Homeಕರೋನಾ ತಲ್ಲಣತಮಿಳುನಾಡು: ಮೇ 24 ರ ನಂತರವು ಒಂದು ವಾರ ಕಠಿಣ ಲಾಕ್‌ಡೌನ್‌

ತಮಿಳುನಾಡು: ಮೇ 24 ರ ನಂತರವು ಒಂದು ವಾರ ಕಠಿಣ ಲಾಕ್‌ಡೌನ್‌

- Advertisement -
- Advertisement -

ಮೇ 24 ರ ನಂತರವು ಒಂದು ವಾರ ರಾಜ್ಯದಲ್ಲಿ ಯಾವುದೇ ರಿಯಾಯಿತಿಗಳಿಲ್ಲದೆ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶನಿವಾರ ಪ್ರಕಟಿಸಿದ್ದಾರೆ.

ಈ ಕಠಿಣ ಲಾಕ್‌ಡೌನ್‌ಗೆ ಸಾರ್ವಜನಿಕರು ತಮ್ಮನ್ನು ಸಿದ್ಧಪಡಿಸಿಕೊಳ್ಳಲು, ಇಂದು (ಶನಿವಾರ) ರಾತ್ರಿ 9 ಗಂಟೆಯವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲಾಗುತ್ತದೆ. ಅಂತೆಯೇ, ಎಲ್ಲಾ ಅಂಗಡಿಗಳು ಭಾನುವಾರ (ಮೇ 23) ಬೆಳಿಗ್ಗೆ 6 ರಿಂದ ರಾತ್ರಿ 9 ರವರೆಗೆ ಕಾರ್ಯನಿರ್ವಹಿಸಬಹುದು. ತಮ್ಮ ಊರುಗಳಿಗೆ ತೆರಳುತ್ತಿರುವವರ ಹಿತದೃಷ್ಟಿಯಿಂದ ಶನಿವಾರ ಮತ್ತು ಭಾನುವಾರ ಖಾಸಗಿ ಮತ್ತು ಸರ್ಕಾರಿ ಬಸ್‌ಗಳನ್ನು ಓಡಿಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕಠಿಣ ಲಾಕ್‌ಡೌನ್ ಸಮಯದಲ್ಲಿ ಔಷಧಾಲಯಗಳು, ಸಿದ್ದೌಷಧ ಅಂಗಡಿಗಳು, ಪಶುವೈದ್ಯಕೀಯ ಔಷಧಾಲಯಗಳು, ಹಾಲು ಸರಬರಾಜು, ಕುಡಿಯುವ ನೀರು ಸರಬರಾಜು ಮತ್ತು ಪತ್ರಿಕೆಗಳ ಸರಬರಾಜನ್ನು ಮಾತ್ರ ಅನುಮತಿಸಲಾಗುತ್ತದೆ.

ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್‌ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ

ಚೆನ್ನೈನ ತೋಟಗಾರಿಕೆ ಇಲಾಖೆಯ ಮೂಲಕ ವಾಹನಗಳಲ್ಲಿ ಎಲ್ಲಾ ಜಿಲ್ಲೆಗಳಿಗೆ ತರಕಾರಿ ಮತ್ತು ಹಣ್ಣುಗಳನ್ನು ಸಾರ್ವಜನಿಕರಿಗೆ ಸರಬರಾಜು ಮಾಡಲಾಗುವುದು.

ಅಗತ್ಯ ಸೇವೆಗಳ ಇಲಾಖೆಗಳು ಮಾತ್ರ ಕಾರ್ಯನಿರ್ವಹಿಸಲಿವೆ:

ಖಾಸಗಿ ಉದ್ಯಮಗಳು, ಬ್ಯಾಂಕುಗಳು, ವಿಮಾ ಕಂಪನಿಗಳು ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಗಳ ನೌಕರರು ಮನೆಯಿಂದಲೇ ಕೆಲಸ ಮಾಡಲು ಕೋರಲಾಗಿದೆ.

ಇ-ಕಾಮರ್ಸ್ ಘಟಕಗಳು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಬಹುದು.

ಬೆಳಿಗ್ಗೆ 6 ರಿಂದ 10 ರ ನಡುವಿನ ಹೋಟೆಲ್‌ಗಳಲ್ಲಿ ಟೇಕ್‌ಅವೇ ಸೇವೆಗಳನ್ನು ಮಾತ್ರ ಅನುಮತಿಸಲಾಗುತ್ತದೆ. ಮಧ್ಯಾಹ್ನ 12 ರಿಂದ 3ರ ವರೆಗೆ; ಸಂಜೆ 6 ರರಿಂದ 9ರ ಸಮಯದಲ್ಲಿ ಸ್ವಿಗ್ಗಿ ಮತ್ತು ಜೊಮಾಟೊದಂತಹ ಸಂಸ್ಥೆಗಳು ಆಹಾರವನ್ನು ತಲುಪಿಸಬಹುದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದ್ದರೆ

ಪೆಟ್ರೋಲ್ ಮತ್ತು ಡೀಸೆಲ್ ಬಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಎಟಿಎಂ ಮತ್ತು ಸಂಬಂಧಿತ ಸೇವೆಗಳು ಲಭ್ಯವಿರುತ್ತವೆ. ಕೃಷಿ ಉತ್ಪನ್ನಗಳು ಮತ್ತು ಇನ್ಪುಟ್ ವಸ್ತುಗಳ ಸಾಗಣೆಗೆ ಅವಕಾಶ ನೀಡಲಾಗುವುದು. ಅಗತ್ಯ ಸರಕುಗಳನ್ನು ಸಾಗಿಸುವ ಸರಕು ವಾಹನಗಳಿಗೆ ಅವಕಾಶ ನೀಡಲಾಗುವುದು.

ಇ-ನೋಂದಣಿ ಮಾಡಿದವರಿಗೆ ಅಂತ್ಯ ಸಂಸ್ಕಾರದ ವಿಧಿಗಳಿಗೆ ಹಾಜರಾಗಲು ಮಾತ್ರ ಅಂತರ ಜಿಲ್ಲೆಯ ಪ್ರಯಾಣವನ್ನು ಅನುಮತಿಸಲಾಗುತ್ತದೆ. ವೈದ್ಯಕೀಯ ಕಾರಣಕ್ಕಾಗಿ ಜಿಲ್ಲೆಯೊಳಗೆ ಪ್ರಯಾಣಿಸಲು ಇ-ನೋಂದಣಿ ಅಗತ್ಯವಿರುವುದಿಲ್ಲ.

ಪತ್ರಿಕೆ ಮತ್ತು ಮಾಧ್ಯಮ ಕಾರ್ಯನಿರ್ವಹಿಸಬಹುದು. ನಿರಂತರ ಪ್ರಕ್ರಿಯೆಯ ಕೈಗಾರಿಕೆಗಳು, ಅಗತ್ಯ ಸರಕುಗಳನ್ನು ತಯಾರಿಸುವ ಕೈಗಾರಿಕೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸಬಹುದು. ಮಾಲ್‌ಗಳಿಗೆ ಯಾವುದೇ ಅನುಮತಿ ಇಲ್ಲ.

ಇದನ್ನೂ ಓದಿ: ‘ಇನ್ನು ಮುಂದೆ ನನ್ನ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಿಲ್ಲ’ – ಜೈಲಿನಿಂದಲೆ ಸ್ಪರ್ಧಿಸಿ ಶಾಸಕನಾದ ಹೋರಾಟಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...