Homeರಾಷ್ಟ್ರೀಯವಿಶ್ವವಿದ್ಯಾಲಯಗಳ ಉಪಕುಲಪತಿ ನೇಮಕದಲ್ಲಿ ರಾಜ್ಯಪಾಲರ ಅಧಿಕಾರ ಕಡಿತಗೊಳಿಸುವ ಮಸೂದೆ ಅಂಗೀಕರಿಸಿದ ತಮಿಳುನಾಡು

ವಿಶ್ವವಿದ್ಯಾಲಯಗಳ ಉಪಕುಲಪತಿ ನೇಮಕದಲ್ಲಿ ರಾಜ್ಯಪಾಲರ ಅಧಿಕಾರ ಕಡಿತಗೊಳಿಸುವ ಮಸೂದೆ ಅಂಗೀಕರಿಸಿದ ತಮಿಳುನಾಡು

- Advertisement -
- Advertisement -

ವಿಶ್ವವಿದ್ಯಾನಿಲಯಗಳಿಗೆ ಉಪಕುಲಪತಿಗಳನ್ನು ನೇಮಿಸುವ ರಾಜ್ಯಪಾಲರ ಅಧಿಕಾರವನ್ನು ರಾಜ್ಯ ಸರ್ಕಾರ ವಹಿಸಿಕೊಳ್ಳಲು ಅನುವು ಮಾಡಿಕೊಡುವ ಮಸೂದೆಯನ್ನು, ತಮಿಳುನಾಡು ವಿಧಾನಸಭೆ ಸೋಮವಾರ ಅಂಗೀಕರಿಸಿದೆ.

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಊಟಿಯಲ್ಲಿ ರಾಜ್ಯ ಮತ್ತು ಒಕ್ಕೂಟ ಸರ್ಕಾರ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಎರಡು ದಿನಗಳ ಸಮ್ಮೇಳನವನ್ನು ಆಯೋಜಿಸುತ್ತಿರುವ ದಿನದಂದೆ ರಾಜ್ಯ ಸರ್ಕಾರ ವಿಶ್ವವಿದ್ಯಾನಿಲಯಗಳ ಕಾನೂನುಗಳನ್ನು ತಿದ್ದುಪಡಿ ಮಾಡುವ ಮಸೂದೆಯನ್ನು ಪರಿಚಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕಾನೂನನ್ನು ಜಾರಿಗೊಳಿಸುವ ಅಗತ್ಯವನ್ನು ವಾದಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಉಪಕುಲಪತಿಗಳನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲದಿದ್ದರೆ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿ, ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್‌ನೊಂದಿಗೆ ಹೋಲಿಕೆ ಮಾಡಿದ್ದಾರೆ.

ಇದನ್ನೂ ಓದಿ: ವೇದ್ಯಕೀಯ ಸೀಟುಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ಮೀಸಲಾತಿ: ತಮಿಳುನಾಡು ಸರ್ಕಾರದ ಕಾನೂನು ಎತ್ತಿ ಹಿಡಿದ ಹೈಕೋರ್ಟ್

ವಿರೋಧ ಪಕ್ಷಗಳಾದ ಎಐಎಡಿಎಂಕೆ ಮತ್ತು ಬಿಜೆಪಿ ಮಸೂದೆಯನ್ನು ವಿರೋಧಿಸಿವೆ.

