Homeಮುಖಪುಟತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ....

ತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ. ಚಂದ್ರು

ಎರಡನೇ ತಿಂಗಳಿಗೆ ಕಾಲಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರ ಹೋರಾಟ

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನ ಸ್ಯಾಮ್‌ಸಂಗ್‌ ಘಟಕದಲ್ಲಿ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ತಿಂಗಳಿಗೆ ಕಾಲಿಟ್ಟಿದ್ದು, ತಮಿಳುನಾಡು ಸರ್ಕಾರ ಸಮಸ್ಯೆ ಪರಿಹರಿಸಲು ಏಕೆ ವಿಳಂಬ ಮಾಡುತ್ತಿದೆ? ಎಂದು ಕಾರ್ಮಿಕ ಕಾನೂನು ಮತ್ತು ಕೈಗಾರಿಕಾ ವಿವಾದಗಳ ತಜ್ಞ ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ.ಚಂದ್ರು ಪ್ರಶ್ನಿಸಿದ್ದಾರೆ.

ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ನೋಂದಣಿಯು ಸೆಪ್ಟೆಂಬರ್ 9ರಿಂದ ಪ್ರತಿಭಟನೆ ನಡೆಸುತ್ತಿರುವ ನೂರಾರು ಸ್ಯಾಮ್‌ಸಂಗ್ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಅವರು ಕಳೆದ ಜುಲೈ 25 ರಂದು ರಾಜ್ಯ ಕಾರ್ಮಿಕ ಇಲಾಖೆಗೆ ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ, ಇಲಾಖೆಗೆ ಅರ್ಜಿ ಕಳುಹಿಸಿದ 45 ದಿನಗಳಲ್ಲಿ ಒಕ್ಕೂಟವನ್ನು ನೋಂದಾಯಿಸಬೇಕು. ಆದರೆ, ಸರ್ಕಾರ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಕಾರ್ಮಿಕರನ್ನು ಕೆರಳಿಸಿದೆ.

ಪ್ರಸ್ತಾವಿತ ಕಾರ್ಮಿಕ ಒಕ್ಕೂಟದ ಹೆಸರಿನಲ್ಲಿ ‘ಸ್ಯಾಮ್‌ಸಂಗ್’ ಎಂದು ಕಂಪನಿಯ ಹೆಸರಿರುವುದು ಮತ್ತು ಕಾರ್ಮಿಕರ ಹೋರಾಟದ ಹಿಂದೆ ಸಿಪಿಐ (ಎಂ) ಬೆಂಬಲಿತ ಕಾರ್ಮಿಕ ಸಂಘಟನೆ ಸಿಐಟಿಯು ಇರುವುದರಿಂದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನಲಾಗಿದೆ.

“ಭಾರತದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುವ ವಿದೇಶಿ ಕಂಪನಿಗಳು ಸಾಮಾನ್ಯವಾಗಿ ಯಾವುದೇ ಕಾರ್ಮಿಕ ಒಕ್ಕೂಟಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂಬುವುದು ಮೊಟ್ಟ ಮೊದಲು ಬೇಡಿಕೆಯಾಗಿರುತ್ತದೆ” ಎಂದು ದಿ ನ್ಯೂಸ್ ಮಿನಿಟ್‌ನ ಶಬೀರ್ ಅಹ್ಮದ್ ಅವರೊಂದಿಗಿನ ಸಂದರ್ಶನದಲ್ಲಿ ನ್ಯಾಯಮೂರ್ತಿ ಚಂದ್ರು ಹೇಳಿದ್ದಾರೆ.

