Homeಕರೋನಾ ತಲ್ಲಣತಮಿಳುನಾಡು: ಮೇ 24 ರ ನಂತರವು ಒಂದು ವಾರ ಕಠಿಣ ಲಾಕ್‌ಡೌನ್‌

ತಮಿಳುನಾಡು: ಮೇ 24 ರ ನಂತರವು ಒಂದು ವಾರ ಕಠಿಣ ಲಾಕ್‌ಡೌನ್‌

- Advertisement -
- Advertisement -

ಮೇ 24 ರ ನಂತರವು ಒಂದು ವಾರ ರಾಜ್ಯದಲ್ಲಿ ಯಾವುದೇ ರಿಯಾಯಿತಿಗಳಿಲ್ಲದೆ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶನಿವಾರ ಪ್ರಕಟಿಸಿದ್ದಾರೆ.

ಈ ಕಠಿಣ ಲಾಕ್‌ಡೌನ್‌ಗೆ ಸಾರ್ವಜನಿಕರು ತಮ್ಮನ್ನು ಸಿದ್ಧಪಡಿಸಿಕೊಳ್ಳಲು, ಇಂದು (ಶನಿವಾರ) ರಾತ್ರಿ 9 ಗಂಟೆಯವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲಾಗುತ್ತದೆ. ಅಂತೆಯೇ, ಎಲ್ಲಾ ಅಂಗಡಿಗಳು ಭಾನುವಾರ (ಮೇ 23) ಬೆಳಿಗ್ಗೆ 6 ರಿಂದ ರಾತ್ರಿ 9 ರವರೆಗೆ ಕಾರ್ಯನಿರ್ವಹಿಸಬಹುದು. ತಮ್ಮ ಊರುಗಳಿಗೆ ತೆರಳುತ್ತಿರುವವರ ಹಿತದೃಷ್ಟಿಯಿಂದ ಶನಿವಾರ ಮತ್ತು ಭಾನುವಾರ ಖಾಸಗಿ ಮತ್ತು ಸರ್ಕಾರಿ ಬಸ್‌ಗಳನ್ನು ಓಡಿಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕಠಿಣ ಲಾಕ್‌ಡೌನ್ ಸಮಯದಲ್ಲಿ ಔಷಧಾಲಯಗಳು, ಸಿದ್ದೌಷಧ ಅಂಗಡಿಗಳು, ಪಶುವೈದ್ಯಕೀಯ ಔಷಧಾಲಯಗಳು, ಹಾಲು ಸರಬರಾಜು, ಕುಡಿಯುವ ನೀರು ಸರಬರಾಜು ಮತ್ತು ಪತ್ರಿಕೆಗಳ ಸರಬರಾಜನ್ನು ಮಾತ್ರ ಅನುಮತಿಸಲಾಗುತ್ತದೆ.

ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್‌ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ

ಚೆನ್ನೈನ ತೋಟಗಾರಿಕೆ ಇಲಾಖೆಯ ಮೂಲಕ ವಾಹನಗಳಲ್ಲಿ ಎಲ್ಲಾ ಜಿಲ್ಲೆಗಳಿಗೆ ತರಕಾರಿ ಮತ್ತು ಹಣ್ಣುಗಳನ್ನು ಸಾರ್ವಜನಿಕರಿಗೆ ಸರಬರಾಜು ಮಾಡಲಾಗುವುದು.

ಅಗತ್ಯ ಸೇವೆಗಳ ಇಲಾಖೆಗಳು ಮಾತ್ರ ಕಾರ್ಯನಿರ್ವಹಿಸಲಿವೆ:

ಖಾಸಗಿ ಉದ್ಯಮಗಳು, ಬ್ಯಾಂಕುಗಳು, ವಿಮಾ ಕಂಪನಿಗಳು ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಗಳ ನೌಕರರು ಮನೆಯಿಂದಲೇ ಕೆಲಸ ಮಾಡಲು ಕೋರಲಾಗಿದೆ.

ಇ-ಕಾಮರ್ಸ್ ಘಟಕಗಳು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಬಹುದು.

ಬೆಳಿಗ್ಗೆ 6 ರಿಂದ 10 ರ ನಡುವಿನ ಹೋಟೆಲ್‌ಗಳಲ್ಲಿ ಟೇಕ್‌ಅವೇ ಸೇವೆಗಳನ್ನು ಮಾತ್ರ ಅನುಮತಿಸಲಾಗುತ್ತದೆ. ಮಧ್ಯಾಹ್ನ 12 ರಿಂದ 3ರ ವರೆಗೆ; ಸಂಜೆ 6 ರರಿಂದ 9ರ ಸಮಯದಲ್ಲಿ ಸ್ವಿಗ್ಗಿ ಮತ್ತು ಜೊಮಾಟೊದಂತಹ ಸಂಸ್ಥೆಗಳು ಆಹಾರವನ್ನು ತಲುಪಿಸಬಹುದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದ್ದರೆ

ಪೆಟ್ರೋಲ್ ಮತ್ತು ಡೀಸೆಲ್ ಬಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಎಟಿಎಂ ಮತ್ತು ಸಂಬಂಧಿತ ಸೇವೆಗಳು ಲಭ್ಯವಿರುತ್ತವೆ. ಕೃಷಿ ಉತ್ಪನ್ನಗಳು ಮತ್ತು ಇನ್ಪುಟ್ ವಸ್ತುಗಳ ಸಾಗಣೆಗೆ ಅವಕಾಶ ನೀಡಲಾಗುವುದು. ಅಗತ್ಯ ಸರಕುಗಳನ್ನು ಸಾಗಿಸುವ ಸರಕು ವಾಹನಗಳಿಗೆ ಅವಕಾಶ ನೀಡಲಾಗುವುದು.

ಇ-ನೋಂದಣಿ ಮಾಡಿದವರಿಗೆ ಅಂತ್ಯ ಸಂಸ್ಕಾರದ ವಿಧಿಗಳಿಗೆ ಹಾಜರಾಗಲು ಮಾತ್ರ ಅಂತರ ಜಿಲ್ಲೆಯ ಪ್ರಯಾಣವನ್ನು ಅನುಮತಿಸಲಾಗುತ್ತದೆ. ವೈದ್ಯಕೀಯ ಕಾರಣಕ್ಕಾಗಿ ಜಿಲ್ಲೆಯೊಳಗೆ ಪ್ರಯಾಣಿಸಲು ಇ-ನೋಂದಣಿ ಅಗತ್ಯವಿರುವುದಿಲ್ಲ.

ಪತ್ರಿಕೆ ಮತ್ತು ಮಾಧ್ಯಮ ಕಾರ್ಯನಿರ್ವಹಿಸಬಹುದು. ನಿರಂತರ ಪ್ರಕ್ರಿಯೆಯ ಕೈಗಾರಿಕೆಗಳು, ಅಗತ್ಯ ಸರಕುಗಳನ್ನು ತಯಾರಿಸುವ ಕೈಗಾರಿಕೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸಬಹುದು. ಮಾಲ್‌ಗಳಿಗೆ ಯಾವುದೇ ಅನುಮತಿ ಇಲ್ಲ.

ಇದನ್ನೂ ಓದಿ: ‘ಇನ್ನು ಮುಂದೆ ನನ್ನ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಿಲ್ಲ’ – ಜೈಲಿನಿಂದಲೆ ಸ್ಪರ್ಧಿಸಿ ಶಾಸಕನಾದ ಹೋರಾಟಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...