ಕಾನೂನಿನ ಕುರಿತು ಮಾತನಾಡಿದ ಮುಖ್ಯಮಂತ್ರಿ ಸ್ಟಾಲಿನ್, “ರಾಜ್ಯಪಾಲರು ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿ ಉಪಕುಲಪತಿಗಳನ್ನು ನೇಮಕ ಮಾಡುತ್ತಾರೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಹೊಸ ಪ್ರವೃತ್ತಿ ಹೊರಹೊಮ್ಮಿದೆ, ರಾಜ್ಯಪಾಲರು ಅದನ್ನು ತಮ್ಮ ವಿಶೇಷತೆ ಎಂಬಂತೆ ವರ್ತಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಾಜ್ಯಪಾಲರ ಈ ನಡೆಯು, ‘ಚುನಾಯಿತ ಸರ್ಕಾರದ ಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತದೆ’ ಮತ್ತು ‘ಇದು ಜನರ ಆಡಳಿತದ ತತ್ವಕ್ಕೆ ವಿರುದ್ಧವಾಗಿದೆ’ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ವ್ಯವಸ್ಥೆಯು ವಿಶ್ವವಿದ್ಯಾನಿಲಯಗಳ ಆಡಳಿತದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಮತ್ತು ರಾಜ್ಯಗಳ ಸಂಬಂಧಗಳ ಕುರಿತು ಮಾಜಿ ಮುಖ್ಯ ನ್ಯಾಯಮೂರ್ತಿ ಮದನ್ ಮೋಹನ್ ಪುಂಚಿ ನೇತೃತ್ವದ ಆಯೋಗದ ವರದಿಯನ್ನು ಸೂಚಿಸಿದ ಸ್ಟಾಲಿನ್‌, “2010 ರ ಈ ವರದಿಯು ರಾಜ್ಯಪಾಲರನ್ನು ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ತೆಗೆದುಹಾಕಲು ಶಿಫಾರಸು ಮಾಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

“ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯವಾದ ಗುಜರಾತ್‌ನಲ್ಲಿಯೂ ಸಹ, ರಾಜ್ಯ ಸರ್ಕಾರ ರಚಿಸಿದ ‘ಶೋಧನಾ ಸಮಿತಿ’ ಶಿಫಾರಸು ಮಾಡಿದ ಮೂರು ಅಭ್ಯರ್ಥಿಗಳಲ್ಲಿ ಒಬ್ಬರನ್ನು ಉಪಕುಲಪತಿಯಾಗಿ ಆಯ್ಕೆ ಮಾಡುತ್ತದೆ” ಎಂದು ಸ್ಟಾಲಿನ್ ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ, ತಮಿಳುನಾಡು ರಾಜ್ಯಪಾಲರು ವಿಶ್ವವಿದ್ಯಾನಿಲಯದ ಉಪಕುಲಪತಿಗಳ ಹುದ್ದೆಗಳಿಗೆ ಶೋಧನಾ ಸಮಿತಿಯ ಶಿಫಾರಸುಗಳನ್ನು ತಿರಸ್ಕರಿಸಿದ ಹಲವಾರು ನಿದರ್ಶನಗಳಿವೆ.

ಉಪಕುಲಪತಿ ನೇಮಕದಲ್ಲಿ ರಾಜ್ಯಕ್ಕೆ ಹೆಚ್ಚಿನ ಸ್ವಾಯತ್ತತೆ ನೀಡುವಂತೆ ಡಿಎಂಕೆ ಸರ್ಕಾರದ ಒತ್ತಾಯಕ್ಕೆ ಅನುಗುಣವಾಗಿರುವ ಮಸೂದೆಯು ಕಾನೂನಾಗಲು ರಾಜ್ಯಪಾಲರು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಬೇಕಾಗಿದೆ.

ಇದನ್ನೂ ಓದಿ: ತಮಿಳುನಾಡು: ತನ್ನ ಕಾರಿಗೆ ತಾನೇ ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಹಾಕಿದ್ದಾರೆಂದು ನಾಟಕವಾಡಿದ್ದ ಬಿಜೆಪಿ ಮುಖಂಡನ ಬಂಧನ

ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್‌ಗೆ ರಾಜ್ಯಕ್ಕೆ ವಿನಾಯಿತಿ ನೀಡುವ ಮಸೂದೆ ಸೇರಿದಂತೆ ವಿಧಾನಸಭೆಯಲ್ಲಿ ಅಂಗೀಕರಿಸಿದ ಕನಿಷ್ಠ 10 ಮಸೂದೆಗಳು ರಾಜಭವನದಲ್ಲಿ ಬಾಕಿ ಉಳಿದಿವೆ.

“ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಳುಹಿಸಲು ವಿಳಂಬ ಮಾಡುತ್ತಿರುವುದನ್ನು ಸದನಕ್ಕೆ ಮಾಡುತ್ತಿರುವ ಅವಮಾನ” ಎಂದು ಹೇಳಿರುವ ಡಿಎಂಕೆ ಸರ್ಕಾರವು, ಇತ್ತೀಚೆಗೆ ರಾಜ್ಯಪಾಲರ ಚಹಾ ಆಹ್ವಾನವನ್ನು ಬಹಿಷ್ಕರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...