜಿನಿಯರ್ ಕವಿನ್ ಸೆಲ್ವಗಣೇಶ್ ಅವರ ಹತ್ಯೆಯೊಂದಿಗೆ ಅನೇಕರು ಹೋಲಿಕೆ ಮಾಡಿದ್ದಾರೆ. ಆ ಪ್ರಕರಣವು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿತ್ತು, ಮರ್ಯಾದಾ ಹತ್ಯೆಗಳನ್ನು ತಡೆಯಲು ಬಲವಾದ ಕಾನೂನು ಜಾರಿಗೆ ತರಬೇಕೆಂಬ ಬೇಡಿಕೆಗಳಿಗೆ ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...