“ಸಂವಿಧಾನದ ಪ್ರಕಾರ ಒಕ್ಕೂಟ ಅಥವಾ ಸಂಘವನ್ನು ರಚಿಸುವುದು ಕಾರ್ಮಿಕರ ಮೂಲಭೂತ ಹಕ್ಕು. ಇದು 1965ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಅಂಗೀಕರಿಸಲ್ಪಟ್ಟ ಟ್ರೇಡ್ ಯೂನಿಯನ್‌ಗಳನ್ನು ಒಳಗೊಂಡಿದೆ. ಯಾವುದೇ ಕಡ್ಡಾಯ ಮಾನ್ಯತೆ ಇಲ್ಲದಿದ್ದರೂ, ಒಕ್ಕೂಟದ ನೋಂದಣಿಯನ್ನು ನಿರಾಕರಿಸಲು ಕಾರ್ಮಿಕ ನ್ಯಾಯಾಲಯಕ್ಕೆ ಯಾವುದೇ ವಿವೇಚನಾಧಿಕಾರವಿಲ್ಲ. ಟ್ರೇಡ್ ಯೂನಿಯನ್ಸ್ ಆಕ್ಟ್, 1926 ರ ಅಡಿಯಲ್ಲಿ, ಕಾರ್ಮಿಕರು ಒಟ್ಟು ಉದ್ಯೋಗಿಗಳ 10% ಅನ್ನು ಪ್ರತಿನಿಧಿಸಬೇಕು. ಹಾಗಿದ್ದಲ್ಲಿ, ಕಾರ್ಮಿಕ ಆಯುಕ್ತರು ಒಕ್ಕೂಟದ ಮಾನ್ಯತೆಗೆ ಶಿಫಾರಸು ಮಾಡಬಹುದು. ತಮಿಳುನಾಡಿನಲ್ಲಿ ಇದೇ ಮೊದಲ ಬಾರಿಗೆ ಸಮಸ್ಯೆ ಪರಿಹರಿಸಲಾಗದೆ, ಹೂಡಿಕೆಯ ರಹಸ್ಯ ಒಳ ಒಪ್ಪಂದವನ್ನು ಬಹಿರಂಗಪಡಿಸಲಾಗದೆ ಪೊಲೀಸರನ್ನು ಬಳಸಿಕೊಂಡು ಸರ್ಕಾರ ಕಾರ್ಮಿಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ” ಎಂದು ಚಂದ್ರು ತಿಳಿಸಿದ್ದಾರೆ.

“ಕಾರ್ಮಿಕ ಹಕ್ಕುಗಳು ಮತ್ತು ಸಮಸ್ಯೆಗಳ ವಿಷಯಕ್ಕೆ ಬಂದರೆ, ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಜ್ಯ ಮಟ್ಟದಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ ಎಂದಿರುವ ಚಂದ್ರು, “ಕಾರ್ಮಿಕ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರಗಳು ಸರಿಯಾದ ನೀತಿಗಳನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

“ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದರು. ಆದರೆ, ಬಳಿಕ ಅವರು ಸಂಪೂರ್ಣ ತಟಸ್ಥತೆಯನ್ನು ಕಾಯ್ದುಕೊಂಡರು. ಪ್ರಸ್ತುತ ಸರ್ಕಾರ ನಾವು ಸಮಸ್ಯೆ ಪರಿಹರಿಸುತ್ತಿದ್ದೇವೆ ಎನ್ನುತ್ತಿದೆ. ಆದರೆ, ಅವರು ಇನ್ನೂ ಕಾರ್ಮಿಕರ ಒಕ್ಕೂಟಕ್ಕೆ ಮಾನ್ಯತೆಯೇ ನೀಡಿಲ್ಲ. ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿಂದ ಕಾರ್ಮಿಕರು ನ್ಯಾಯಾಲಯದ ಮೊರೆ ಹೋಗುತ್ತಿಲ್ಲ ಎಂದು ಚಂದ್ರು ವಿವರಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನೌಕರರಿಗೆ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ನೀಡಿತ್ತು. ಈ ನಡುವೆ ಅಕ್ಟೋಬರ್ 10ರಂದು ಸಂಜೆ ತಮಿಳುನಾಡು ಪೊಲೀಸರು ಸುಮಾರು 300 ಕಾರ್ಮಿಕರನ್ನು ಬಂಧಿಸಿದ್ದರು. ಕಾರ್ಮಿಕರ ಅಕ್ರಮ ಬಂಧನದ ವಿರುದ್ದ ಸಿಐಟಿಯು ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಕಾರ್ಮಿಕರನ್ನು ಕೂಡಲೇ ಬಿಡುಗಡೆ ಮಾಡುವಂತೆ ಶ್ರೀಪೆರಂಬದೂರು ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ವಿಶೇಷ ಅರ್ಜಿಯನ್ನೂ ಸಲ್ಲಿಸಿದೆ.

ಸೌಜನ್ಯ : ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಮೂರು ತಿಂಗಳಿನಿಂದ ಬಿಡುಗಡೆಯಾಗದ ಗೌರವಧನ; ಸಂಕಷ್ಟದಲ್ಲಿ ಅಂಗನವಾಡಿ ನೌಕರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...