Homeಕರೋನಾ ತಲ್ಲಣತಮಿಳುನಾಡು: ಮೇ 24 ರ ನಂತರವು ಒಂದು ವಾರ ಕಠಿಣ ಲಾಕ್‌ಡೌನ್‌

ತಮಿಳುನಾಡು: ಮೇ 24 ರ ನಂತರವು ಒಂದು ವಾರ ಕಠಿಣ ಲಾಕ್‌ಡೌನ್‌

- Advertisement -
- Advertisement -

ಮೇ 24 ರ ನಂತರವು ಒಂದು ವಾರ ರಾಜ್ಯದಲ್ಲಿ ಯಾವುದೇ ರಿಯಾಯಿತಿಗಳಿಲ್ಲದೆ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶನಿವಾರ ಪ್ರಕಟಿಸಿದ್ದಾರೆ.

ಈ ಕಠಿಣ ಲಾಕ್‌ಡೌನ್‌ಗೆ ಸಾರ್ವಜನಿಕರು ತಮ್ಮನ್ನು ಸಿದ್ಧಪಡಿಸಿಕೊಳ್ಳಲು, ಇಂದು (ಶನಿವಾರ) ರಾತ್ರಿ 9 ಗಂಟೆಯವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲಾಗುತ್ತದೆ. ಅಂತೆಯೇ, ಎಲ್ಲಾ ಅಂಗಡಿಗಳು ಭಾನುವಾರ (ಮೇ 23) ಬೆಳಿಗ್ಗೆ 6 ರಿಂದ ರಾತ್ರಿ 9 ರವರೆಗೆ ಕಾರ್ಯನಿರ್ವಹಿಸಬಹುದು. ತಮ್ಮ ಊರುಗಳಿಗೆ ತೆರಳುತ್ತಿರುವವರ ಹಿತದೃಷ್ಟಿಯಿಂದ ಶನಿವಾರ ಮತ್ತು ಭಾನುವಾರ ಖಾಸಗಿ ಮತ್ತು ಸರ್ಕಾರಿ ಬಸ್‌ಗಳನ್ನು ಓಡಿಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕಠಿಣ ಲಾಕ್‌ಡೌನ್ ಸಮಯದಲ್ಲಿ ಔಷಧಾಲಯಗಳು, ಸಿದ್ದೌಷಧ ಅಂಗಡಿಗಳು, ಪಶುವೈದ್ಯಕೀಯ ಔಷಧಾಲಯಗಳು, ಹಾಲು ಸರಬರಾಜು, ಕುಡಿಯುವ ನೀರು ಸರಬರಾಜು ಮತ್ತು ಪತ್ರಿಕೆಗಳ ಸರಬರಾಜನ್ನು ಮಾತ್ರ ಅನುಮತಿಸಲಾಗುತ್ತದೆ.

ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್‌ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ

ಚೆನ್ನೈನ ತೋಟಗಾರಿಕೆ ಇಲಾಖೆಯ ಮೂಲಕ ವಾಹನಗಳಲ್ಲಿ ಎಲ್ಲಾ ಜಿಲ್ಲೆಗಳಿಗೆ ತರಕಾರಿ ಮತ್ತು ಹಣ್ಣುಗಳನ್ನು ಸಾರ್ವಜನಿಕರಿಗೆ ಸರಬರಾಜು ಮಾಡಲಾಗುವುದು.

ಅಗತ್ಯ ಸೇವೆಗಳ ಇಲಾಖೆಗಳು ಮಾತ್ರ ಕಾರ್ಯನಿರ್ವಹಿಸಲಿವೆ:

ಖಾಸಗಿ ಉದ್ಯಮಗಳು, ಬ್ಯಾಂಕುಗಳು, ವಿಮಾ ಕಂಪನಿಗಳು ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಗಳ ನೌಕರರು ಮನೆಯಿಂದಲೇ ಕೆಲಸ ಮಾಡಲು ಕೋರಲಾಗಿದೆ.

ಇ-ಕಾಮರ್ಸ್ ಘಟಕಗಳು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸಬಹುದು.

ಬೆಳಿಗ್ಗೆ 6 ರಿಂದ 10 ರ ನಡುವಿನ ಹೋಟೆಲ್‌ಗಳಲ್ಲಿ ಟೇಕ್‌ಅವೇ ಸೇವೆಗಳನ್ನು ಮಾತ್ರ ಅನುಮತಿಸಲಾಗುತ್ತದೆ. ಮಧ್ಯಾಹ್ನ 12 ರಿಂದ 3ರ ವರೆಗೆ; ಸಂಜೆ 6 ರರಿಂದ 9ರ ಸಮಯದಲ್ಲಿ ಸ್ವಿಗ್ಗಿ ಮತ್ತು ಜೊಮಾಟೊದಂತಹ ಸಂಸ್ಥೆಗಳು ಆಹಾರವನ್ನು ತಲುಪಿಸಬಹುದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದ್ದರೆ

ಪೆಟ್ರೋಲ್ ಮತ್ತು ಡೀಸೆಲ್ ಬಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಎಟಿಎಂ ಮತ್ತು ಸಂಬಂಧಿತ ಸೇವೆಗಳು ಲಭ್ಯವಿರುತ್ತವೆ. ಕೃಷಿ ಉತ್ಪನ್ನಗಳು ಮತ್ತು ಇನ್ಪುಟ್ ವಸ್ತುಗಳ ಸಾಗಣೆಗೆ ಅವಕಾಶ ನೀಡಲಾಗುವುದು. ಅಗತ್ಯ ಸರಕುಗಳನ್ನು ಸಾಗಿಸುವ ಸರಕು ವಾಹನಗಳಿಗೆ ಅವಕಾಶ ನೀಡಲಾಗುವುದು.

ಇ-ನೋಂದಣಿ ಮಾಡಿದವರಿಗೆ ಅಂತ್ಯ ಸಂಸ್ಕಾರದ ವಿಧಿಗಳಿಗೆ ಹಾಜರಾಗಲು ಮಾತ್ರ ಅಂತರ ಜಿಲ್ಲೆಯ ಪ್ರಯಾಣವನ್ನು ಅನುಮತಿಸಲಾಗುತ್ತದೆ. ವೈದ್ಯಕೀಯ ಕಾರಣಕ್ಕಾಗಿ ಜಿಲ್ಲೆಯೊಳಗೆ ಪ್ರಯಾಣಿಸಲು ಇ-ನೋಂದಣಿ ಅಗತ್ಯವಿರುವುದಿಲ್ಲ.

ಪತ್ರಿಕೆ ಮತ್ತು ಮಾಧ್ಯಮ ಕಾರ್ಯನಿರ್ವಹಿಸಬಹುದು. ನಿರಂತರ ಪ್ರಕ್ರಿಯೆಯ ಕೈಗಾರಿಕೆಗಳು, ಅಗತ್ಯ ಸರಕುಗಳನ್ನು ತಯಾರಿಸುವ ಕೈಗಾರಿಕೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸಬಹುದು. ಮಾಲ್‌ಗಳಿಗೆ ಯಾವುದೇ ಅನುಮತಿ ಇಲ್ಲ.

ಇದನ್ನೂ ಓದಿ: ‘ಇನ್ನು ಮುಂದೆ ನನ್ನ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಿಲ್ಲ’ – ಜೈಲಿನಿಂದಲೆ ಸ್ಪರ್ಧಿಸಿ ಶಾಸಕನಾದ ಹೋರಾಟಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...