Homeಮುಖಪುಟತಮಿಳುನಾಡು: ಕೋವಿಡ್ ಸೋಂಕು ನಿವಾರಣೆಗೆ ’ಕೊರೊನಾ ದೇವಿ’ ದೇವಾಲಯ ನಿರ್ಮಾಣ

ತಮಿಳುನಾಡು: ಕೋವಿಡ್ ಸೋಂಕು ನಿವಾರಣೆಗೆ ’ಕೊರೊನಾ ದೇವಿ’ ದೇವಾಲಯ ನಿರ್ಮಾಣ

- Advertisement -
- Advertisement -

ದೇಶದ ಜನ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಸಂಕಷ್ಟದಲ್ಲಿರುವಾಗ ತಮಿಳುನಾಡಿನ ಕೊಯಮತ್ತೂರಿನ ಹೊರವಲಯದಲ್ಲಿ ‘ಕೊರೊನಾ ದೇವಿ’ ದೇವಾಲಯ ನಿರ್ಮಾಣವಾಗಿದೆ.

ಈ ಕೊರೊನಾ ದೇವಿ ದೇವಾಲಯವನ್ನು ಕಾಮಚಿಪುರಿ ಅಧೀನಂ ಎಂಬ ಮಠ ನಿರ್ಮಿಸಿದೆ. ದೇವಾಲಯವು ‘ಪ್ಲೇಗ್ ಮರಿಯಮ್ಮನ್ ದೇವಾಲಯ’ದಂತಿದ್ದು, ಸುಮಾರು 150 ವರ್ಷಗಳ ಹಿಂದೆ ಜಿಲ್ಲೆಯನ್ನು ಪ್ಲೇಗ್ ಹೊಡೆತದಿಂದ ರಕ್ಷಣೆ ನೀಡುವಂತೆ ಕೋರಿ ದೇವಿಯ ಭಕ್ತರು ದೇವಾಲಯ ನಿರ್ಮಿಸಿದ್ದರು.

ಇಂತಹದ್ದೇ ದೇವಾಲಯದಲ್ಲಿ ‘ಕೊರೊನಾ ದೇವಿ’ ಎಂಬ ವಿಗ್ರಹವನ್ನು ಸ್ಥಾಪಿಸಲಾಗಿದೆ. ದೇವಾಲಯದಲ್ಲಿ 1.5 ಅಡಿ ಎತ್ತರದ ಕಪ್ಪು ಕಲ್ಲಿನ ವಿಗ್ರಹವನ್ನು ಇಟ್ಟು, 48 ದಿನಗಳ ಕಾಲ ಜನರನ್ನು ಮಾರಣಾಂತಿಕ ಕಾಯಿಲೆಯಿಂದ ರಕ್ಷಿಸಲು ಆಶೀರ್ವಾದ ಕೋರಿ ದೈನಂದಿನ ಪ್ರಾರ್ಥನೆ ನಡೆಸಲಾಗುತ್ತಿದೆ ಎಂದು ಅಧೀನಂ ಮಠದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಒಂದು ಶತಮಾನದ ಹಿಂದೆ ಕೊಯಮತ್ತೂರಿನಲ್ಲಿ ಪ್ಲೇಗ್ ಹರಡಿದಾಗ, ಮರಿಯಮ್ಮನ್ ವಿಗ್ರಹವನ್ನು ಸ್ಥಾಪಿಸಲಾಗಿತ್ತು. ಪ್ಲೇಗ್ ನಿವಾರಣೆಯಾಗಲು ಕೋರಿ ಜನರು ಪ್ರಾರ್ಥನೆ ಸಲ್ಲಿಸಲು ಪ್ರಾರಂಭಿಸಿದ್ದರು. ಈ ಸ್ಥಳವು ದೇವಾಲಯವಾಗಿ ಮಾರ್ಪಟ್ಟಿದ್ದು, ಇದನ್ನು “ಪ್ಲೇಗ್ ಮರಿಯಮ್ಮನ್ ದೇವಾಲಯ” ಎಂದು ಕರೆಯಲಾಯಿತು.

Image

ಈಗ ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ‘ಕೊರೊನಾ ದೇವಿ’ ದೇವಾಲಯದ ಒಳಗೆ ಅರ್ಚಕರು ಮತ್ತು ಮಠದ ಅಧಿಕಾರಿಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ದೇವಾಲಯದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು, ದೈಹಿಕ ಅಂತರವನ್ನು ಕಾಪಾಡಿಕೊಳ್ಳಲಾಗುತ್ತಿದೆ.

ಈ ದೇವಾಲಯವು ಸಾರ್ವಜನಿಕರಿಗೆ ಕಟ್ಟುನಿಟ್ಟಾಗಿ ನಿರ್ಬಂಧಿಸಿದೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ. 48 ದಿನಗಳ ಪ್ರಾರ್ಥನೆಯ ಕೊನೆಯ ದಿನದಂದು ಮಹಾಯಾಗಂ ಅಥವಾ ವಿಶೇಷ ಯಜ್ಞವನ್ನು ಆಯೋಜಿಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...