Homeಕರೋನಾ ತಲ್ಲಣತಮಿಳುನಾಡು: ಮೇ 24 ರ ನಂತರವು ಒಂದು ವಾರ ಕಠಿಣ ಲಾಕ್‌ಡೌನ್‌

ತಮಿಳುನಾಡು: ಮೇ 24 ರ ನಂತರವು ಒಂದು ವಾರ ಕಠಿಣ ಲಾಕ್‌ಡೌನ್‌

- Advertisement -
- Advertisement -

ಮೇ 24 ರ ನಂತರವು ಒಂದು ವಾರ ರಾಜ್ಯದಲ್ಲಿ ಯಾವುದೇ ರಿಯಾಯಿತಿಗಳಿಲ್ಲದೆ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶನಿವಾರ ಪ್ರಕಟಿಸಿದ್ದಾರೆ.

ಈ ಕಠಿಣ ಲಾಕ್‌ಡೌನ್‌ಗೆ ಸಾರ್ವಜನಿಕರು ತಮ್ಮನ್ನು ಸಿದ್ಧಪಡಿಸಿಕೊಳ್ಳಲು, ಇಂದು (ಶನಿವಾರ) ರಾತ್ರಿ 9 ಗಂಟೆಯವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲಾಗುತ್ತದೆ. ಅಂತೆಯೇ, ಎಲ್ಲಾ ಅಂಗಡಿಗಳು ಭಾನುವಾರ (ಮೇ 23) ಬೆಳಿಗ್ಗೆ 6 ರಿಂದ ರಾತ್ರಿ 9 ರವರೆಗೆ ಕಾರ್ಯನಿರ್ವಹಿಸಬಹುದು. ತಮ್ಮ ಊರುಗಳಿಗೆ ತೆರಳುತ್ತಿರುವವರ ಹಿತದೃಷ್ಟಿಯಿಂದ ಶನಿವಾರ ಮತ್ತು ಭಾನುವಾರ ಖಾಸಗಿ ಮತ್ತು ಸರ್ಕಾರಿ ಬಸ್‌ಗಳನ್ನು ಓಡಿಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕಠಿಣ ಲಾಕ್‌ಡೌನ್ ಸಮಯದಲ್ಲಿ ಔಷಧಾಲಯಗಳು, ಸಿದ್ದೌಷಧ ಅಂಗಡಿಗಳು, ಪಶುವೈದ್ಯಕೀಯ ಔಷಧಾಲಯಗಳು, ಹಾಲು ಸರಬರಾಜು, ಕುಡಿಯುವ ನೀರು ಸರಬರಾಜು ಮತ್ತು ಪತ್ರಿಕೆಗಳ ಸರಬರಾಜನ್ನು ಮಾತ್ರ ಅನುಮತಿಸಲಾಗುತ್ತದೆ.

ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್‌ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ

ಚೆನ್ನೈನ ತೋಟಗಾರಿಕೆ ಇಲಾಖೆಯ ಮೂಲಕ ವಾಹನಗಳಲ್ಲಿ ಎಲ್ಲಾ ಜಿಲ್ಲೆಗಳಿಗೆ ತರಕಾರಿ ಮತ್ತು ಹಣ್ಣುಗಳನ್ನು ಸಾರ್ವಜನಿಕರಿಗೆ ಸರಬರಾಜು ಮಾಡಲಾಗುವುದು.

ಅಗತ್ಯ ಸೇವೆಗಳ ಇಲಾಖೆಗಳು ಮಾತ್ರ ಕಾರ್ಯನಿರ್ವಹಿಸಲಿವೆ:

ಖಾಸಗಿ ಉದ್ಯಮಗಳು, ಬ್ಯಾಂಕುಗಳು, ವಿಮಾ ಕಂಪನಿಗಳು ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಗಳ ನೌಕರರು ಮನೆಯಿಂದಲೇ ಕೆಲಸ ಮಾಡಲು ಕೋರಲಾಗಿದೆ.

ಇ-ಕಾಮರ್ಸ್ ಘಟಕಗಳು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಬಹುದು.

ಬೆಳಿಗ್ಗೆ 6 ರಿಂದ 10 ರ ನಡುವಿನ ಹೋಟೆಲ್‌ಗಳಲ್ಲಿ ಟೇಕ್‌ಅವೇ ಸೇವೆಗಳನ್ನು ಮಾತ್ರ ಅನುಮತಿಸಲಾಗುತ್ತದೆ. ಮಧ್ಯಾಹ್ನ 12 ರಿಂದ 3ರ ವರೆಗೆ; ಸಂಜೆ 6 ರರಿಂದ 9ರ ಸಮಯದಲ್ಲಿ ಸ್ವಿಗ್ಗಿ ಮತ್ತು ಜೊಮಾಟೊದಂತಹ ಸಂಸ್ಥೆಗಳು ಆಹಾರವನ್ನು ತಲುಪಿಸಬಹುದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದ್ದರೆ

ಪೆಟ್ರೋಲ್ ಮತ್ತು ಡೀಸೆಲ್ ಬಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಎಟಿಎಂ ಮತ್ತು ಸಂಬಂಧಿತ ಸೇವೆಗಳು ಲಭ್ಯವಿರುತ್ತವೆ. ಕೃಷಿ ಉತ್ಪನ್ನಗಳು ಮತ್ತು ಇನ್ಪುಟ್ ವಸ್ತುಗಳ ಸಾಗಣೆಗೆ ಅವಕಾಶ ನೀಡಲಾಗುವುದು. ಅಗತ್ಯ ಸರಕುಗಳನ್ನು ಸಾಗಿಸುವ ಸರಕು ವಾಹನಗಳಿಗೆ ಅವಕಾಶ ನೀಡಲಾಗುವುದು.

ಇ-ನೋಂದಣಿ ಮಾಡಿದವರಿಗೆ ಅಂತ್ಯ ಸಂಸ್ಕಾರದ ವಿಧಿಗಳಿಗೆ ಹಾಜರಾಗಲು ಮಾತ್ರ ಅಂತರ ಜಿಲ್ಲೆಯ ಪ್ರಯಾಣವನ್ನು ಅನುಮತಿಸಲಾಗುತ್ತದೆ. ವೈದ್ಯಕೀಯ ಕಾರಣಕ್ಕಾಗಿ ಜಿಲ್ಲೆಯೊಳಗೆ ಪ್ರಯಾಣಿಸಲು ಇ-ನೋಂದಣಿ ಅಗತ್ಯವಿರುವುದಿಲ್ಲ.

ಪತ್ರಿಕೆ ಮತ್ತು ಮಾಧ್ಯಮ ಕಾರ್ಯನಿರ್ವಹಿಸಬಹುದು. ನಿರಂತರ ಪ್ರಕ್ರಿಯೆಯ ಕೈಗಾರಿಕೆಗಳು, ಅಗತ್ಯ ಸರಕುಗಳನ್ನು ತಯಾರಿಸುವ ಕೈಗಾರಿಕೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸಬಹುದು. ಮಾಲ್‌ಗಳಿಗೆ ಯಾವುದೇ ಅನುಮತಿ ಇಲ್ಲ.

ಇದನ್ನೂ ಓದಿ: ‘ಇನ್ನು ಮುಂದೆ ನನ್ನ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಿಲ್ಲ’ – ಜೈಲಿನಿಂದಲೆ ಸ್ಪರ್ಧಿಸಿ ಶಾಸಕನಾದ ಹೋರಾಟಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...