Homeಕರೋನಾ ತಲ್ಲಣತಮಿಳುನಾಡು: ಮೇ 24 ರ ನಂತರವು ಒಂದು ವಾರ ಕಠಿಣ ಲಾಕ್‌ಡೌನ್‌

ತಮಿಳುನಾಡು: ಮೇ 24 ರ ನಂತರವು ಒಂದು ವಾರ ಕಠಿಣ ಲಾಕ್‌ಡೌನ್‌

- Advertisement -
- Advertisement -

ಮೇ 24 ರ ನಂತರವು ಒಂದು ವಾರ ರಾಜ್ಯದಲ್ಲಿ ಯಾವುದೇ ರಿಯಾಯಿತಿಗಳಿಲ್ಲದೆ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶನಿವಾರ ಪ್ರಕಟಿಸಿದ್ದಾರೆ.

ಈ ಕಠಿಣ ಲಾಕ್‌ಡೌನ್‌ಗೆ ಸಾರ್ವಜನಿಕರು ತಮ್ಮನ್ನು ಸಿದ್ಧಪಡಿಸಿಕೊಳ್ಳಲು, ಇಂದು (ಶನಿವಾರ) ರಾತ್ರಿ 9 ಗಂಟೆಯವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲಾಗುತ್ತದೆ. ಅಂತೆಯೇ, ಎಲ್ಲಾ ಅಂಗಡಿಗಳು ಭಾನುವಾರ (ಮೇ 23) ಬೆಳಿಗ್ಗೆ 6 ರಿಂದ ರಾತ್ರಿ 9 ರವರೆಗೆ ಕಾರ್ಯನಿರ್ವಹಿಸಬಹುದು. ತಮ್ಮ ಊರುಗಳಿಗೆ ತೆರಳುತ್ತಿರುವವರ ಹಿತದೃಷ್ಟಿಯಿಂದ ಶನಿವಾರ ಮತ್ತು ಭಾನುವಾರ ಖಾಸಗಿ ಮತ್ತು ಸರ್ಕಾರಿ ಬಸ್‌ಗಳನ್ನು ಓಡಿಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕಠಿಣ ಲಾಕ್‌ಡೌನ್ ಸಮಯದಲ್ಲಿ ಔಷಧಾಲಯಗಳು, ಸಿದ್ದೌಷಧ ಅಂಗಡಿಗಳು, ಪಶುವೈದ್ಯಕೀಯ ಔಷಧಾಲಯಗಳು, ಹಾಲು ಸರಬರಾಜು, ಕುಡಿಯುವ ನೀರು ಸರಬರಾಜು ಮತ್ತು ಪತ್ರಿಕೆಗಳ ಸರಬರಾಜನ್ನು ಮಾತ್ರ ಅನುಮತಿಸಲಾಗುತ್ತದೆ.

ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್‌ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ

ಚೆನ್ನೈನ ತೋಟಗಾರಿಕೆ ಇಲಾಖೆಯ ಮೂಲಕ ವಾಹನಗಳಲ್ಲಿ ಎಲ್ಲಾ ಜಿಲ್ಲೆಗಳಿಗೆ ತರಕಾರಿ ಮತ್ತು ಹಣ್ಣುಗಳನ್ನು ಸಾರ್ವಜನಿಕರಿಗೆ ಸರಬರಾಜು ಮಾಡಲಾಗುವುದು.

ಅಗತ್ಯ ಸೇವೆಗಳ ಇಲಾಖೆಗಳು ಮಾತ್ರ ಕಾರ್ಯನಿರ್ವಹಿಸಲಿವೆ:

ಖಾಸಗಿ ಉದ್ಯಮಗಳು, ಬ್ಯಾಂಕುಗಳು, ವಿಮಾ ಕಂಪನಿಗಳು ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಗಳ ನೌಕರರು ಮನೆಯಿಂದಲೇ ಕೆಲಸ ಮಾಡಲು ಕೋರಲಾಗಿದೆ.

ಇ-ಕಾಮರ್ಸ್ ಘಟಕಗಳು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಬಹುದು.

ಬೆಳಿಗ್ಗೆ 6 ರಿಂದ 10 ರ ನಡುವಿನ ಹೋಟೆಲ್‌ಗಳಲ್ಲಿ ಟೇಕ್‌ಅವೇ ಸೇವೆಗಳನ್ನು ಮಾತ್ರ ಅನುಮತಿಸಲಾಗುತ್ತದೆ. ಮಧ್ಯಾಹ್ನ 12 ರಿಂದ 3ರ ವರೆಗೆ; ಸಂಜೆ 6 ರರಿಂದ 9ರ ಸಮಯದಲ್ಲಿ ಸ್ವಿಗ್ಗಿ ಮತ್ತು ಜೊಮಾಟೊದಂತಹ ಸಂಸ್ಥೆಗಳು ಆಹಾರವನ್ನು ತಲುಪಿಸಬಹುದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದ್ದರೆ

ಪೆಟ್ರೋಲ್ ಮತ್ತು ಡೀಸೆಲ್ ಬಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಎಟಿಎಂ ಮತ್ತು ಸಂಬಂಧಿತ ಸೇವೆಗಳು ಲಭ್ಯವಿರುತ್ತವೆ. ಕೃಷಿ ಉತ್ಪನ್ನಗಳು ಮತ್ತು ಇನ್ಪುಟ್ ವಸ್ತುಗಳ ಸಾಗಣೆಗೆ ಅವಕಾಶ ನೀಡಲಾಗುವುದು. ಅಗತ್ಯ ಸರಕುಗಳನ್ನು ಸಾಗಿಸುವ ಸರಕು ವಾಹನಗಳಿಗೆ ಅವಕಾಶ ನೀಡಲಾಗುವುದು.

ಇ-ನೋಂದಣಿ ಮಾಡಿದವರಿಗೆ ಅಂತ್ಯ ಸಂಸ್ಕಾರದ ವಿಧಿಗಳಿಗೆ ಹಾಜರಾಗಲು ಮಾತ್ರ ಅಂತರ ಜಿಲ್ಲೆಯ ಪ್ರಯಾಣವನ್ನು ಅನುಮತಿಸಲಾಗುತ್ತದೆ. ವೈದ್ಯಕೀಯ ಕಾರಣಕ್ಕಾಗಿ ಜಿಲ್ಲೆಯೊಳಗೆ ಪ್ರಯಾಣಿಸಲು ಇ-ನೋಂದಣಿ ಅಗತ್ಯವಿರುವುದಿಲ್ಲ.

ಪತ್ರಿಕೆ ಮತ್ತು ಮಾಧ್ಯಮ ಕಾರ್ಯನಿರ್ವಹಿಸಬಹುದು. ನಿರಂತರ ಪ್ರಕ್ರಿಯೆಯ ಕೈಗಾರಿಕೆಗಳು, ಅಗತ್ಯ ಸರಕುಗಳನ್ನು ತಯಾರಿಸುವ ಕೈಗಾರಿಕೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸಬಹುದು. ಮಾಲ್‌ಗಳಿಗೆ ಯಾವುದೇ ಅನುಮತಿ ಇಲ್ಲ.

ಇದನ್ನೂ ಓದಿ: ‘ಇನ್ನು ಮುಂದೆ ನನ್ನ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಿಲ್ಲ’ – ಜೈಲಿನಿಂದಲೆ ಸ್ಪರ್ಧಿಸಿ ಶಾಸಕನಾದ ಹೋರಾಟಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...